<p>ಬೆಂಗಳೂರು: ಕೊನೆಗೂ ಉಪನಗರ ರೈಲು ಯೋಜನೆಯ ಕಾಮಗಾರಿ ಆರಂಭಿಸಲು ಕೆ-ರೈಡ್ (ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ) ಸಿದ್ಧತೆ ಚುರುಕುಗೊಳಿಸಿದೆ. ಮಲ್ಲಿಗೆ ಕಾರಿಡಾರ್ನಲ್ಲಿ(ಬೈಯಪ್ಪನಹಳ್ಳಿ– ಚಿಕ್ಕಬಾಣಾವರ) 12 ನಿಲ್ದಾಣಗಳ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಿದೆ.</p>.<p>ಬೆನ್ನಿಗಾನಹಳ್ಳಿ, ಕಸ್ತೂರಿ ನಗರ, ಸೇವಾ ನಗರ, ಬಾಣಸವಾಡಿ, ನಾಗವಾರ, ಕನಕನಗರ, ಹೆಬ್ಬಾಳ, ಮತ್ತಿಕೆರೆ, ಯಶವಂತಪುರ, ಶೆಟ್ಟಿಹಳ್ಳಿ, ಮೈದರಹಳ್ಳಿ, ಚಿಕ್ಕಬಾಣಾವರ ನಿಲ್ದಾಣಗಳ ವಿನ್ಯಾಸ ಅಂತಿಮಗೊಳಿಸಿದೆ. ಕಾಮಗಾರಿ ಗುತ್ತಿಗೆ ನೀಡಲು ಟೆಂಡರ್ ಆಹ್ವಾನಿಸಿದೆ.</p>.<p>12 ನಿಲ್ದಾಣಗಳಲ್ಲಿ ಎರಡು ಎತ್ತರಿಸಿದ ನಿಲ್ದಾಣಗಳು, ಎರಡು ಎತ್ತರಿಸಿದ ಇಂಟರ್ ಚೇಂಜ್ ನಿಲ್ದಾಣಗಳು, ಎಂಟು ನೆಲಸ್ತರದ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.</p>.<p>ಎತ್ತರಿಸಿದ ಪಾದಚಾರಿ ಉಕ್ಕಿನ ಮಾರ್ಗ, ಮೇಲ್ಚಾವಣಿಗಳ ರಚನೆ, ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಬಿಡ್ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನಾವಾಗಿದೆ ಎಂದು ಕೆ–ರೈಡ್ ವಿವರಿಸಿದೆ.</p>.<p>ಬೆಂಗಳೂರಿನಲ್ಲಿ ಉಪನಗರ ರೈಲು ಯೋಜನೆಯಡಿ ನಾಲ್ಕು ಕಾರಿಡಾರ್ಗಳು ನಿರ್ಮಾಣವಾಗುತ್ತಿವೆ. ಮೊದಲ ಹಂತದಲ್ಲಿ ಮಲ್ಲಿಗೆ ಕಾರಿಡಾರ್ನಲ್ಲಿ ಕಾಮಗಾರಿ ಆರಂಭವಾಗಿದೆ. ಬಾಕಿ ಮೂರು ಕಾರಿಡಾರ್ನಲ್ಲಿ ಕಾಮಗಾರಿ ಆರಂಭವಾಗಿಲ್ಲ.</p>.<p>ಕೆಎಸ್ಆರ್ ರೈಲು ನಿಲ್ದಾಣದಿಂದ ದೇವನಹಳ್ಳಿಗೆ ಸಂಪರ್ಕ ಕಲ್ಪಿಸುವ ಸಂಪಿಗೆ (ಕಾರಿಡಾರ್–1) ಕಾರಿಡಾರ್ಗೆ ಮೊದಲ ಆದ್ಯತೆ ನೀಡಬೇಕು ಎಂಬ ಒತ್ತಡ ಇತ್ತು. ಆದರೂ, ಕಾರಿಡಾರ್–2 ಕಾಮಗಾರಿ ಆರಂಭಿಸಲು ಕೆ–ರೈಡ್ ಉತ್ಸುಕತೆ ತೋರಿಸಿದೆ. ಆದ್ಯತಾ ಕಾರಿಡಾರ್ ಎಂದು ಹೇಳಿಕೊಂಡಿದೆ. </p>.<p>2019ರ ಕೇಂದ್ರ ಬಜೆಟ್ನಲ್ಲಿ ಈ ಯೋಜನೆಯನ್ನು ಉಲ್ಲೇಖಿಸಲಾಯಿತು. 