ಬುಧವಾರ, 13 ಆಗಸ್ಟ್ 2025
×
ADVERTISEMENT
ADVERTISEMENT

Stray Dogs | ವ್ಯಗ್ರ ಬೀದಿ ನಾಯಿಗಳಿಗೆ ‘ಆಶ್ರಯ ಕೇಂದ್ರ’?

ಕಚ್ಚುವ ಅಭ್ಯಾಸವುಳ್ಳ ಬೀದಿ ನಾಯಿಗಳನ್ನು ಶಾಶ್ವತವಾಗಿ ಕೇಂದ್ರದಲ್ಲಿರಿಸಲು ಬಿಬಿಎಂಪಿ ಚಿಂತನೆ
Published : 12 ಆಗಸ್ಟ್ 2025, 23:30 IST
Last Updated : 12 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ವಿದ್ಯಾರ್ಥಿಗಳಿಬ್ಬರಿಗೆ ಬೀದಿ ನಾಯಿ ಕಡಿತ
ಜ್ಞಾನಭಾರತಿ ಆವರಣದೊಳಗಿರುವ ಬಿ.ಆರ್‌. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನ ಇಬ್ಬರು ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡಿ ಕಚ್ಚಿದ್ದು ಒಬ್ಬ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿವೆ. ‘ಮಂಗಳವಾರ ಬೆಳಗಿನ ವಾಯುವಿಹಾರದ ಸಂದರ್ಭದಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ವಿದ್ಯಾರ್ಥಿಯೊಬ್ಬರಿಗೆ 10 ಕಡೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಮಂಗಳವಾರ ಸಂಜೆಯವರೆಗೂ ವಿದ್ಯಾರ್ಥಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ’ ಎಂದು ಬಿಬಿಎಂಪಿ ಪಶುಸಂಗೋಪನೆ ವಿಭಾಗದ ಸಹಾಯಕ ನಿರ್ದೇಶಕರು ತಿಳಿಸಿದರು. ‘ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಂಗಳವಾರ ಸಂಜೆ ವೇಳೆಗೆ ಇಬ್ಬರೂ ಚೇತರಿಸಿಕೊಂಡಿದ್ದು ಆರೋಗ್ಯ ಸ್ಥಿರವಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT