<p><strong>ಬೆಂಗಳೂರು</strong>: ಸರ್ವಜ್ಞನಗರದ ಗೋವಿಂದಪುರದಲ್ಲಿ ಶುಕ್ರವಾರ ಬೆಳಿಗ್ಗೆ ಚರಂಡಿಗೆ ಬಿದ್ದಿದ್ದ ವಿದ್ಯಾರ್ಥಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.</p>.<p>ಪೋಷಕರ ಜತೆಗೆ ಒಂದನೇ ತರಗತಿಯ ವಿದ್ಯಾರ್ಥಿ ಶುಕ್ರವಾರ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ. ಪಾದಚಾರಿ ಮಾರ್ಗದಲ್ಲಿ ನಡೆದು ತೆರಳುವಾಗ ಸ್ಲ್ಯಾಬ್ ತೆರೆದು ಹಾಗೆಯೇ ಬಿಡಲಾಗಿದ್ದ ಚರಂಡಿಗೆ ವಿದ್ಯಾರ್ಥಿ ಬಿದ್ದಿದ್ದ. ಅದನ್ನು ಗಮನಿಸಿದ ಸ್ಥಳೀಯರು, ಓಡಿಬಂದು ವಿದ್ಯಾರ್ಥಿಯನ್ನು ರಕ್ಷಿಸಿ, ಅಪಾಯದಿಂದ ಪಾರು ಮಾಡಿದ್ದಾರೆ.</p>.<p>ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಶಾಲೆಯ ಎದುರು ಕಾಮಗಾರಿ ನಡೆಸಲಾಗುತ್ತಿದೆ. ಅದೇ ಮಾರ್ಗದಲ್ಲಿ ನಡೆದುಕೊಂಡು ಶಾಲೆಗೆ ತೆರಳುವ ವಿದ್ಯಾರ್ಥಿಗಳು ಚರಂಡಿಗೆ ಬೀಳುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದರು.</p>.<p>ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಾತಗುಣಿ ಎಂಬಲ್ಲಿ ಜಲಮಂಡಳಿಯ ಕಾವೇರಿ ಐದನೇ ಹಂತದ ಕೊಳವೆ ಮಾರ್ಗದ ಚೇಂಬರ್ಗೆ ಬಿದ್ದು 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಕಳೆದ ವಾರ ಮೃತಪಟ್ಟಿದ್ದ. ಜಲಮಂಡಳಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಆ ಘಟನೆ ಸಂಭವಿಸಿತ್ತು. ಸರ್ವಜ್ಞನಗರದಲ್ಲೂ ಚರಂಡಿಯ ಸ್ಲ್ಯಾಬ್ ತೆರೆದಿದ್ದರೂ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಅದನ್ನು ಮುಚ್ಚಿಸದೇ ಹಾಗೆಯೇ ಬಿಟ್ಟಿದ್ದರಿಂದ ವಿದ್ಯಾರ್ಥಿ ಚರಂಡಿಗೆ ಬಿದ್ದಿದ್ದ. ಏನಾದರೂ ಅನಾಹುತ ಸಂಭವಿಸಿದ್ದರೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ವಜ್ಞನಗರದ ಗೋವಿಂದಪುರದಲ್ಲಿ ಶುಕ್ರವಾರ ಬೆಳಿಗ್ಗೆ ಚರಂಡಿಗೆ ಬಿದ್ದಿದ್ದ ವಿದ್ಯಾರ್ಥಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.</p>.<p>ಪೋಷಕರ ಜತೆಗೆ ಒಂದನೇ ತರಗತಿಯ ವಿದ್ಯಾರ್ಥಿ ಶುಕ್ರವಾರ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ. ಪಾದಚಾರಿ ಮಾರ್ಗದಲ್ಲಿ ನಡೆದು ತೆರಳುವಾಗ ಸ್ಲ್ಯಾಬ್ ತೆರೆದು ಹಾಗೆಯೇ ಬಿಡಲಾಗಿದ್ದ ಚರಂಡಿಗೆ ವಿದ್ಯಾರ್ಥಿ ಬಿದ್ದಿದ್ದ. ಅದನ್ನು ಗಮನಿಸಿದ ಸ್ಥಳೀಯರು, ಓಡಿಬಂದು ವಿದ್ಯಾರ್ಥಿಯನ್ನು ರಕ್ಷಿಸಿ, ಅಪಾಯದಿಂದ ಪಾರು ಮಾಡಿದ್ದಾರೆ.</p>.<p>ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಶಾಲೆಯ ಎದುರು ಕಾಮಗಾರಿ ನಡೆಸಲಾಗುತ್ತಿದೆ. ಅದೇ ಮಾರ್ಗದಲ್ಲಿ ನಡೆದುಕೊಂಡು ಶಾಲೆಗೆ ತೆರಳುವ ವಿದ್ಯಾರ್ಥಿಗಳು ಚರಂಡಿಗೆ ಬೀಳುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದರು.</p>.<p>ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಾತಗುಣಿ ಎಂಬಲ್ಲಿ ಜಲಮಂಡಳಿಯ ಕಾವೇರಿ ಐದನೇ ಹಂತದ ಕೊಳವೆ ಮಾರ್ಗದ ಚೇಂಬರ್ಗೆ ಬಿದ್ದು 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಕಳೆದ ವಾರ ಮೃತಪಟ್ಟಿದ್ದ. ಜಲಮಂಡಳಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಆ ಘಟನೆ ಸಂಭವಿಸಿತ್ತು. ಸರ್ವಜ್ಞನಗರದಲ್ಲೂ ಚರಂಡಿಯ ಸ್ಲ್ಯಾಬ್ ತೆರೆದಿದ್ದರೂ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಅದನ್ನು ಮುಚ್ಚಿಸದೇ ಹಾಗೆಯೇ ಬಿಟ್ಟಿದ್ದರಿಂದ ವಿದ್ಯಾರ್ಥಿ ಚರಂಡಿಗೆ ಬಿದ್ದಿದ್ದ. ಏನಾದರೂ ಅನಾಹುತ ಸಂಭವಿಸಿದ್ದರೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>