<p><strong>ಬೆಂಗಳೂರು</strong>: ಹಣ ಹಾಗೂ ಚಿನ್ನಾಭರಣ ದೋಚುವ ಉದ್ದೇಶದಿಂದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆಸಿ, ಕೊಲೆ ಮಾಡಿದ್ದ ಐವರನ್ನು ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಮತ್ತು ಯೋಹಾನ್ ಜಾನ್ ಬಂಧಿತರು. ವಿಜಯಲಕ್ಷ್ಮಿ ಎಂಬುವವರಿಗೆ ಆರೋಪಿಗಳು ಬೈಕ್ ಡಿಕ್ಕಿ ಹೊಡೆಸಿ ಕೊಲೆ ಮಾಡಿದ್ದರು ಎಂದು ಪೊಲೀಸರು ಹೇಳಿದರು.</p>.<p>ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ಲೈನ್ ರಸ್ತೆಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದರು. ಆರಂಭದಲ್ಲಿ ಇದೊಂದು ‘ಅಪಘಾತ’ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬಂದಿತ್ತು. ಸಂಚಾರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಮಹಾಲಕ್ಷ್ಮಿ ಲೇಔಟ್ನ ಕಾನೂನು ಸುವ್ಯವಸ್ಥೆ ಠಾಣೆಯ ಪೊಲೀಸರು ಕೈಗೆತ್ತಿಕೊಂಡಾಗ ಕೊಲೆಯ ರಹಸ್ಯ ಬಯಲಾಗಿದೆ. ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದೂ ಸಾಬೀತಾಗಿದೆ.</p>.<p>ಪ್ರಕರಣದ ಸಂಬಂಧ ಐವರನ್ನು ಬಂಧಿಸಲಾಗಿತ್ತು. ಬಂಧಿತರ ಪೈಕಿ ಮಂಜುನಾಥ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಚಾರಣೆ ವೇಳೆ ಅವರು ಅಸ್ತಸ್ಥಗೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಯ ಒಳರೋಗಿಗಳ ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಮೃತ ಮಂಜುನಾಥ್ ವಿರುದ್ಧ ಶೇಷಾದ್ರಿಪುರ ಠಾಣೆಯಲ್ಲಿ ಮೂರು, ಮಹಾಲಕ್ಷ್ಮಿ ಲೇಔಟ್, ಹೈಗ್ರೌಂಡ್ಸ್, ರಾಜಗೋಪಾಲ ನಗರ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿತ್ತು. ಅಲ್ಲದೇ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿಯನ್ನು ತೆರೆಯಲಾಗಿತ್ತು ಎಂದು ಪೊಲೀಸರು ಹೇಳಿದರು.</p>.<p>ಮಹಾಲಕ್ಷ್ಮಿ ಲೇಔಟ್ನ ಕುರುಬರಹಳ್ಳಿಯ ಪೈಪ್ಲೈನ್ ರಸ್ತೆಯ ಮನೆಯಲ್ಲಿ ವಿಜಯಲಕ್ಷ್ಮಿ ಒಂಟಿಯಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರೋಪಿಗಳ ಪೈಕಿ ಚೇತನ್ಗೆ ಮಹಿಳೆಯ ಪರಿಚಯವಿತ್ತು. ವಿಜಯಲಕ್ಷ್ಮಿ ಬಳಿ ಹೆಚ್ಚಿನ ಹಣವಿದೆ ಎಂಬ ಮಾಹಿತಿ ತಿಳಿದುಕೊಂಡಿದ್ದರು. ಸಾಲವನ್ನೂ ಪಡೆದುಕೊಂಡಿದ್ದರು. ಸಾಲವನ್ನು ವಾಪಸ್ ನೀಡುವಂತೆ ಮಹಿಳೆ ಕೇಳಿದ್ದರು. ಆಗ ಚೇತನ್ ತನ್ನ ಸಹಚರರನ್ನು ಸೇರಿಸಿಕೊಂಡು ಮಹಿಳೆಯ ಮನೆಯಲ್ಲಿ ನಗದು ಹಾಗೂ ಚಿನ್ನವನ್ನು ದೋಚಿ ಪರಾರಿಯಾಗಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.