<p><strong>ಬೆಂಗಳೂರು:</strong> ನಗರದ ಪ್ರಮುಖ ರಸ್ತೆಗಳಲ್ಲಿ ಇನ್ನೂ 78 ಸ್ಕೈವಾಕ್ ನಿರ್ಮಾಣ ಮಾಡುವಂತೆ ಕೋರಿ ಬಿಬಿಎಂಪಿಗೆ ನಗರ ಸಂಚಾರ ಪೊಲೀಸರು ಪತ್ರ ಬರೆದಿದ್ದಾರೆ.</p>.<p>ನಗರದ ವಿವಿಧ ಜಂಕ್ಷನ್ಗಳಲ್ಲಿ ಪ್ರಸ್ತುತ 82 ಸ್ಥಳಗಳಲ್ಲಿ ಸ್ಕೈವಾಕ್ಗಳಿವೆ. ಅವುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕೋರಿ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಕಾರ್ತಿಕ್ ರೆಡ್ಡಿ ಅವರು ಬಿಬಿಎಂಪಿ ಕಮಿಷನರ್ ಎಂ.ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ಗೊತ್ತಾಗಿದೆ.</p>.<p>ಪ್ರಮುಖ ರಸ್ತೆ, ಜಂಕ್ಷನ್ಗಳಲ್ಲಿ ಸ್ಕೈವಾಕ್ಗಳು ಇಲ್ಲ. ಇದರಿಂದ ಸಾವು–ನೋವು ಸಂಭವಿಸುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಸ್ತೆದಾಟುವ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ 768 ಪಾದಚಾರಿಗಳು ಮೃತಪಟ್ಟಿದ್ದಾರೆ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.</p>.<p>‘ದಟ್ಟಣೆ ಹಾಗೂ ರಸ್ತೆದಾಟುವ ಪಾದಚಾರಿಗಳ ಸಂಖ್ಯೆಯನ್ನು ಆಧರಿಸಿ 78 ಸ್ಥಳಗಳನ್ನು ಗುರುತಿಸಲಾಗಿದೆ. ಬಳ್ಳಾರಿ ರಸ್ತೆಯ ಏಳು, ಹಳೇ ಮದ್ರಾಸ್ ರಸ್ತೆಯ ಆರು ಸ್ಥಳಗಳಲ್ಲಿ ಸ್ಕೈವಾಕ್ ನಿರ್ಮಿಸುವ ಅಗತ್ಯವಿದೆ’ ಎಂದು ಕಾರ್ತಿಕ್ ರೆಡ್ಡಿ ಹೇಳಿದರು.</p>.<p>‘ಕೆಲವು ಜಂಕ್ಷನ್ಗಳಲ್ಲಿ ಸದಾ ವಿಪರೀತ ವಾಹನ ದಟ್ಟಣೆ ಇರುತ್ತದೆ. ಜೀಬ್ರಾ ಕ್ರಾಸಿಂಗ್ ವ್ಯವಸ್ಥೆ ಇದ್ದರೂ ಪಾದಚಾರಿಗಳು ರಸ್ತೆದಾಟಲು ಪರದಾಡುತ್ತಿದ್ದಾರೆ. ಅಲ್ಲದೇ ಪಾದಚಾರಿಗಳು ರಸ್ತೆದಾಟುವ ಸಂದರ್ಭದಲ್ಲೂ ವಾಹನ ದಟ್ಟಣೆ ಆಗುತ್ತಿದೆ. ಸ್ಕೈವಾಕ್ ನಿರ್ಮಿಸಿದರೆ ಸಮಸ್ಯೆಗೆ ಪರಿಹಾರ ಸಿಗಲಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>‘ಸಂಚಾರ ಪೊಲೀಸರಿಂದ ಪ್ರಸ್ತಾವ ಬಂದಿದ್ದು, ಕಾರ್ಯ ಸಾಧ್ಯತೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ. ಬಿಬಿಎಂಪಿಯಿಂದ ಪ್ರತ್ಯೇಕ ಸರ್ವೇ ನಡೆಸಿ, ಸ್ಕೈವಾಕ್ ನಿರ್ಮಿಸುವ ಸ್ಥಳವನ್ನು ಗುರುತಿಸಲಾಗುವುದು’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.