ಬಿಬಿಎಂಪಿಯ ರಾಜಕಾಲುವೆ ವಿಭಾಗ, ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಆಗಿರುವ ಪ್ರಹ್ಲಾದ್ ಅವರಿಗೆ ಸ್ಮಾರ್ಟ್ ಸಿಟಿ ಲಿಮಿಟೆಡ್ನ ಮುಖ್ಯ ಎಂಜಿನಿಯರ್ ಹೊಣೆಯನ್ನು ಜೂನ್ನಲ್ಲಿ ವಹಿಸಲಾಗಿತ್ತು. ಸ್ಥಳ ನಿರೀಕ್ಷಣೆಯಲ್ಲಿದ್ದ ವಿನಾಯಕ ಜಿ.ಸುಗೂರ್ ಅವರನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಮುಖ್ಯ ಎಂಜಿನಿಯರ್ ಹುದ್ದೆಗೆ ವರ್ಗಾಯಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿ ಮೂರು ದಿನಗಳು ಕಳೆದಿವೆ. ಆದರೆ,ಪ್ರಹ್ಲಾದ್ ಅವರು ಅಧಿಕಾರ ಹಸ್ತಾಂತರಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ದೂರಿದರು.