<p>ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ಅಂಚೆ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದುಕೊರತೆಗಳನ್ನು ಇತ್ಯರ್ಥ ಪಡಿಸಲು ಜೂನ್ 8ರ ಬೆಳಿಗ್ಗೆ 11ಕ್ಕೆ ‘ಅಂಚೆ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಅಂಚೆ ಅಧೀಕ್ಷಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಜಯನಗರದ ಪ್ರಧಾನ ಅಂಚೆ ಕಚೇರಿಯ 2ನೇ ಮಹಡಿಯಲ್ಲಿ ಇರುವ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಅಂಚೆ ಅದಾಲತ್ ನಡೆಯಲಿದೆ.</p>.<p>ಸ್ಪೀಡ್ ಪೋಸ್ಟ್, ಪಾರ್ಸೆಲ್, ಮನಿ ಆರ್ಡರ್, ಉಳಿತಾಯ ಬ್ಯಾಂಕ್ ಖಾತೆ, ನಗದು ಪ್ರಮಾಣ ಪತ್ರಗಳು ಹಾಗೂ ಕೌಂಟರ್ ಸೇವೆಗಳಿಗೆ ಸಂಬಂಧಿಸಿದ ದೂರುಗಳನ್ನು ಸಾರ್ವಜನಿಕರು ಜೂನ್ 6ರ ಸಂಜೆ 4 ಗಂಟೆಯೊಳಗಾಗಿ ಹಿರಿಯ ಅಂಚೆ ಅಧೀಕ್ಷಕರು, ಬೆಂಗಳೂರು ದಕ್ಷಿಣ ವಿಭಾಗ, ಬೆಂಗಳೂರು–560041 ಈ ವಿಳಾಸಕ್ಕೆ ಅಂಚೆ ಅಥವಾ dobangaloresouth.ka@indiapost.gov.in ಇ–ಮೇಲ್ ವಿಳಾಸಕ್ಕೆ ಕಳಿಸಬಹುದು ಎಂದು ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-4-1794813930</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ಅಂಚೆ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದುಕೊರತೆಗಳನ್ನು ಇತ್ಯರ್ಥ ಪಡಿಸಲು ಜೂನ್ 8ರ ಬೆಳಿಗ್ಗೆ 11ಕ್ಕೆ ‘ಅಂಚೆ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಅಂಚೆ ಅಧೀಕ್ಷಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಜಯನಗರದ ಪ್ರಧಾನ ಅಂಚೆ ಕಚೇರಿಯ 2ನೇ ಮಹಡಿಯಲ್ಲಿ ಇರುವ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಅಂಚೆ ಅದಾಲತ್ ನಡೆಯಲಿದೆ.</p>.<p>ಸ್ಪೀಡ್ ಪೋಸ್ಟ್, ಪಾರ್ಸೆಲ್, ಮನಿ ಆರ್ಡರ್, ಉಳಿತಾಯ ಬ್ಯಾಂಕ್ ಖಾತೆ, ನಗದು ಪ್ರಮಾಣ ಪತ್ರಗಳು ಹಾಗೂ ಕೌಂಟರ್ ಸೇವೆಗಳಿಗೆ ಸಂಬಂಧಿಸಿದ ದೂರುಗಳನ್ನು ಸಾರ್ವಜನಿಕರು ಜೂನ್ 6ರ ಸಂಜೆ 4 ಗಂಟೆಯೊಳಗಾಗಿ ಹಿರಿಯ ಅಂಚೆ ಅಧೀಕ್ಷಕರು, ಬೆಂಗಳೂರು ದಕ್ಷಿಣ ವಿಭಾಗ, ಬೆಂಗಳೂರು–560041 ಈ ವಿಳಾಸಕ್ಕೆ ಅಂಚೆ ಅಥವಾ dobangaloresouth.ka@indiapost.gov.in ಇ–ಮೇಲ್ ವಿಳಾಸಕ್ಕೆ ಕಳಿಸಬಹುದು ಎಂದು ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-4-1794813930</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>