</p>.<p>‘ನಗರದ ಹಲವು ಸ್ಥಳಗಳಲ್ಲಿ ಈಗಾಗಲೇ ನಿರ್ಮಿಸಿರುವ ಸ್ಕೈವಾಕ್ಗಳನ್ನು ಪಿಪಿಪಿ (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ನಿರ್ಮಿಸಲಾಗಿದೆ. ಮುಂದೆಯೂ ಇದೇ ಮಾದರಿಯಲ್ಲಿ ಸ್ಕೈವಾಕ್ಗಳನ್ನು ನಿರ್ಮಿಸುವ ಆಲೋಚನೆಯಿದೆ. ನಿರ್ಮಾಣಕ್ಕೆ ಮಾಡಲಾದ ವೆಚ್ಚವನ್ನು ಸ್ಕೈವಾಕ್ಗಳ ಮೇಲೆ ಪ್ರಕಟಿಸುವ ಜಾಹೀರಾತುಗಳ ಮೂಲಕ ಪಡೆದುಕೊಳ್ಳಬಹುದು’ ಎಂದು ಮೂಲಗಳು ತಿಳಿಸಿವೆ.</p>.<p>ಕೆಲವು ಸ್ಥಳಗಳಲ್ಲಿರುವ ಸ್ಕೈವಾಕ್ಗಳನ್ನು ಪಾದಚಾರಿಗಳು ಬಳಕೆ ಮಾಡಿಕೊಳ್ಳುತ್ತಿಲ್ಲ. ಇನ್ನೂ ಕೆಲವು ಸ್ಕೈವಾಕ್ಗಳ ನಿರ್ವಹಣೆಯಿಲ್ಲದೇ ಸೊರಗಿವೆ. ಸ್ವಚ್ಛತೆ ಇಲ್ಲ. ಲಿಫ್ಟ್ ಕೆಟ್ಟು ಹೋಗಿವೆ. ಲಿಫ್ಟ್ ಕೆಟ್ಟು ಹೋಗಿದ್ದರಿಂದ ಪಾದಚಾರಿಗಳ ಸ್ಕೈವಾಕ್ಗಳನ್ನು ಬಳಸುತ್ತಿಲ್ಲ’ ಎಂದು ನಾಗರಿಕರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಪ್ರಮುಖ ರಸ್ತೆಗಳಲ್ಲಿ ಇನ್ನೂ 78 ಸ್ಕೈವಾಕ್ ನಿರ್ಮಾಣ ಮಾಡುವಂತೆ ಕೋರಿ ಬಿಬಿಎಂಪಿಗೆ ನಗರ ಸಂಚಾರ ಪೊಲೀಸರು ಪತ್ರ ಬರೆದಿದ್ದಾರೆ.</p>.<p>ನಗರದ ವಿವಿಧ ಜಂಕ್ಷನ್ಗಳಲ್ಲಿ ಪ್ರಸ್ತುತ 82 ಸ್ಥಳಗಳಲ್ಲಿ ಸ್ಕೈವಾಕ್ಗಳಿವೆ. ಅವುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕೋರಿ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಕಾರ್ತಿಕ್ ರೆಡ್ಡಿ ಅವರು ಬಿಬಿಎಂಪಿ ಕಮಿಷನರ್ ಎಂ.ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ಗೊತ್ತಾಗಿದೆ.</p>.<p>ಪ್ರಮುಖ ರಸ್ತೆ, ಜಂಕ್ಷನ್ಗಳಲ್ಲಿ ಸ್ಕೈವಾಕ್ಗಳು ಇಲ್ಲ. ಇದರಿಂದ ಸಾವು–ನೋವು ಸಂಭವಿಸುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಸ್ತೆದಾಟುವ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ 768 ಪಾದಚಾರಿಗಳು ಮೃತಪಟ್ಟಿದ್ದಾರೆ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.