2020ರ ಅಕ್ಟೋಬರ್ 21ರಂದು ರೈಲ್ವೆ ಮಂಡಳಿಯಿಂದ ಇದಕ್ಕೆ ಅನುಮೋದನೆಯೂ ದೊರೆಯಿತು.</p>.<p>ಯೋಜನೆ ಅನುಷ್ಠಾನದ ಹೊಣೆ ಹೊತ್ತಿರುವ ಕೆ–ರೈಡ್, ಈ ಯೋಜನೆಯನ್ನು ನಾಲ್ಕು ಕಾರಿಡಾರ್ಗಳನ್ನಾಗಿ ವಿಂಗಡಿಸಿದೆ. 2,190 ದಿನಗಳ (6 ವರ್ಷ) ಕಾಲಮಿತಿ ನಿಗದಿ ಮಾಡಿಕೊಂಡಿದೆ. ಅದರಲ್ಲಿ ಈಗ ಶೇ 40ರಷ್ಟು ದಿನಗಳು ಪೂರ್ಣಗೊಂಡಿವೆ. ಆದರೆ, ಕಾಮಗಾರಿ ಭೌತಿಕವಾಗಿ ಶೇ1ರಷ್ಟು ಮಾತ್ರ ಪ್ರಗತಿ ಕಂಡಿದೆ ಎಂದು ರೈಲ್ವೆ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p><strong>ಅಂಕಿ–ಅಂಶ</strong> </p><p>₹15767 ಕೋಟಿಯೋಜನೆಯ ಒಟ್ಟು ಮೊತ್ತ 20:20:60ಕೇಂದ್ರ ರಾಜ್ಯ ಮತ್ತು ಬಾಹ್ಯ ಹಣಕಾಸು ಸಂಸ್ಥೆಗಳು ಭರಿಸುವ ಪಾಲು 2020ರ ಅ. 21ಯೋಜನೆಗೆ ಅನುಮೋದನೆ ದೊರೆತ ದಿನಾಂಕ 2190ಯೋಜನೆ ಪೂರ್ಣಗೊಳಿಸಲು ನಿಗದಿ ಮಾಡಿರುವ ದಿನಗಳು 1244ಬಾಕಿ ಇರುವ ದಿನಗಳು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕೊನೆಗೂ ಉಪನಗರ ರೈಲು ಯೋಜನೆಯ ಕಾಮಗಾರಿ ಆರಂಭಿಸಲು ಕೆ-ರೈಡ್ (ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ) ಸಿದ್ಧತೆ ಚುರುಕುಗೊಳಿಸಿದೆ. ಮಲ್ಲಿಗೆ ಕಾರಿಡಾರ್ನಲ್ಲಿ(ಬೈಯಪ್ಪನಹಳ್ಳಿ– ಚಿಕ್ಕಬಾಣಾವರ) 12 ನಿಲ್ದಾಣಗಳ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಿದೆ.</p>.<p>ಬೆನ್ನಿಗಾನಹಳ್ಳಿ, ಕಸ್ತೂರಿ ನಗರ, ಸೇವಾ ನಗರ, ಬಾಣಸವಾಡಿ, ನಾಗವಾರ, ಕನಕನಗರ, ಹೆಬ್ಬಾಳ, ಮತ್ತಿಕೆರೆ, ಯಶವಂತಪುರ, ಶೆಟ್ಟಿಹಳ್ಳಿ, ಮೈದರಹಳ್ಳಿ, ಚಿಕ್ಕಬಾಣಾವರ ನಿಲ್ದಾಣಗಳ ವಿನ್ಯಾಸ ಅಂತಿಮಗೊಳಿಸಿದೆ. ಕಾಮಗಾರಿ ಗುತ್ತಿಗೆ ನೀಡಲು ಟೆಂಡರ್ ಆಹ್ವಾನಿಸಿದೆ.</p>.<p>12 ನಿಲ್ದಾಣಗಳಲ್ಲಿ ಎರಡು ಎತ್ತರಿಸಿದ ನಿಲ್ದಾಣಗಳು, ಎರಡು ಎತ್ತರಿಸಿದ ಇಂಟರ್ ಚೇಂಜ್ ನಿಲ್ದಾಣಗಳು, ಎಂಟು ನೆಲಸ್ತರದ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.</p>.