‘ಪ್ರಜಾವಾಣಿ’ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಅತಿಥಿಗಳಾಗಿ ಪೆಂಟಗಾನ್ ಸ್ಪೇಸ್ ಸಂಸ್ಥೆಯ ಸಂಸ್ಥಾಪಕ ರವಿಶಂಕರ್ ಆರಾಧ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಬನಶಂಕರಿ ವಿ.ಅಂಗಡಿ, ಲೇಖಕಿ ಎಂ.ಎಸ್.ವಿದ್ಯಾ, ರಂಗ ನಿರ್ದೇಶಕ ಶ್ರೀಪಾದ ಭಟ್, ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಪತ್ರಕರ್ತ ಜೋಗಿ, ಬರಹಗಾರ ಅಭಿಷೇಕ್ ಅಯ್ಯಂಗಾರ್, ನಟಿ ಸುಮನ್ ನಗರ್ಕರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.