</p>.<p>ಏಪ್ರಿಲ್ 21ರಂದು ವಿಜಯಲಕ್ಷ್ಮಿ ರಸ್ತೆಯಲ್ಲಿ ನಡೆದು ತೆರಳುವಾಗ ರಾಕೇಶ್ ಬೈಕ್ನಿಂದ ಜೋರಾಗಿ ಡಿಕ್ಕಿ ಹೊಡೆಸಿದ್ದರು. ಕೂಡಲೇ ಅಲ್ಲಿಗೆ ಆಟೊದಲ್ಲಿ ಬಂದಿದ್ದ ಇತರೆ ಆರೋಪಿಗಳು ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸುವ ನಾಟಕವಾಡಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಪರ್ಸನ್ನಲ್ಲಿ ಕೀ ಕಳ್ಳತನ: ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವ ಸೋಗಿನಲ್ಲಿ ಆರೋಪಿ ಮಂಜುನಾಥ್, ಮಹಿಳೆಯ ಪರ್ಸ್ನಲ್ಲಿದ್ದ ಮನೆ ಕೀಲಿಯನ್ನು ಕಳವು ಮಾಡಿದ್ದರು. ನೇರವಾಗಿ ವಿಜಯಲಕ್ಷ್ಮಿ ಮನೆಗೆ ತೆರಳಿ ಕಳ್ಳತನಕ್ಕೆ ಯತ್ನಿಸಿದ್ದಾಗ, ಅಕ್ಕಪಕ್ಕದ ಮನೆಯವರು ಪ್ರಶ್ನಿಸಿದ್ದರು. ಆಗ ‘ವಿಜಯಲಕ್ಷ್ಮಿ ನನಗೆ ಪರಿಯಸ್ಥರು. ಅವರ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗಲು ಬಂದಿರುವುದಾಗಿ ತಿಳಿಸಿ ಅಲ್ಲಿಂದ ಪರಾರಿಯಾಗಿದ್ದರು’ ಎಂದು ಮೂಲಗಳು ಹೇಳಿವೆ.</p>.<p><strong>ಸುಳ್ಳು ದೂರು ನೀಡಿದ್ದ ರಾಕೇಶ್ </strong></p><p>ಅಪಘಾತ ಎಂದು ಬಿಂಬಿಸಲು ಮೊದಲೇ ಆರೋಪಿಗಳು ಸಂಚು ರೂಪಿಸಿದ್ದರು. ಅದರಂತೆ ರಾಕೇಶ್ ಮಹಾಲಕ್ಷ್ಮಿ ಸಂಚಾರ ಠಾಣೆಗೆ ತೆರಳಿ ಪರಿಯಸ್ಥರಾದ ವಿಜಯಲಕ್ಷ್ಮಿಗೆ ಅಪಘಾತವಾಗಿದೆಯೆಂದು ದೂರು ನೀಡಿದ್ದರು. ‘ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ನಾನೇ ಅವರನ್ನು ಕಾಪಾಡಿ ಆಸ್ಪತ್ರೆಗೆ ಸೇರಿಸಿದ್ದೇನೆ’ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದರು. ಆರಂಭದಲ್ಲಿ ಅಪಘಾತ ಇರಬಹುದೆಂದು ಪೊಲೀಸರೂ ಭಾವಿಸಿದ್ದರು.</p>.<p> <strong>ಪೊಲೀಸ್ ತನಿಖೆಯಲ್ಲಿ ಅಸಲಿ ಸತ್ಯ </strong></p><p>ಬಯಲು ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮನೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿರುವ ಬಗ್ಗೆ ಮನೆ ಮಾಲೀಕರು ದೂರು ನೀಡಿದ್ದರು. ದೂರು ಆಧರಿಸಿ ಅತ್ತ ಮಹಾಲಕ್ಷ್ಮಿ ಲೇಔಟ್ ಪೊಲೀಸರು ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕೊಲೆಗೆ ಸಂಚು ರೂಪಿಸಿರುವುದಕ್ಕೆ ಕೆಲವು ಸಾಕ್ಷ್ಯಾಧಾರಗಳು ಲಭಿಸಿದ್ದವು. ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ತನಿಖೆಗೆ ಮುಂದುವರೆಸಿದಾಗ ಹಣ ಹಾಗೂ ಚಿನ್ನಾಭರಣ ದೋಚುವ ಉದ್ದೇಶದಿಂದ ಸಂಚು ರೂಪಿಸಿ ಅಪಘಾತ ನಡೆಸಿ ಕೊಲೆ ಮಾಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಣ ಹಾಗೂ ಚಿನ್ನಾಭರಣ ದೋಚುವ ಉದ್ದೇಶದಿಂದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆಸಿ, ಕೊಲೆ ಮಾಡಿದ್ದ ಐವರನ್ನು ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಮತ್ತು ಯೋಹಾನ್ ಜಾನ್ ಬಂಧಿತರು. ವಿಜಯಲಕ್ಷ್ಮಿ ಎಂಬುವವರಿಗೆ ಆರೋಪಿಗಳು ಬೈಕ್ ಡಿಕ್ಕಿ ಹೊಡೆಸಿ ಕೊಲೆ ಮಾಡಿದ್ದರು ಎಂದು ಪೊಲೀಸರು ಹೇಳಿದರು.</p>.<p>ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ಲೈನ್ ರಸ್ತೆಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದರು. ಆರಂಭದಲ್ಲಿ ಇದೊಂದು ‘ಅಪಘಾತ’ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬಂದಿತ್ತು. ಸಂಚಾರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಮಹಾಲಕ್ಷ್ಮಿ ಲೇಔಟ್ನ ಕಾನೂನು ಸುವ್ಯವಸ್ಥೆ ಠಾಣೆಯ ಪೊಲೀಸರು ಕೈಗೆತ್ತಿಕೊಂಡಾಗ ಕೊಲೆಯ ರಹಸ್ಯ ಬಯಲಾಗಿದೆ. ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದೂ ಸಾಬೀತಾಗಿದೆ.</p>.<p>ಪ್ರಕರಣದ ಸಂಬಂಧ ಐವರನ್ನು ಬಂಧಿಸಲಾಗಿತ್ತು. ಬಂಧಿತರ ಪೈಕಿ ಮಂಜುನಾಥ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಚಾರಣೆ ವೇಳೆ ಅವರು ಅಸ್ತಸ್ಥಗೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಯ ಒಳರೋಗಿಗಳ ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಮೃತ ಮಂಜುನಾಥ್ ವಿರುದ್ಧ ಶೇಷಾದ್ರಿಪುರ ಠಾಣೆಯಲ್ಲಿ ಮೂರು, ಮಹಾಲಕ್ಷ್ಮಿ ಲೇಔಟ್, ಹೈಗ್ರೌಂಡ್ಸ್, ರಾಜಗೋಪಾಲ ನಗರ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿತ್ತು. ಅಲ್ಲದೇ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿಯನ್ನು ತೆರೆಯಲಾಗಿತ್ತು ಎಂದು ಪೊಲೀಸರು ಹೇಳಿದರು.</p>.<p>ಮಹಾಲಕ್ಷ್ಮಿ ಲೇಔಟ್ನ ಕುರುಬರಹಳ್ಳಿಯ ಪೈಪ್ಲೈನ್ ರಸ್ತೆಯ ಮನೆಯಲ್ಲಿ ವಿಜಯಲಕ್ಷ್ಮಿ ಒಂಟಿಯಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರೋಪಿಗಳ ಪೈಕಿ ಚೇತನ್ಗೆ ಮಹಿಳೆಯ ಪರಿಚಯವಿತ್ತು. ವಿಜಯಲಕ್ಷ್ಮಿ ಬಳಿ ಹೆಚ್ಚಿನ ಹಣವಿದೆ ಎಂಬ ಮಾಹಿತಿ ತಿಳಿದುಕೊಂಡಿದ್ದರು. ಸಾಲವನ್ನೂ ಪಡೆದುಕೊಂಡಿದ್ದರು. ಸಾಲವನ್ನು ವಾಪಸ್ ನೀಡುವಂತೆ ಮಹಿಳೆ ಕೇಳಿದ್ದರು. ಆಗ ಚೇತನ್ ತನ್ನ ಸಹಚರರನ್ನು ಸೇರಿಸಿಕೊಂಡು ಮಹಿಳೆಯ ಮನೆಯಲ್ಲಿ ನಗದು ಹಾಗೂ ಚಿನ್ನವನ್ನು ದೋಚಿ ಪರಾರಿಯಾಗಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.