<p><strong>ಬೆಂಗಳೂರು</strong>: ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗಾಗಿ ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಹೆಬ್ಬಾಳ ಜಂಕ್ಷನ್ವರೆಗಿನ ಹೊರ ವರ್ತುಲ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೆಗೆದುಕೊಳ್ಳಬೇಕಿರುವ ಸೂಕ್ತ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ, ಅವರು ಮಾತನಾಡಿದರು.</p>.<p>ರಸ್ತೆ ಗುಂಡಿಗಳನ್ನು ಮುಚ್ಚುವುದು, ರಸ್ತೆ ಮೇಲ್ಮೈ ದುರಸ್ತಿ, ಜಂಕ್ಷನ್ಗಳ ಅಭಿವೃದ್ಧಿ, ವೈಟ್ ಟಾಪಿಂಗ್ ಕಾಮಗಾರಿ, ರಸ್ತೆಗಳ ಮೇಲೆ ನೀರು ನಿಲ್ಲದಂತೆ ಕ್ರಮವಹಿಸಲು ಹಾಗೂ ಮೆಟ್ರೊ ಕಾಮಗಾರಿ ನಡೆಯುವ ಕಡೆ ರಸ್ತೆಗಳನ್ನು ಸುಸ್ಥಿತಿಯಲ್ಲಿಡಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಮೆಟ್ರೊ, ಜಲಮಂಡಳಿ, ಬೆಸ್ಕಾಂ, ಜಲಮಂಡಳಿಯ ಕಾಮಗಾರಿ ನಡೆಯುತ್ತಿರುವ ಕಡೆ ರಸ್ತೆಗಳನ್ನು ಅವರೇ ಸುಸ್ಥಿತಿಯಲ್ಲಿಡಬೇಕು. ಆ ರಸ್ತೆಯಲ್ಲಿ ಮೇಲ್ಮೈ ಹಾಳಾಗಿದ್ದರೆ, ರಸ್ತೆ ಗುಂಡಿಗಳು ಬಿದ್ದಿದ್ದರೆ ಅವರೇ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಈ ಸಂಬಂಧ ವಿವಿಧ ಇಲಾಖೆಗಳು ಕಾಮಗಾರಿ ನಡೆಯುವ ರಸ್ತೆಗಳಲ್ಲಿ ಯಾವ ಇಲಾಖೆ ಕಾಮಗಾರಿ ನಡೆಸುತ್ತಿದೆ ಎಂಬ ನಾಮಫಲಕವನ್ನು ಅಳವಡಿಸಬೇಕು’ ಎಂದರು.</p>.<p>ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ಜಲಾವೃತವಾಗುವುದನ್ನು ತಪ್ಪಿಸಬೇಕು. ಈ ಸಂಬಂಧ ರಾಜಕಾಲುವೆಗಳಲ್ಲಿ ನಿರಂತರವಾಗಿ ಹೂಳೆತ್ತಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಅಗರ ಕೆರೆ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಇಬ್ಲೂರು ಜಂಕ್ಷನ್ ಬಳಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಸ್ಕೈವಾಕ್ ನಿರ್ಮಾಣ ಮಾಡಬೇಕು. ಹೊರವರ್ತುಲ ರಸ್ತೆಯಲ್ಲಿ 20 ಸ್ಥಳಗಳಲ್ಲಿ ಸರ್ವೀಸ್ ರಸ್ತೆಯಿಂದ ಪ್ರಮುಖ ರಸ್ತೆಗೆ ಒಳಗೆ-ಹೊರಗೆ ಹೋಗಲು ವಿನ್ಯಾಸ ರೂಪಿಸಿದರೆ ಶೇ 30ರಿಂದ 40ರಷ್ಟು ಸಂಚಾರ ದಟ್ಟಣೆ ಕಡಿಮೆ ಆಗಲಿದೆ. ಈ ಸಂಬಂಧ ಪಾಲಿಕೆ ಹಾಗೂ ಸಂಚಾರಿ ವಿಭಾಗದ ಸಹಕಾರದೊಂದಿಗೆ ವಿನ್ಯಾಸ ರೂಪಿಸಿ ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.</p>.<p>ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಶಾಂತಲಾ ನಗರದ ಲಾಂಗ್ ಫೋರ್ಡ್ ರಸ್ತೆಯಲ್ಲಿ, ರಸ್ತೆ ಮೇಲ್ಮೈ ಹಾಳಾಗಿರುವುದನ್ನು ಗಮನಿಸಿ, ಅವರೇ ಮೊಬೈಲ್ನಲ್ಲಿ ಫೋಟೊ ತೆಗೆದು ಸಂಬಂಧಪಟ್ಟ ಅಧಿಕಾರಿಗೆ ಕಳುಹಿಸಿ ದುರಸ್ತಿ ಕಾರ್ಯ ಕೈಗೊಳ್ಳಲು ಹೇಳಿದರು.</p>.<p>ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್, ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್, ನಗರ ಪಾಲಿಕೆ ಆಯುಕ್ತರಾದ ಕೆ.ಎನ್ ರಮೇಶ್, ರಮೇಶ್ ಡಿ.