<p><strong>ಬೆಂಗಳೂರು</strong>: ‘ಬೆಂಗಳೂರು ಕಸ ನಿರ್ವಹಣೆ ನಿಯಮಿತ’ ಕಂಪನಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನೇಮಕಾತಿ ಪ್ರಕ್ರಿಯೆಯನ್ನು ನಿರ್ವಹಿಸಲು ಆರು ಮಂದಿ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ನಗರಾಭಿವೃದ್ಧಿ ಇಲಾಖೆ ಬುಧವಾರ ರಚಿಸಿದೆ.</p>.<p>ಸರ್ಕಾರದ ಹೆಚ್ಚುವರಿ ಮುಖ್ಯ ಆಯುಕ್ತ/ಅಭಿವೃದ್ಧಿ ಆಯುಕ್ತರು ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಬಿಎಂಪಿಯ ಮುಖ್ಯ ಆಯುಕ್ತರು, ಕಸ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರು, ನಗರದ ಬಡತನ ನಿರ್ಮೂಲನೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ರಮೇಶ್ ಎಂ.ಕೆ, ಬೆಂಗಳೂರಿನ ಕಸ ನಿರ್ವಹಣೆ ರೌಂಡ್ ಟೇಬಲ್ ಸಂಸ್ಥೆಯ ಸಂಸ್ಥಾಪಕಿ ಸಂಧ್ಯಾ ನಾರಾಯಣನ್ ಈ ಸಮಿತಿಯ ಸದಸ್ಯರಾಗಿದ್ದಾರೆ. ಬಿಬಿಎಂಪಿಯ ಕಸ ನಿರ್ವಹಣೆ ವಿಭಾಗದ ಜಂಟಿ ಆಯುಕ್ತರು ಈ ಸಮಿತಿಯ ಸದಸ್ಯ ಕಾರ್ಯದರ್ಶಿ ಆಗಿದ್ದಾರೆ.</p>.<p>ಬೆಂಗಳೂರು ಕಸ ನಿರ್ವಹಣೆ ನಿಯಮಿತ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಲು ಬಯಸುವ ಉದ್ಯೋಗಾಕಾಂಕ್ಷಿಗಳ ಸಂದರ್ಶನವನ್ನುಈ ಸಮಿತಿಯು ನಡೆಸಲಿದೆ. ಸೂಕ್ತ ಅಭ್ಯರ್ಥಿಗಳ ವಿವರಗಳನ್ನು ಕಂಪನಿಯ ಆಡಳಿತ ಮಂಡಳಿಯ ಮುಂದೆ ಮಂಡಿಸಲಿದೆ.</p>.<p>‘ಬೆಂಗಳೂರು ಕಸ ನಿರ್ವಹಣೆ ನಿಯಮಿತ’ ಕಂಪನಿಯನ್ನು ಕೇಂದ್ರ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಾಯಿಸಲಾಗಿದೆ. 2021ರ ಮೇ 22ರಿಂದ ಈ ಕಂಪನಿ ಅಸ್ತಿತ್ವಕ್ಕೆ ಬಂದಿದೆ. ಹೊಸ ಕಾರ್ಯ ನಿರ್ವಾಹಕ ಅಧಿಕಾರಿಯ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳ್ಳಲಿದ್ದು, ಜುಲೈ 1ರಿಂದ ಕಂಪನಿ ಕಾರ್ಯರಂಭಗೊಳಿಸಲಿದೆ. ಬಳಿಕ ಬೆಂಗಳೂರಿನ ಕಸ ನಿರ್ವಹಣೆಯ ಹೊಣೆ ಈ ಕಂಪನಿಯದ್ದಾಗಲಿದೆ’ ಎಂದು ನಗರಾಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೆಂಗಳೂರು ಕಸ ನಿರ್ವಹಣೆ ನಿಯಮಿತ’ ಕಂಪನಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನೇಮಕಾತಿ ಪ್ರಕ್ರಿಯೆಯನ್ನು ನಿರ್ವಹಿಸಲು ಆರು ಮಂದಿ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ನಗರಾಭಿವೃದ್ಧಿ ಇಲಾಖೆ ಬುಧವಾರ ರಚಿಸಿದೆ.</p>.<p>ಸರ್ಕಾರದ ಹೆಚ್ಚುವರಿ ಮುಖ್ಯ ಆಯುಕ್ತ/ಅಭಿವೃದ್ಧಿ ಆಯುಕ್ತರು ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಬಿಎಂಪಿಯ ಮುಖ್ಯ ಆಯುಕ್ತರು, ಕಸ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರು, ನಗರದ ಬಡತನ ನಿರ್ಮೂಲನೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ರಮೇಶ್ ಎಂ.ಕೆ, ಬೆಂಗಳೂರಿನ ಕಸ ನಿರ್ವಹಣೆ ರೌಂಡ್ ಟೇಬಲ್ ಸಂಸ್ಥೆಯ ಸಂಸ್ಥಾಪಕಿ ಸಂಧ್ಯಾ ನಾರಾಯಣನ್ ಈ ಸಮಿತಿಯ ಸದಸ್ಯರಾಗಿದ್ದಾರೆ. ಬಿಬಿಎಂಪಿಯ ಕಸ ನಿರ್ವಹಣೆ ವಿಭಾಗದ ಜಂಟಿ ಆಯುಕ್ತರು ಈ ಸಮಿತಿಯ ಸದಸ್ಯ ಕಾರ್ಯದರ್ಶಿ ಆಗಿದ್ದಾರೆ.</p>.<p>ಬೆಂಗಳೂರು ಕಸ ನಿರ್ವಹಣೆ ನಿಯಮಿತ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಲು ಬಯಸುವ ಉದ್ಯೋಗಾಕಾಂಕ್ಷಿಗಳ ಸಂದರ್ಶನವನ್ನುಈ ಸಮಿತಿಯು ನಡೆಸಲಿದೆ. ಸೂಕ್ತ ಅಭ್ಯರ್ಥಿಗಳ ವಿವರಗಳನ್ನು ಕಂಪನಿಯ ಆಡಳಿತ ಮಂಡಳಿಯ ಮುಂದೆ ಮಂಡಿಸಲಿದೆ.</p>.<p>‘ಬೆಂಗಳೂರು ಕಸ ನಿರ್ವಹಣೆ ನಿಯಮಿತ’ ಕಂಪನಿಯನ್ನು ಕೇಂದ್ರ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಾಯಿಸಲಾಗಿದೆ. 2021ರ ಮೇ 22ರಿಂದ ಈ ಕಂಪನಿ ಅಸ್ತಿತ್ವಕ್ಕೆ ಬಂದಿದೆ. ಹೊಸ ಕಾರ್ಯ ನಿರ್ವಾಹಕ ಅಧಿಕಾರಿಯ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳ್ಳಲಿದ್ದು, ಜುಲೈ 1ರಿಂದ ಕಂಪನಿ ಕಾರ್ಯರಂಭಗೊಳಿಸಲಿದೆ. ಬಳಿಕ ಬೆಂಗಳೂರಿನ ಕಸ ನಿರ್ವಹಣೆಯ ಹೊಣೆ ಈ ಕಂಪನಿಯದ್ದಾಗಲಿದೆ’ ಎಂದು ನಗರಾಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>