‘ಜಲಸಂಪನ್ಮೂಲಗಳ ರಕ್ಷಣೆ, ಹವಾಮಾನ ಬದಲಾವಣೆ ಸಮಸ್ಯೆಗಳು, ಹೆಚ್ಚುತ್ತಿರುವ ಮಾಲಿನ್ಯದಂತಹ ವಿಷಯಗಳ ಕುರಿತು ಜಾಗೃತಿ ಮೂಡಿಸುವುದು ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಪ್ರಮುಖ ಶಿಫಾರಸುಗಳಲ್ಲಿ ಒಂದು. ಸುಸ್ಥಿರ ಅಭಿವೃದ್ಧಿ ಗುರಿಗಳು ನಮ್ಮ ದೃಷ್ಟಿ ಮತ್ತು ಚಿಂತನೆಯ ಅಡಿಪಾಯ. ಜನರ ಮೇಲೆ ಪರಿಣಾಮ ಬೀರುತ್ತಿರುವ ಪರಿಸರ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯಪ್ರವೃತ್ತರಾಗಿದ್ದೇವೆ. ಇದಕ್ಕಾಗಿ ರಾಜ್ಯಮಟ್ಟದ ಯೋಜನೆಗಳನ್ನು ಆರಂಭಿಸಲಾಗಿದ್ದು, ಇದರಲ್ಲಿ ರಾಜ್ಯಗಳ ಭಾಗವಹಿಸುವಿಕೆ ಬಹು ಮುಖ್ಯ’ ಎಂದರು.