<p><strong>ಬೆಂಗಳೂರು:</strong>ಬೆಂಗಳೂರು ಉಪನಗರ ರೈಲು ಯೋಜನೆಯ ಕಾಮಗಾರಿಗೆ ಇನ್ನು ಮೂರು ತಿಂಗಳಲ್ಲಿ ಚಾಲನೆ ನೀಡಲಿದ್ದು, ಇದರ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.</p>.<p>ನಗರದ ಕಂಟೋನ್ಮೆಂಟ್ ನಿಲ್ದಾಣದಿಂದ ಬೆಂಗಳೂರು ಉಪನಗರ ರೈಲು ಯೋಜನೆ ಮತ್ತು ರೈಲ್ವೆ ಮಾರ್ಗ ಡಬ್ಲಿಂಗ್ ಯೋಜನೆಗಳ ಪ್ರಗತಿ ಪರಿಶೀಲನೆ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಈ ಯೋಜನೆಯ ವೆಚ್ಚ ₹15,767 ಕೋಟಿ ಆಗಲಿದ್ದು ಕೇಂದ್ರ, ರಾಜ್ಯ ಮತ್ತು ಬಾಹ್ಯ ಹಣಕಾಸು ಸಂಸ್ಥೆಗಳ ಮೂಲಕ 20:20:60 ಅನುಪಾತದಲ್ಲಿ ಇದಕ್ಕೆ ಬಂಡವಾಳ ತೊಡಗಿಸಲಾಗುವುದು. 2020–21 ನೇ ಸಾಲಿಗೆ ರಾಜ್ಯ ಸರ್ಕಾರ ₹400 ಕೋಟಿ ಈ ಯೋಜನೆಗೆ ಮೀಸಲಿಟ್ಟಿದೆ ಎಂದು ಹೇಳಿದರು.</p>.<p>ಬೈಯ್ಯಪ್ಪನಹಳ್ಳಿ–ರಾಜಾನುಕುಂಟೆ ಮತ್ತು ಯಶವಂತಪುರ– ಹೊಸೂರು ರಸ್ತೆ ಸಂಪರ್ಕಿಸುವ ರೈಲ್ವೆ ಮಾರ್ಗಗಳ ಡಬ್ಲಿಂಗ್ ಕೆಲಸಕ್ಕಾಗಿ 2020–21 ನೇ ಸಾಲಿಗೆ ₹65 ಕೋಟಿ ಅನುದಾನ ಒದಗಿಸಲಾಗಿದೆ. ಕಾಲಮಿತಿಯಲ್ಲಿ ಅಂದರೆ 2023 ಕ್ಕೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.</p>.<p><a href="https://www.prajavani.net/district/bengaluru-city/former-bjp-corporator-rekha-kadiresh-stabbed-to-death-in-bengaluru-841877.html" itemprop="url">ಮಾಜಿ ಕಾರ್ಪೋರೇಟರ್ ಬಿಜೆಪಿಯ ರೇಖಾ ಕದಿರೇಶ್ ಹತ್ಯೆ </a></p>.<p>ಕೇಂದ್ರದಲ್ಲಿ ಬಿಜೆಪಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಏನು ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಟೀಕೆ ಮಾಡುತ್ತಿದೆ. ಇಲ್ಲಿಗೆ ಬಂದು ಆಗುತ್ತಿರುವ ಕೆಲಸಗಳನ್ನು ನೋಡಲಿ, ಇವು ಕೇಂದ್ರದ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಯೋಜನೆಗಳು ಎಂದರು.</p>.<p>ಎರಡು ದಿನಕ್ಕೊಮ್ಮೆ ರೈಲಿನ ಮೂಲಕ ರಾಜ್ಯದ ಎಳನೀರು, ಮಾವಿನಹಣ್ಣು ಮತ್ತು ಟೊಮೇಟೊವನ್ನು ದೆಹಲಿಗೆ ಕಳುಹಿಸಲಾಗುತ್ತಿದ್ದು, ಒಂದು ರೈಲಿನಲ್ಲಿ ಕಳಿಸಿದ್ದಕ್ಕೆ ₹24 ಲಕ್ಷ ಲಾಭ ಆಗುತ್ತಿದೆ. ರೈತನಿಗೆ ಉತ್ತಮ ಬೆಲೆ ಸಿಗಲಿ ಎಂಬ ಕಾರಣಕ್ಕೆ ಇಂತಹ ಪ್ರಯತ್ನಕ್ಕೆ ಕೈಹಾಕಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.</p>.<p><a href="https://www.prajavani.net/district/bagalkot/snake-catcher-in-bagalkot-died-due-to-indian-cobra-bite-841883.html" itemprop="url">ಬಾಗಲಕೋಟೆ: ನಾಗರಹಾವು ಕಚ್ಚಿ ಉರಗ ಮಿತ್ರ ಸದಾಶಿವ ಕರಣಿ ಸಾವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಬೆಂಗಳೂರು ಉಪನಗರ ರೈಲು ಯೋಜನೆಯ ಕಾಮಗಾರಿಗೆ ಇನ್ನು ಮೂರು ತಿಂಗಳಲ್ಲಿ ಚಾಲನೆ ನೀಡಲಿದ್ದು, ಇದರ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.