ಸರ್ಕಾರದ ಹೆಚ್ಚುವರಿ ಮುಖ್ಯ ಆಯುಕ್ತ/ಅಭಿವೃದ್ಧಿ ಆಯುಕ್ತರು ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಬಿಎಂಪಿಯ ಮುಖ್ಯ ಆಯುಕ್ತರು, ಕಸ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರು, ನಗರದ ಬಡತನ ನಿರ್ಮೂಲನೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ರಮೇಶ್ ಎಂ.ಕೆ, ಬೆಂಗಳೂರಿನ ಕಸ ನಿರ್ವಹಣೆ ರೌಂಡ್ ಟೇಬಲ್ ಸಂಸ್ಥೆಯ ಸಂಸ್ಥಾಪಕಿ ಸಂಧ್ಯಾ ನಾರಾಯಣನ್ ಈ ಸಮಿತಿಯ ಸದಸ್ಯರಾಗಿದ್ದಾರೆ. ಬಿಬಿಎಂಪಿಯ ಕಸ ನಿರ್ವಹಣೆ ವಿಭಾಗದ ಜಂಟಿ ಆಯುಕ್ತರು ಈ ಸಮಿತಿಯ ಸದಸ್ಯ ಕಾರ್ಯದರ್ಶಿ ಆಗಿದ್ದಾರೆ.