</p>.<p>ಏಪ್ರಿಲ್ 21ರಂದು ವಿಜಯಲಕ್ಷ್ಮಿ ರಸ್ತೆಯಲ್ಲಿ ನಡೆದು ತೆರಳುವಾಗ ರಾಕೇಶ್ ಬೈಕ್ನಿಂದ ಜೋರಾಗಿ ಡಿಕ್ಕಿ ಹೊಡೆಸಿದ್ದರು. ಕೂಡಲೇ ಅಲ್ಲಿಗೆ ಆಟೊದಲ್ಲಿ ಬಂದಿದ್ದ ಇತರೆ ಆರೋಪಿಗಳು ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸುವ ನಾಟಕವಾಡಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಪರ್ಸನ್ನಲ್ಲಿ ಕೀ ಕಳ್ಳತನ: ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವ ಸೋಗಿನಲ್ಲಿ ಆರೋಪಿ ಮಂಜುನಾಥ್, ಮಹಿಳೆಯ ಪರ್ಸ್ನಲ್ಲಿದ್ದ ಮನೆ ಕೀಲಿಯನ್ನು ಕಳವು ಮಾಡಿದ್ದರು. ನೇರವಾಗಿ ವಿಜಯಲಕ್ಷ್ಮಿ ಮನೆಗೆ ತೆರಳಿ ಕಳ್ಳತನಕ್ಕೆ ಯತ್ನಿಸಿದ್ದಾಗ, ಅಕ್ಕಪಕ್ಕದ ಮನೆಯವರು ಪ್ರಶ್ನಿಸಿದ್ದರು. ಆಗ ‘ವಿಜಯಲಕ್ಷ್ಮಿ ನನಗೆ ಪರಿಯಸ್ಥರು. ಅವರ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗಲು ಬಂದಿರುವುದಾಗಿ ತಿಳಿಸಿ ಅಲ್ಲಿಂದ ಪರಾರಿಯಾಗಿದ್ದರು’ ಎಂದು ಮೂಲಗಳು ಹೇಳಿವೆ.</p>.<p><strong>ಸುಳ್ಳು ದೂರು ನೀಡಿದ್ದ ರಾಕೇಶ್ </strong></p><p>ಅಪಘಾತ ಎಂದು ಬಿಂಬಿಸಲು ಮೊದಲೇ ಆರೋಪಿಗಳು ಸಂಚು ರೂಪಿಸಿದ್ದರು. ಅದರಂತೆ ರಾಕೇಶ್ ಮಹಾಲಕ್ಷ್ಮಿ ಸಂಚಾರ ಠಾಣೆಗೆ ತೆರಳಿ ಪರಿಯಸ್ಥರಾದ ವಿಜಯಲಕ್ಷ್ಮಿಗೆ ಅಪಘಾತವಾಗಿದೆಯೆಂದು ದೂರು ನೀಡಿದ್ದರು. ‘ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ನಾನೇ ಅವರನ್ನು ಕಾಪಾಡಿ ಆಸ್ಪತ್ರೆಗೆ ಸೇರಿಸಿದ್ದೇನೆ’ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದರು. ಆರಂಭದಲ್ಲಿ ಅಪಘಾತ ಇರಬಹುದೆಂದು ಪೊಲೀಸರೂ ಭಾವಿಸಿದ್ದರು.</p>.<p> <strong>ಪೊಲೀಸ್ ತನಿಖೆಯಲ್ಲಿ ಅಸಲಿ ಸತ್ಯ </strong></p><p>ಬಯಲು ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮನೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿರುವ ಬಗ್ಗೆ ಮನೆ ಮಾಲೀಕರು ದೂರು ನೀಡಿದ್ದರು. ದೂರು ಆಧರಿಸಿ ಅತ್ತ ಮಹಾಲಕ್ಷ್ಮಿ ಲೇಔಟ್ ಪೊಲೀಸರು ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕೊಲೆಗೆ ಸಂಚು ರೂಪಿಸಿರುವುದಕ್ಕೆ ಕೆಲವು ಸಾಕ್ಷ್ಯಾಧಾರಗಳು ಲಭಿಸಿದ್ದವು. ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ತನಿಖೆಗೆ ಮುಂದುವರೆಸಿದಾಗ ಹಣ ಹಾಗೂ ಚಿನ್ನಾಭರಣ ದೋಚುವ ಉದ್ದೇಶದಿಂದ ಸಂಚು ರೂಪಿಸಿ ಅಪಘಾತ ನಡೆಸಿ ಕೊಲೆ ಮಾಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>