ಮಡಿವಾಳ ಸಂಚಾರ ಠಾಣೆ ಎದುರು ಇತ್ತೀಚೆಗೆ ಬಂದಿದ್ದ ಶಂಕರ್, ಕೈಯಲ್ಲಿ ಅನ್ನದ ಪೊಟ್ಟಣ ಹಿಡಿದಿದ್ದರು. ‘ಕುಡಿಯಲು ನೀರು ಕೊಡಿ’ ಎಂದು ಜನರ ಬಳಿ ಅಲೆದಾಡುತ್ತಿದ್ದರು. ಅವರ ಸ್ಥಿತಿ ನೋಡಿ ಭಯಗೊಂಡಿದ್ದ ಜನ, ನೀರು ಕೊಡಲು ಹಿಂದೇಟು ಹಾಕಿದ್ದರು. ಸ್ಥಳದಲ್ಲೇ ಕರ್ತವ್ಯದಲ್ಲಿದ್ದ ಪಿಎಸ್ಐ ಶಿವರಾಜ್, ಶಂಕರ್ ಅವರಿಗೆ ನೀರು ಕೊಟ್ಟು ಪೂರ್ವಾಪರ ವಿಚಾರಿಸಿದ್ದರು. ಅವಾಗಲೇ ಅವರೊಬ್ಬ ಟೈಲರ್ ಎಂಬುದು ಗೊತ್ತಾಗಿತ್ತು.