</p>.<p>ನಗರದ ಕಂಟೋನ್ಮೆಂಟ್ ನಿಲ್ದಾಣದಿಂದ ಬೆಂಗಳೂರು ಉಪನಗರ ರೈಲು ಯೋಜನೆ ಮತ್ತು ರೈಲ್ವೆ ಮಾರ್ಗ ಡಬ್ಲಿಂಗ್ ಯೋಜನೆಗಳ ಪ್ರಗತಿ ಪರಿಶೀಲನೆ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಈ ಯೋಜನೆಯ ವೆಚ್ಚ ₹15,767 ಕೋಟಿ ಆಗಲಿದ್ದು ಕೇಂದ್ರ, ರಾಜ್ಯ ಮತ್ತು ಬಾಹ್ಯ ಹಣಕಾಸು ಸಂಸ್ಥೆಗಳ ಮೂಲಕ 20:20:60 ಅನುಪಾತದಲ್ಲಿ ಇದಕ್ಕೆ ಬಂಡವಾಳ ತೊಡಗಿಸಲಾಗುವುದು. 2020–21 ನೇ ಸಾಲಿಗೆ ರಾಜ್ಯ ಸರ್ಕಾರ ₹400 ಕೋಟಿ ಈ ಯೋಜನೆಗೆ ಮೀಸಲಿಟ್ಟಿದೆ ಎಂದು ಹೇಳಿದರು.</p>.<p>ಬೈಯ್ಯಪ್ಪನಹಳ್ಳಿ–ರಾಜಾನುಕುಂಟೆ ಮತ್ತು ಯಶವಂತಪುರ– ಹೊಸೂರು ರಸ್ತೆ ಸಂಪರ್ಕಿಸುವ ರೈಲ್ವೆ ಮಾರ್ಗಗಳ ಡಬ್ಲಿಂಗ್ ಕೆಲಸಕ್ಕಾಗಿ 2020–21 ನೇ ಸಾಲಿಗೆ ₹65 ಕೋಟಿ ಅನುದಾನ ಒದಗಿಸಲಾಗಿದೆ. ಕಾಲಮಿತಿಯಲ್ಲಿ ಅಂದರೆ 2023 ಕ್ಕೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.</p>.<p><a href="https://www.prajavani.net/district/bengaluru-city/former-bjp-corporator-rekha-kadiresh-stabbed-to-death-in-bengaluru-841877.html" itemprop="url">ಮಾಜಿ ಕಾರ್ಪೋರೇಟರ್ ಬಿಜೆಪಿಯ ರೇಖಾ ಕದಿರೇಶ್ ಹತ್ಯೆ </a></p>.<p>ಕೇಂದ್ರದಲ್ಲಿ ಬಿಜೆಪಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಏನು ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಟೀಕೆ ಮಾಡುತ್ತಿದೆ. ಇಲ್ಲಿಗೆ ಬಂದು ಆಗುತ್ತಿರುವ ಕೆಲಸಗಳನ್ನು ನೋಡಲಿ, ಇವು ಕೇಂದ್ರದ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಯೋಜನೆಗಳು ಎಂದರು.</p>.<p>ಎರಡು ದಿನಕ್ಕೊಮ್ಮೆ ರೈಲಿನ ಮೂಲಕ ರಾಜ್ಯದ ಎಳನೀರು, ಮಾವಿನಹಣ್ಣು ಮತ್ತು ಟೊಮೇಟೊವನ್ನು ದೆಹಲಿಗೆ ಕಳುಹಿಸಲಾಗುತ್ತಿದ್ದು, ಒಂದು ರೈಲಿನಲ್ಲಿ ಕಳಿಸಿದ್ದಕ್ಕೆ ₹24 ಲಕ್ಷ ಲಾಭ ಆಗುತ್ತಿದೆ. ರೈತನಿಗೆ ಉತ್ತಮ ಬೆಲೆ ಸಿಗಲಿ ಎಂಬ ಕಾರಣಕ್ಕೆ ಇಂತಹ ಪ್ರಯತ್ನಕ್ಕೆ ಕೈಹಾಕಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.</p>.<p><a href="https://www.prajavani.net/district/bagalkot/snake-catcher-in-bagalkot-died-due-to-indian-cobra-bite-841883.html" itemprop="url">ಬಾಗಲಕೋಟೆ: ನಾಗರಹಾವು ಕಚ್ಚಿ ಉರಗ ಮಿತ್ರ ಸದಾಶಿವ ಕರಣಿ ಸಾವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>