<p><strong>ಬೆಂಗಳೂರು:</strong> ನಗರದ ವಿವಿಧ ಕಚೇರಿಗಳು, ಹೋಟೆಲ್ ಹಾಗೂ ಶಾಲಾ–ಕಾಲೇಜುಗಳಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವುದು ನಿಂತಿಲ್ಲ. ನಗರದ ಆರ್ಟಿಒ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಇ–ಮೇಲ್ ಸಂದೇಶಗಳು ಬಂದಿದ್ದರಿಂದ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿ ಆಗಿತ್ತು.</p>.<p>ಕೋರಮಂಗಲ, ಯಶವಂತಪುರ, ರಾಜಾಜಿನಗರ ಸೇರಿ ಹಲವು ಆರ್ಟಿಒ ಕಚೇರಿಗಳಿಗೆ ‘ಗಾಯತ್ರಿ ಶಾಬಾಜ್@ಹಾಟ್ ಮೇಲ್ ಡಾಟ್ ಕಾಮ್’ ಐ.ಡಿಯಿಂದ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಕಚೇರಿ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವುಗಳು ಸ್ಫೋಟಿಸಲಿವೆ ಎಂದು ಬೆದರಿಕೆ ಒಡ್ಡಲಾಗಿತ್ತು. ದುಷ್ಕರ್ಮಿಗಳು ಕಳುಹಿಸಿದ ಇ–ಮೇಲ್ ಸಂದೇಶವನ್ನು ಗಮನಿಸಿದ್ದ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.</p>.<p>ಬಾಂಬ್ ನಿಷ್ಕ್ರಿಯ ದಳ, ಬಾಂಬ್ ತಪಾಸಣೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಯಾವುದೇ ಸ್ಫೋಟಕ ವಸ್ತುಗಳಾಗಲಿ, ರಾಸಾಯನಿಕ ಪದಾರ್ಥಗಳಾಗಲಿ ಪತ್ತೆ ಆಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಕೋರಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್. ದೀಪಕ್ ಅವರು ಬಾಂಬ್ ಬೆದರಿಕೆ ಇ–ಮೇಲ್ ಸಂದೇಶ ಬಂದಿರುವ ಸಂಬಂಧ ದೂರು ನೀಡಿದ್ದಾರೆ. </p>.<p>‘ನಮ್ಮ ಕಚೇರಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನೂರಾರು ಸಾರ್ವಜನಿಕರು ಕೆಲಸದ ನಿಮಿತ್ತ ಬರುತ್ತಾರೆ. ಅಗತ್ಯ ಕ್ರಮ ಕೈಗೊಳ್ಳುವಂತೆ ದೀಪಕ್ ದೂರಿನಲ್ಲಿ ಮನವಿ ಮಾಡಿದ್ದಾರೆ. ಇ–ಮೇಲ್ ಐಡಿ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>ಈ ಸಂಬಂಧ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ವಿವಿಧ ಕಚೇರಿಗಳು, ಹೋಟೆಲ್ ಹಾಗೂ ಶಾಲಾ–ಕಾಲೇಜುಗಳಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವುದು ನಿಂತಿಲ್ಲ. ನಗರದ ಆರ್ಟಿಒ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಇ–ಮೇಲ್ ಸಂದೇಶಗಳು ಬಂದಿದ್ದರಿಂದ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿ ಆಗಿತ್ತು.</p>.<p>ಕೋರಮಂಗಲ, ಯಶವಂತಪುರ, ರಾಜಾಜಿನಗರ ಸೇರಿ ಹಲವು ಆರ್ಟಿಒ ಕಚೇರಿಗಳಿಗೆ ‘ಗಾಯತ್ರಿ ಶಾಬಾಜ್@ಹಾಟ್ ಮೇಲ್ ಡಾಟ್ ಕಾಮ್’ ಐ.ಡಿಯಿಂದ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಕಚೇರಿ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವುಗಳು ಸ್ಫೋಟಿಸಲಿವೆ ಎಂದು ಬೆದರಿಕೆ ಒಡ್ಡಲಾಗಿತ್ತು. ದುಷ್ಕರ್ಮಿಗಳು ಕಳುಹಿಸಿದ ಇ–ಮೇಲ್ ಸಂದೇಶವನ್ನು ಗಮನಿಸಿದ್ದ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.</p>.<p>ಬಾಂಬ್ ನಿಷ್ಕ್ರಿಯ ದಳ, ಬಾಂಬ್ ತಪಾಸಣೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಯಾವುದೇ ಸ್ಫೋಟಕ ವಸ್ತುಗಳಾಗಲಿ, ರಾಸಾಯನಿಕ ಪದಾರ್ಥಗಳಾಗಲಿ ಪತ್ತೆ ಆಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಕೋರಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್. ದೀಪಕ್ ಅವರು ಬಾಂಬ್ ಬೆದರಿಕೆ ಇ–ಮೇಲ್ ಸಂದೇಶ ಬಂದಿರುವ ಸಂಬಂಧ ದೂರು ನೀಡಿದ್ದಾರೆ. </p>.<p>‘ನಮ್ಮ ಕಚೇರಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನೂರಾರು ಸಾರ್ವಜನಿಕರು ಕೆಲಸದ ನಿಮಿತ್ತ ಬರುತ್ತಾರೆ. ಅಗತ್ಯ ಕ್ರಮ ಕೈಗೊಳ್ಳುವಂತೆ ದೀಪಕ್ ದೂರಿನಲ್ಲಿ ಮನವಿ ಮಾಡಿದ್ದಾರೆ. ಇ–ಮೇಲ್ ಐಡಿ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>ಈ ಸಂಬಂಧ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>