<p><strong>ಬೆಂಗಳೂರು</strong>: ನಗರದಲ್ಲಿರುವ ಪಾದಚಾರಿ ಮೇಲ್ಸೇತುವೆಗಳಲ್ಲಿ (ಸ್ಕೈವಾಕ್) ಸೋಮವಾರ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ನಡೆಸಿದರು.<br><br>ನಗರದ ಜನನಿಬಿಡ ಪ್ರದೇಶ, ಪ್ರಮುಖ ಜಂಕ್ಷನ್, ಬಸ್ ನಿಲ್ದಾಣಗಳ ಬಳಿ ಸೇರಿ 81 ಪಾದಚಾರಿ ಮೇಲ್ಸೇತುವೆಗಳಿವೆ. ಇಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಕ್ರಮ ವಹಿಸುವಂತೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. </p>.<p>ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ, ಹೊಸೂರು ರಸ್ತೆ, ಹಳೆ ಮದ್ರಾಸ್ ರಸ್ತೆ, ಮಣಿಪಾಲ್ ಆಸ್ಪತ್ರೆ, ಮಾಗಡಿ ರಸ್ತೆ, ನಾಗರಭಾವಿ ಮುಖ್ಯ ರಸ್ತೆ, ಮೈಸೂರು ರಸ್ತೆ, ಟಿನ್ ಪ್ಯಾಕ್ಟರಿ, ಬೆಳ್ಳಂದೂರು ಸಿಂಗಸಂದ್ರ ಸೇರಿದಂತೆ 77 ಸೈವಾಕ್ಗಳಲ್ಲಿ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ನಡೆಸಿದರು.</p>.<p>ಪ್ಲಾಸ್ಟಿಕ್ ಕವರ್, ಬಾಟಲ್ಗಳನ್ನು ಬಿಸಾಡುವುದು, ಉಗುಳುವುದು, ಭಿತ್ತಿಪತ್ರಗಳನ್ನು ಅಂಟಿಸುವುದು ಸೇರಿದಂತೆ ಸ್ವಚ್ಛತೆಗೆ ತೊಡಕುಂಟಾಗುವ ಕ್ರಿಯೆಗಳನ್ನು ಪಾದಚಾರಿ ಮೇಲ್ಸೇತುವೆ ಬಳಕೆದಾರರು ಮಾಡಬಾರದು ಎಂದು ಮನವಿ ಮಾಡಲಾಯಿತು.</p>.<p><strong>ನಿರ್ವಹಣೆಗೆ ಸೂಚನೆ:</strong> ನಗರದಲ್ಲಿ ಪಾದಚಾರಿ ಮೇಲ್ಸೇತುವೆಗಳನ್ನು ಬಿಬಿಎಂಪಿ ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ ವತಿಯಿಂದ ಸ್ಥಾಪಿಸಲಾಗುತ್ತಿದೆ. ಈ ಪೈಕಿ ಪಾಲಿಕೆಯ ಟಿಇಸಿ ವಿಭಾಗದಿಂದ 16 ಹಾಗೂ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಅಡಿಯಲ್ಲಿ 65 ಸ್ಕೈವಾಕ್ಗಳಿದ್ದು, ಎಲ್ಲ ಸ್ಕೈವಾಕ್ಗಳನ್ನು ಸರಿಯಾಗಿ ನಿರ್ವಹಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿರುವ ಪಾದಚಾರಿ ಮೇಲ್ಸೇತುವೆಗಳಲ್ಲಿ (ಸ್ಕೈವಾಕ್) ಸೋಮವಾರ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ನಡೆಸಿದರು.<br><br>ನಗರದ ಜನನಿಬಿಡ ಪ್ರದೇಶ, ಪ್ರಮುಖ ಜಂಕ್ಷನ್, ಬಸ್ ನಿಲ್ದಾಣಗಳ ಬಳಿ ಸೇರಿ 81 ಪಾದಚಾರಿ ಮೇಲ್ಸೇತುವೆಗಳಿವೆ. ಇಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಕ್ರಮ ವಹಿಸುವಂತೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. </p>.<p>ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ, ಹೊಸೂರು ರಸ್ತೆ, ಹಳೆ ಮದ್ರಾಸ್ ರಸ್ತೆ, ಮಣಿಪಾಲ್ ಆಸ್ಪತ್ರೆ, ಮಾಗಡಿ ರಸ್ತೆ, ನಾಗರಭಾವಿ ಮುಖ್ಯ ರಸ್ತೆ, ಮೈಸೂರು ರಸ್ತೆ, ಟಿನ್ ಪ್ಯಾಕ್ಟರಿ, ಬೆಳ್ಳಂದೂರು ಸಿಂಗಸಂದ್ರ ಸೇರಿದಂತೆ 77 ಸೈವಾಕ್ಗಳಲ್ಲಿ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ನಡೆಸಿದರು.</p>.<p>ಪ್ಲಾಸ್ಟಿಕ್ ಕವರ್, ಬಾಟಲ್ಗಳನ್ನು ಬಿಸಾಡುವುದು, ಉಗುಳುವುದು, ಭಿತ್ತಿಪತ್ರಗಳನ್ನು ಅಂಟಿಸುವುದು ಸೇರಿದಂತೆ ಸ್ವಚ್ಛತೆಗೆ ತೊಡಕುಂಟಾಗುವ ಕ್ರಿಯೆಗಳನ್ನು ಪಾದಚಾರಿ ಮೇಲ್ಸೇತುವೆ ಬಳಕೆದಾರರು ಮಾಡಬಾರದು ಎಂದು ಮನವಿ ಮಾಡಲಾಯಿತು.</p>.<p><strong>ನಿರ್ವಹಣೆಗೆ ಸೂಚನೆ:</strong> ನಗರದಲ್ಲಿ ಪಾದಚಾರಿ ಮೇಲ್ಸೇತುವೆಗಳನ್ನು ಬಿಬಿಎಂಪಿ ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ ವತಿಯಿಂದ ಸ್ಥಾಪಿಸಲಾಗುತ್ತಿದೆ. ಈ ಪೈಕಿ ಪಾಲಿಕೆಯ ಟಿಇಸಿ ವಿಭಾಗದಿಂದ 16 ಹಾಗೂ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಅಡಿಯಲ್ಲಿ 65 ಸ್ಕೈವಾಕ್ಗಳಿದ್ದು, ಎಲ್ಲ ಸ್ಕೈವಾಕ್ಗಳನ್ನು ಸರಿಯಾಗಿ ನಿರ್ವಹಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>