<p><strong>ಬೆಂಗಳೂರು</strong>: ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಆನೇಕಲ್ ತಾಲ್ಲೂಕಿನ ಕೊಮ್ಮಸಂದ್ರದ ವೆಂಕಟೇಶ್ ಅಲಿಯಾಸ್ ಜಾಕಿ (45) ಬಂಧಿತ.</p>.<p>ಆರೋಪಿಯಿಂದ ₹10 ಲಕ್ಷ ಮೌಲ್ಯದ 23 ಗ್ರಾಂ ಚಿನ್ನಾಭರಣ, 2 ಕೆ.ಜಿ 600 ಗ್ರಾಂ ಬೆಳ್ಳಿಯ ವಸ್ತು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು</p>.<p>ಸಿಂಗಸಂದ್ರದ ದೇವಸ್ಥಾನದಲ್ಲಿ ಕಳ್ಳತನ ನಡೆದಿತ್ತು. ಅರ್ಚಕರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು.</p>.<p>‘ಸಿಂಗಸಂದ್ರದ ದೇವಸ್ಥಾನದ ಬಾಗಿಲಿಗೆ ಹಾಕಿದ್ದ ಬೀಗ ಒಡೆದು ಒಳಕ್ಕೆ ನುಗ್ಗಿದ್ದ ಆರೋಪಿ, ಗರ್ಭಗುಡಿಯಲ್ಲಿದ್ದ ಹುಂಡಿಯ ಹಣ ಹಾಗೂ ದೇವರ ವಿಗ್ರಹದಲ್ಲಿದ್ದ ಚಿನ್ನವನ್ನು ಕಳ್ಳತನ ಮಾಡಿದ್ದ. ಕದ್ದ ಚಿನ್ನವನ್ನು ಪರಿಚಯವಿದ್ದ ವ್ಯಕ್ತಿಯೊಬ್ಬರ ಮನೆಯಲ್ಲಿ ಇಟ್ಟಿದ್ದ’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಯ ಬಂಧನದಿಂದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು, ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಆನೇಕಲ್ ತಾಲ್ಲೂಕಿನ ಕೊಮ್ಮಸಂದ್ರದ ವೆಂಕಟೇಶ್ ಅಲಿಯಾಸ್ ಜಾಕಿ (45) ಬಂಧಿತ.</p>.<p>ಆರೋಪಿಯಿಂದ ₹10 ಲಕ್ಷ ಮೌಲ್ಯದ 23 ಗ್ರಾಂ ಚಿನ್ನಾಭರಣ, 2 ಕೆ.ಜಿ 600 ಗ್ರಾಂ ಬೆಳ್ಳಿಯ ವಸ್ತು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು</p>.<p>ಸಿಂಗಸಂದ್ರದ ದೇವಸ್ಥಾನದಲ್ಲಿ ಕಳ್ಳತನ ನಡೆದಿತ್ತು. ಅರ್ಚಕರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು.</p>.<p>‘ಸಿಂಗಸಂದ್ರದ ದೇವಸ್ಥಾನದ ಬಾಗಿಲಿಗೆ ಹಾಕಿದ್ದ ಬೀಗ ಒಡೆದು ಒಳಕ್ಕೆ ನುಗ್ಗಿದ್ದ ಆರೋಪಿ, ಗರ್ಭಗುಡಿಯಲ್ಲಿದ್ದ ಹುಂಡಿಯ ಹಣ ಹಾಗೂ ದೇವರ ವಿಗ್ರಹದಲ್ಲಿದ್ದ ಚಿನ್ನವನ್ನು ಕಳ್ಳತನ ಮಾಡಿದ್ದ. ಕದ್ದ ಚಿನ್ನವನ್ನು ಪರಿಚಯವಿದ್ದ ವ್ಯಕ್ತಿಯೊಬ್ಬರ ಮನೆಯಲ್ಲಿ ಇಟ್ಟಿದ್ದ’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಯ ಬಂಧನದಿಂದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು, ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>