</p>.<p>‘ದಟ್ಟಣೆ ಹಾಗೂ ರಸ್ತೆದಾಟುವ ಪಾದಚಾರಿಗಳ ಸಂಖ್ಯೆಯನ್ನು ಆಧರಿಸಿ 78 ಸ್ಥಳಗಳನ್ನು ಗುರುತಿಸಲಾಗಿದೆ. ಬಳ್ಳಾರಿ ರಸ್ತೆಯ ಏಳು, ಹಳೇ ಮದ್ರಾಸ್ ರಸ್ತೆಯ ಆರು ಸ್ಥಳಗಳಲ್ಲಿ ಸ್ಕೈವಾಕ್ ನಿರ್ಮಿಸುವ ಅಗತ್ಯವಿದೆ’ ಎಂದು ಕಾರ್ತಿಕ್ ರೆಡ್ಡಿ ಹೇಳಿದರು.</p>.<p>‘ಕೆಲವು ಜಂಕ್ಷನ್ಗಳಲ್ಲಿ ಸದಾ ವಿಪರೀತ ವಾಹನ ದಟ್ಟಣೆ ಇರುತ್ತದೆ. ಜೀಬ್ರಾ ಕ್ರಾಸಿಂಗ್ ವ್ಯವಸ್ಥೆ ಇದ್ದರೂ ಪಾದಚಾರಿಗಳು ರಸ್ತೆದಾಟಲು ಪರದಾಡುತ್ತಿದ್ದಾರೆ. ಅಲ್ಲದೇ ಪಾದಚಾರಿಗಳು ರಸ್ತೆದಾಟುವ ಸಂದರ್ಭದಲ್ಲೂ ವಾಹನ ದಟ್ಟಣೆ ಆಗುತ್ತಿದೆ. ಸ್ಕೈವಾಕ್ ನಿರ್ಮಿಸಿದರೆ ಸಮಸ್ಯೆಗೆ ಪರಿಹಾರ ಸಿಗಲಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>‘ಸಂಚಾರ ಪೊಲೀಸರಿಂದ ಪ್ರಸ್ತಾವ ಬಂದಿದ್ದು, ಕಾರ್ಯ ಸಾಧ್ಯತೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ. ಬಿಬಿಎಂಪಿಯಿಂದ ಪ್ರತ್ಯೇಕ ಸರ್ವೇ ನಡೆಸಿ, ಸ್ಕೈವಾಕ್ ನಿರ್ಮಿಸುವ ಸ್ಥಳವನ್ನು ಗುರುತಿಸಲಾಗುವುದು’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.</p>.<p>‘ನಗರದ ಹಲವು ಸ್ಥಳಗಳಲ್ಲಿ ಈಗಾಗಲೇ ನಿರ್ಮಿಸಿರುವ ಸ್ಕೈವಾಕ್ಗಳನ್ನು ಪಿಪಿಪಿ (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ನಿರ್ಮಿಸಲಾಗಿದೆ. ಮುಂದೆಯೂ ಇದೇ ಮಾದರಿಯಲ್ಲಿ ಸ್ಕೈವಾಕ್ಗಳನ್ನು ನಿರ್ಮಿಸುವ ಆಲೋಚನೆಯಿದೆ. ನಿರ್ಮಾಣಕ್ಕೆ ಮಾಡಲಾದ ವೆಚ್ಚವನ್ನು ಸ್ಕೈವಾಕ್ಗಳ ಮೇಲೆ ಪ್ರಕಟಿಸುವ ಜಾಹೀರಾತುಗಳ ಮೂಲಕ ಪಡೆದುಕೊಳ್ಳಬಹುದು’ ಎಂದು ಮೂಲಗಳು ತಿಳಿಸಿವೆ.</p>.<p>ಕೆಲವು ಸ್ಥಳಗಳಲ್ಲಿರುವ ಸ್ಕೈವಾಕ್ಗಳನ್ನು ಪಾದಚಾರಿಗಳು ಬಳಕೆ ಮಾಡಿಕೊಳ್ಳುತ್ತಿಲ್ಲ. ಇನ್ನೂ ಕೆಲವು ಸ್ಕೈವಾಕ್ಗಳ ನಿರ್ವಹಣೆಯಿಲ್ಲದೇ ಸೊರಗಿವೆ. ಸ್ವಚ್ಛತೆ ಇಲ್ಲ. ಲಿಫ್ಟ್ ಕೆಟ್ಟು ಹೋಗಿವೆ. ಲಿಫ್ಟ್ ಕೆಟ್ಟು ಹೋಗಿದ್ದರಿಂದ ಪಾದಚಾರಿಗಳ ಸ್ಕೈವಾಕ್ಗಳನ್ನು ಬಳಸುತ್ತಿಲ್ಲ’ ಎಂದು ನಾಗರಿಕರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>