<p><strong>ಬೆಂಗಳೂರು:</strong> ರಾಮಮೂರ್ತಿನಗರದ ಬಳಿ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ಬಿಬಿಎಂ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದು, ಘಟನೆ ನಡೆದ ಕೆಲವೇ ತಾಸುಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಚಾಕು ಇರಿತದಿಂದ ಗಾಯಗೊಂಡಿರುವ ವಿದ್ಯಾರ್ಥಿ ಧೀರಜ್ (21) ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಾದ ಭುವನ್, ಮಿಥುನ್ ಮತ್ತು ಬಾಲಕನನ್ನು ಬಂಧಿಸಲಾಗಿದೆ ಎಂದು ರಾಮಮೂರ್ತಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ರಾಮಮೂರ್ತಿನಗರ ಸಮೀಪದ ಬಂಜಾರ ಲೇಔಟ್ನ ಧೀರಜ್, ಬೆಳಗಿನ ಜಾವ ಬೈಕ್ನಲ್ಲಿ ಹೊಸಕೋಟೆ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಹೊರ ವರ್ತುಲ ರಸ್ತೆಯಲ್ಲಿ ಆರೋಪಿಗಳು ಬೈಕ್ನಲ್ಲಿ ಎದುರಿನಿಂದ ಬಂದಿದ್ದಾರೆ. ಈ ವಿಚಾರಕ್ಕೆ ಧೀರಜ್ ಹಾಗೂ ಆರೋಪಿಗಳ ನಡುವೆ ವಾಗ್ವಾದ ನಡೆದು ಜಗಳವಾಗಿದೆ. ಬಳಿಕ ಆರೋಪಿಗಳು ಧೀರಜ್ನ ತೊಡೆ ಹಾಗೂ ಬೆನ್ನಿಗೆ ಚಾಕು ಇರಿದು ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಘಟನೆಯ ವಿಷಯ ತಿಳಿಯುತ್ತಿದ್ದಂತೆ ಬಾಣಸವಾಡಿ ಠಾಣೆ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಬೈಕ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಆರ್.ಎಸ್.ಪಾಳ್ಯದ ಬಳಿಯ ಜಾನಕಿರಾಮ ಲೇಔಟ್ನವರು. ಅವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಮಮೂರ್ತಿನಗರದ ಬಳಿ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ಬಿಬಿಎಂ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದು, ಘಟನೆ ನಡೆದ ಕೆಲವೇ ತಾಸುಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಚಾಕು ಇರಿತದಿಂದ ಗಾಯಗೊಂಡಿರುವ ವಿದ್ಯಾರ್ಥಿ ಧೀರಜ್ (21) ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಾದ ಭುವನ್, ಮಿಥುನ್ ಮತ್ತು ಬಾಲಕನನ್ನು ಬಂಧಿಸಲಾಗಿದೆ ಎಂದು ರಾಮಮೂರ್ತಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ರಾಮಮೂರ್ತಿನಗರ ಸಮೀಪದ ಬಂಜಾರ ಲೇಔಟ್ನ ಧೀರಜ್, ಬೆಳಗಿನ ಜಾವ ಬೈಕ್ನಲ್ಲಿ ಹೊಸಕೋಟೆ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಹೊರ ವರ್ತುಲ ರಸ್ತೆಯಲ್ಲಿ ಆರೋಪಿಗಳು ಬೈಕ್ನಲ್ಲಿ ಎದುರಿನಿಂದ ಬಂದಿದ್ದಾರೆ. ಈ ವಿಚಾರಕ್ಕೆ ಧೀರಜ್ ಹಾಗೂ ಆರೋಪಿಗಳ ನಡುವೆ ವಾಗ್ವಾದ ನಡೆದು ಜಗಳವಾಗಿದೆ. ಬಳಿಕ ಆರೋಪಿಗಳು ಧೀರಜ್ನ ತೊಡೆ ಹಾಗೂ ಬೆನ್ನಿಗೆ ಚಾಕು ಇರಿದು ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಘಟನೆಯ ವಿಷಯ ತಿಳಿಯುತ್ತಿದ್ದಂತೆ ಬಾಣಸವಾಡಿ ಠಾಣೆ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಬೈಕ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಆರ್.ಎಸ್.ಪಾಳ್ಯದ ಬಳಿಯ ಜಾನಕಿರಾಮ ಲೇಔಟ್ನವರು. ಅವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>