<p>ಎತ್ತರಿಸಿದ ಪಾದಚಾರಿ ಉಕ್ಕಿನ ಮಾರ್ಗ, ಮೇಲ್ಚಾವಣಿಗಳ ರಚನೆ, ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಬಿಡ್ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನಾವಾಗಿದೆ ಎಂದು ಕೆ–ರೈಡ್ ವಿವರಿಸಿದೆ.</p>.<p>ಬೆಂಗಳೂರಿನಲ್ಲಿ ಉಪನಗರ ರೈಲು ಯೋಜನೆಯಡಿ ನಾಲ್ಕು ಕಾರಿಡಾರ್ಗಳು ನಿರ್ಮಾಣವಾಗುತ್ತಿವೆ. ಮೊದಲ ಹಂತದಲ್ಲಿ ಮಲ್ಲಿಗೆ ಕಾರಿಡಾರ್ನಲ್ಲಿ ಕಾಮಗಾರಿ ಆರಂಭವಾಗಿದೆ. ಬಾಕಿ ಮೂರು ಕಾರಿಡಾರ್ನಲ್ಲಿ ಕಾಮಗಾರಿ ಆರಂಭವಾಗಿಲ್ಲ.</p>.<p>ಕೆಎಸ್ಆರ್ ರೈಲು ನಿಲ್ದಾಣದಿಂದ ದೇವನಹಳ್ಳಿಗೆ ಸಂಪರ್ಕ ಕಲ್ಪಿಸುವ ಸಂಪಿಗೆ (ಕಾರಿಡಾರ್–1) ಕಾರಿಡಾರ್ಗೆ ಮೊದಲ ಆದ್ಯತೆ ನೀಡಬೇಕು ಎಂಬ ಒತ್ತಡ ಇತ್ತು. ಆದರೂ, ಕಾರಿಡಾರ್–2 ಕಾಮಗಾರಿ ಆರಂಭಿಸಲು ಕೆ–ರೈಡ್ ಉತ್ಸುಕತೆ ತೋರಿಸಿದೆ. ಆದ್ಯತಾ ಕಾರಿಡಾರ್ ಎಂದು ಹೇಳಿಕೊಂಡಿದೆ. </p>.<p>2019ರ ಕೇಂದ್ರ ಬಜೆಟ್ನಲ್ಲಿ ಈ ಯೋಜನೆಯನ್ನು ಉಲ್ಲೇಖಿಸಲಾಯಿತು. 2020ರ ಅಕ್ಟೋಬರ್ 21ರಂದು ರೈಲ್ವೆ ಮಂಡಳಿಯಿಂದ ಇದಕ್ಕೆ ಅನುಮೋದನೆಯೂ ದೊರೆಯಿತು.</p>.<p>ಯೋಜನೆ ಅನುಷ್ಠಾನದ ಹೊಣೆ ಹೊತ್ತಿರುವ ಕೆ–ರೈಡ್, ಈ ಯೋಜನೆಯನ್ನು ನಾಲ್ಕು ಕಾರಿಡಾರ್ಗಳನ್ನಾಗಿ ವಿಂಗಡಿಸಿದೆ. 2,190 ದಿನಗಳ (6 ವರ್ಷ) ಕಾಲಮಿತಿ ನಿಗದಿ ಮಾಡಿಕೊಂಡಿದೆ. ಅದರಲ್ಲಿ ಈಗ ಶೇ 40ರಷ್ಟು ದಿನಗಳು ಪೂರ್ಣಗೊಂಡಿವೆ. ಆದರೆ, ಕಾಮಗಾರಿ ಭೌತಿಕವಾಗಿ ಶೇ1ರಷ್ಟು ಮಾತ್ರ ಪ್ರಗತಿ ಕಂಡಿದೆ ಎಂದು ರೈಲ್ವೆ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p><strong>ಅಂಕಿ–ಅಂಶ</strong> </p><p>₹15767 ಕೋಟಿಯೋಜನೆಯ ಒಟ್ಟು ಮೊತ್ತ 20:20:60ಕೇಂದ್ರ ರಾಜ್ಯ ಮತ್ತು ಬಾಹ್ಯ ಹಣಕಾಸು ಸಂಸ್ಥೆಗಳು ಭರಿಸುವ ಪಾಲು 2020ರ ಅ. 21ಯೋಜನೆಗೆ ಅನುಮೋದನೆ ದೊರೆತ ದಿನಾಂಕ 2190ಯೋಜನೆ ಪೂರ್ಣಗೊಳಿಸಲು ನಿಗದಿ ಮಾಡಿರುವ ದಿನಗಳು 1244ಬಾಕಿ ಇರುವ ದಿನಗಳು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>