ಎಸ್, ಪೊಮ್ಮಲ ಸುನೀಲ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗಾಗಿ ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಹೆಬ್ಬಾಳ ಜಂಕ್ಷನ್ವರೆಗಿನ ಹೊರ ವರ್ತುಲ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೆಗೆದುಕೊಳ್ಳಬೇಕಿರುವ ಸೂಕ್ತ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ, ಅವರು ಮಾತನಾಡಿದರು.</p>.<p>ರಸ್ತೆ ಗುಂಡಿಗಳನ್ನು ಮುಚ್ಚುವುದು, ರಸ್ತೆ ಮೇಲ್ಮೈ ದುರಸ್ತಿ, ಜಂಕ್ಷನ್ಗಳ ಅಭಿವೃದ್ಧಿ, ವೈಟ್ ಟಾಪಿಂಗ್ ಕಾಮಗಾರಿ, ರಸ್ತೆಗಳ ಮೇಲೆ ನೀರು ನಿಲ್ಲದಂತೆ ಕ್ರಮವಹಿಸಲು ಹಾಗೂ ಮೆಟ್ರೊ ಕಾಮಗಾರಿ ನಡೆಯುವ ಕಡೆ ರಸ್ತೆಗಳನ್ನು ಸುಸ್ಥಿತಿಯಲ್ಲಿಡಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಮೆಟ್ರೊ, ಜಲಮಂಡಳಿ, ಬೆಸ್ಕಾಂ, ಜಲಮಂಡಳಿಯ ಕಾಮಗಾರಿ ನಡೆಯುತ್ತಿರುವ ಕಡೆ ರಸ್ತೆಗಳನ್ನು ಅವರೇ ಸುಸ್ಥಿತಿಯಲ್ಲಿಡಬೇಕು. ಆ ರಸ್ತೆಯಲ್ಲಿ ಮೇಲ್ಮೈ ಹಾಳಾಗಿದ್ದರೆ, ರಸ್ತೆ ಗುಂಡಿಗಳು ಬಿದ್ದಿದ್ದರೆ ಅವರೇ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಈ ಸಂಬಂಧ ವಿವಿಧ ಇಲಾಖೆಗಳು ಕಾಮಗಾರಿ ನಡೆಯುವ ರಸ್ತೆಗಳಲ್ಲಿ ಯಾವ ಇಲಾಖೆ ಕಾಮಗಾರಿ ನಡೆಸುತ್ತಿದೆ ಎಂಬ ನಾಮಫಲಕವನ್ನು ಅಳವಡಿಸಬೇಕು’ ಎಂದರು.</p>.<p>ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ಜಲಾವೃತವಾಗುವುದನ್ನು ತಪ್ಪಿಸಬೇಕು. ಈ ಸಂಬಂಧ ರಾಜಕಾಲುವೆಗಳಲ್ಲಿ ನಿರಂತರವಾಗಿ ಹೂಳೆತ್ತಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಅಗರ ಕೆರೆ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಇಬ್ಲೂರು ಜಂಕ್ಷನ್ ಬಳಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಸ್ಕೈವಾಕ್ ನಿರ್ಮಾಣ ಮಾಡಬೇಕು. ಹೊರವರ್ತುಲ ರಸ್ತೆಯಲ್ಲಿ 20 ಸ್ಥಳಗಳಲ್ಲಿ ಸರ್ವೀಸ್ ರಸ್ತೆಯಿಂದ ಪ್ರಮುಖ ರಸ್ತೆಗೆ ಒಳಗೆ-ಹೊರಗೆ ಹೋಗಲು ವಿನ್ಯಾಸ ರೂಪಿಸಿದರೆ ಶೇ 30ರಿಂದ 40ರಷ್ಟು ಸಂಚಾರ ದಟ್ಟಣೆ ಕಡಿಮೆ ಆಗಲಿದೆ. ಈ ಸಂಬಂಧ ಪಾಲಿಕೆ ಹಾಗೂ ಸಂಚಾರಿ ವಿಭಾಗದ ಸಹಕಾರದೊಂದಿಗೆ ವಿನ್ಯಾಸ ರೂಪಿಸಿ ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.</p>.<p>ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಶಾಂತಲಾ ನಗರದ ಲಾಂಗ್ ಫೋರ್ಡ್ ರಸ್ತೆಯಲ್ಲಿ, ರಸ್ತೆ ಮೇಲ್ಮೈ ಹಾಳಾಗಿರುವುದನ್ನು ಗಮನಿಸಿ, ಅವರೇ ಮೊಬೈಲ್ನಲ್ಲಿ ಫೋಟೊ ತೆಗೆದು ಸಂಬಂಧಪಟ್ಟ ಅಧಿಕಾರಿಗೆ ಕಳುಹಿಸಿ ದುರಸ್ತಿ ಕಾರ್ಯ ಕೈಗೊಳ್ಳಲು ಹೇಳಿದರು.</p>.<p>ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್, ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್, ನಗರ ಪಾಲಿಕೆ ಆಯುಕ್ತರಾದ ಕೆ.ಎನ್ ರಮೇಶ್, ರಮೇಶ್ ಡಿ.ಎಸ್, ಪೊಮ್ಮಲ ಸುನೀಲ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>