<p>ಬೆಂಗಳೂರು: ಸೌಜನ್ಯ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ಹಾಗೂ ನ್ಯಾಯಯುತವಾಗಿ ಮರು ತನಿಖೆ ನಡೆಸುವುದರ ಜೊತೆ ಸಾರ್ವಜನಿಕವಾಗಿ ಬೆಂಬಲ ನೀಡಬೇಕು ಎಂದು ‘ಕೊಂದವರು ಯಾರು ಆಂದೋಲನ’ ಆಗ್ರಹಿಸಿದೆ.</p>.<p>ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಿರಿಯ ವಕೀಲ ಬಾಲನ್, ಆಂದೋಲನದ ಮುಖಂಡರಾದ ಗೌರಮ್ಮ, ಎ. ಜ್ಯೋತಿ, ಮಲ್ಲಿಗೆ ಸಿರಿಮನೆ, ಮಧು ಭೂಷಣ್, ಮಮತಾ ಯಜಮಾನ್ ಅವರು ಸೌಜನ್ಯ ಅವರ ತಾಯಿ ಕುಸುಮಾವತಿಯವರ ಹೋರಾಟಕ್ಕೆ ಬೆಂಬಲ ಸೂಚಿಸುವ ಪತ್ರವನ್ನು ಬಿಡುಗಡೆಗೊಳಿಸಿದರು.</p>.<p>ನಂತರ ಮಾತನಾಡಿದ ಬಾಲನ್, ‘ಕುಸುಮಾವತಿ ಅವರು 14 ವರ್ಷಗಳ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ನಲ್ಲಿ ಸೌಜನ್ಯ ಪ್ರಕರಣದ ಅರ್ಜಿಯನ್ನು ವಿಚಾರಣೆ ನಡೆಸಲು ಅನುಮತಿ ನೀಡಿದ್ದು, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ’ ಎಂದರು.</p>.<p>‘ಧರ್ಮಸ್ಥಳ ಸುತ್ತಮುತ್ತಲು 74 ಮಹಿಳೆಯರ ಅತ್ಯಾಚಾರ, ಕೊಲೆ, ನಾಪತ್ತೆ ಅಸಹಜ ಸಾವುಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ತ್ವರಿತವಾಗಿ ಹೈಕೋರ್ಟ್ಗೆ ಸಲ್ಲಿಸಬೇಕು. ಇದರ ಜೊತೆಗೆ ಸಾರ್ವಜನಿಕ ಪರಿಶೀಲನೆಗೂ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ವ್ಯವಸ್ಥೆಯ ವೈಫಲ್ಯ’: ‘ಧರ್ಮಸ್ಥಳದಲ್ಲಿ ವ್ಯಾಪ್ತಿಯಲ್ಲಿ ನಡೆದ ದೌರ್ಜನ್ಯಗಳ ಪ್ರಕರಣಗಳ ವಿಚಾರದಲ್ಲಿ ವ್ಯವಸ್ಥೆಯ ವೈಫಲ್ಯವಿದೆ. ಸ್ಥಳೀಯ ಪೊಲೀಸ್, ಸಿಒಡಿ, ಸಿಬಿಐ ಎಲ್ಲರೂ ತನಿಖೆ ಮಾಡಿದ್ದಾರೆ, ಆದರೆ ಎಲ್ಲವೂ ವಿಫಲವಾಗಿವೆ’ ಎಂದು ವಕೀಲ ಬಾಲನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸೌಜನ್ಯ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ಹಾಗೂ ನ್ಯಾಯಯುತವಾಗಿ ಮರು ತನಿಖೆ ನಡೆಸುವುದರ ಜೊತೆ ಸಾರ್ವಜನಿಕವಾಗಿ ಬೆಂಬಲ ನೀಡಬೇಕು ಎಂದು ‘ಕೊಂದವರು ಯಾರು ಆಂದೋಲನ’ ಆಗ್ರಹಿಸಿದೆ.</p>.<p>ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಿರಿಯ ವಕೀಲ ಬಾಲನ್, ಆಂದೋಲನದ ಮುಖಂಡರಾದ ಗೌರಮ್ಮ, ಎ. ಜ್ಯೋತಿ, ಮಲ್ಲಿಗೆ ಸಿರಿಮನೆ, ಮಧು ಭೂಷಣ್, ಮಮತಾ ಯಜಮಾನ್ ಅವರು ಸೌಜನ್ಯ ಅವರ ತಾಯಿ ಕುಸುಮಾವತಿಯವರ ಹೋರಾಟಕ್ಕೆ ಬೆಂಬಲ ಸೂಚಿಸುವ ಪತ್ರವನ್ನು ಬಿಡುಗಡೆಗೊಳಿಸಿದರು.</p>.<p>ನಂತರ ಮಾತನಾಡಿದ ಬಾಲನ್, ‘ಕುಸುಮಾವತಿ ಅವರು 14 ವರ್ಷಗಳ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ನಲ್ಲಿ ಸೌಜನ್ಯ ಪ್ರಕರಣದ ಅರ್ಜಿಯನ್ನು ವಿಚಾರಣೆ ನಡೆಸಲು ಅನುಮತಿ ನೀಡಿದ್ದು, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ’ ಎಂದರು.</p>.<p>‘ಧರ್ಮಸ್ಥಳ ಸುತ್ತಮುತ್ತಲು 74 ಮಹಿಳೆಯರ ಅತ್ಯಾಚಾರ, ಕೊಲೆ, ನಾಪತ್ತೆ ಅಸಹಜ ಸಾವುಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ತ್ವರಿತವಾಗಿ ಹೈಕೋರ್ಟ್ಗೆ ಸಲ್ಲಿಸಬೇಕು. ಇದರ ಜೊತೆಗೆ ಸಾರ್ವಜನಿಕ ಪರಿಶೀಲನೆಗೂ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ವ್ಯವಸ್ಥೆಯ ವೈಫಲ್ಯ’: ‘ಧರ್ಮಸ್ಥಳದಲ್ಲಿ ವ್ಯಾಪ್ತಿಯಲ್ಲಿ ನಡೆದ ದೌರ್ಜನ್ಯಗಳ ಪ್ರಕರಣಗಳ ವಿಚಾರದಲ್ಲಿ ವ್ಯವಸ್ಥೆಯ ವೈಫಲ್ಯವಿದೆ. ಸ್ಥಳೀಯ ಪೊಲೀಸ್, ಸಿಒಡಿ, ಸಿಬಿಐ ಎಲ್ಲರೂ ತನಿಖೆ ಮಾಡಿದ್ದಾರೆ, ಆದರೆ ಎಲ್ಲವೂ ವಿಫಲವಾಗಿವೆ’ ಎಂದು ವಕೀಲ ಬಾಲನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>