<p><strong>ಬೆಂಗಳೂರು:</strong> ಸುಗಮ ಸಂಚಾರಕ್ಕೆ ಅನುವಾಗುವಂತೆ ಜಂಕ್ಷನ್ಗಳ ಸುತ್ತಮುತ್ತಲಿನ 200 ಮೀಟರ್ ರಸ್ತೆಗಳು ಸುಸ್ಥಿತಿಯಲ್ಲಿರುವಂತೆ ನಿರ್ವಹಣೆ ಮಾಡಬೇಕು ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಸೂಚಿಸಿದರು.</p>.<p>ಪ್ರಮುಖ ಜಂಕ್ಷನ್ಗಳಲ್ಲಿ ಸುಗಮವಾದ ಸಂಚಾರ ಇರಬೇಕು. ಜಂಕ್ಷನ್ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ 200 ಮೀಟರ್ ದೂರದವರೆಗೂ ಗುಂಡಿಗಳು ಇರಬಾರದು. ಮೇಲ್ಮೈ ಪದರ ಹಾಳಾಗಿರಬಾರದು ಹಾಗೂ ಯಾವುದೇ ಅಸಮತೋಲನಗಳಿಲ್ಲದಂತೆ ನಿರ್ವಹಣೆ ಮಾಡಬೇಕು ಎಂದು ಬುಧವಾರ ಪರಿಶೀಲನೆ ಸಂದರ್ಭದಲ್ಲಿ ಅಧಿಕಾರಿಗಳಿಗೆ ಆದೇಶಿಸಿದರು.</p>.<p>ಮಿಲ್ಲರ್ ಟ್ಯಾಂಕ್ ಬಂಡ್ ರಸ್ತೆ ಮತ್ತು ಜಸ್ಮಾ ಭವನ ರಸ್ತೆಗಳಲ್ಲಿ ಕಾರು ನಿಲುಗಡೆ ಮಾಡಿರುವುದನ್ನು ಗಮನಿಸಿದ ರಾಜೇಂದ್ರ ಚೋಳನ್, ‘ಇಂತಹ ರಸ್ತೆಗಳ ಪಟ್ಟಿ ಮಾಡಿಕೊಳ್ಳಬೇಕು. ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಯನ್ನು ಜಾರಿಗೊಳಿಸಬೇಕು’ ಎಂದರು.</p>.<p>ಜಸ್ಮಾ ಭವನ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ನ ಅಡುಗೆ ಕೋಣೆಗೆ ಭೇಟಿ ನೀಡಿ, ‘ಅಡುಗೆ ಮಾಡುವ ಕಂಟೇನರ್ಗಳನ್ನು ನಿತ್ಯ ಮುಚ್ಚಿಡಬೇಕು. ಶುಚಿತ್ವ ಕಾಯ್ದುಕೊಳ್ಳಬೇಕು’ ಎಂದು ಸೂಚನೆ ನೀಡಿದರು.</p>.<p>ತುಂಬಾ ದಿನಗಳಿಂದ ರಸ್ತೆ ಬದಿಯೇ ನಿಂತಿರುವಂತಹ ಅನಾಥ (ವಾರಸುದಾರರಿಲ್ಲದ) ವಾಹನಗಳ ಬಗ್ಗೆ ಸಂಚಾರ ವಿಭಾಗದ ಪೊಲೀಸರ ಗಮನಕ್ಕೆ ತಂದು ತೆರವುಗೊಳಿಸಬೇಕು. ಪಾದಚಾರಿ ಮಾರ್ಗವನ್ನು ಹಾನಿಗೊಳಿಸಿದವರಿಗೆ ದಂಡ ವಿಧಿಸಲು ಹೇಳಿದರು.</p>.<p>ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಉಪಸ್ಥಿತರಿದ್ದರು.</p>.<h2>ಪ್ರವಾಹ ತಪ್ಪಿಸಿ: </h2><h2></h2><p>ಹೆಬ್ಬಾಳ ಮೇಲ್ಸೇತುವೆಯ ವಿಮಾನ ನಿಲ್ದಾಣ ಮಾರ್ಗದ ಡೌನ್ ರ್ಯಾಂಪ್ ಬಳಿ ಜಲಾವೃತವಾಗದಂತೆ ಕಾಮಗಾರಿ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರು ಸೂಚಿಸಿದರು.</p>.<p>ದಾಸರಹಳ್ಳಿ ವ್ಯಾಪ್ತಿಯಲ್ಲಿ ಆಟೊ ಟಿಪ್ಪರ್ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಸ್ವಚ್ಛತಾ ಸಿಬ್ಬಂದಿಗೆ ಶೂಗಳನ್ನು ವಿತರಿಸಿದರು.</p>.<p>ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ, ರಿಜಿಸ್ಟರ್ ಪುಸ್ತಕವನ್ನು ಪರಿಶೀಲಿಸಿದರು. ಆಹಾರದ ಗುಣಮಟ್ಟ ಕಾಪಾಡಿಕೊಂಡು, ಕ್ಯಾಂಟೀನ್ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಲು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸುಗಮ ಸಂಚಾರಕ್ಕೆ ಅನುವಾಗುವಂತೆ ಜಂಕ್ಷನ್ಗಳ ಸುತ್ತಮುತ್ತಲಿನ 200 ಮೀಟರ್ ರಸ್ತೆಗಳು ಸುಸ್ಥಿತಿಯಲ್ಲಿರುವಂತೆ ನಿರ್ವಹಣೆ ಮಾಡಬೇಕು ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಸೂಚಿಸಿದರು.</p>.<p>ಪ್ರಮುಖ ಜಂಕ್ಷನ್ಗಳಲ್ಲಿ ಸುಗಮವಾದ ಸಂಚಾರ ಇರಬೇಕು. ಜಂಕ್ಷನ್ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ 200 ಮೀಟರ್ ದೂರದವರೆಗೂ ಗುಂಡಿಗಳು ಇರಬಾರದು. ಮೇಲ್ಮೈ ಪದರ ಹಾಳಾಗಿರಬಾರದು ಹಾಗೂ ಯಾವುದೇ ಅಸಮತೋಲನಗಳಿಲ್ಲದಂತೆ ನಿರ್ವಹಣೆ ಮಾಡಬೇಕು ಎಂದು ಬುಧವಾರ ಪರಿಶೀಲನೆ ಸಂದರ್ಭದಲ್ಲಿ ಅಧಿಕಾರಿಗಳಿಗೆ ಆದೇಶಿಸಿದರು.</p>.<p>ಮಿಲ್ಲರ್ ಟ್ಯಾಂಕ್ ಬಂಡ್ ರಸ್ತೆ ಮತ್ತು ಜಸ್ಮಾ ಭವನ ರಸ್ತೆಗಳಲ್ಲಿ ಕಾರು ನಿಲುಗಡೆ ಮಾಡಿರುವುದನ್ನು ಗಮನಿಸಿದ ರಾಜೇಂದ್ರ ಚೋಳನ್, ‘ಇಂತಹ ರಸ್ತೆಗಳ ಪಟ್ಟಿ ಮಾಡಿಕೊಳ್ಳಬೇಕು. ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಯನ್ನು ಜಾರಿಗೊಳಿಸಬೇಕು’ ಎಂದರು.</p>.<p>ಜಸ್ಮಾ ಭವನ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ನ ಅಡುಗೆ ಕೋಣೆಗೆ ಭೇಟಿ ನೀಡಿ, ‘ಅಡುಗೆ ಮಾಡುವ ಕಂಟೇನರ್ಗಳನ್ನು ನಿತ್ಯ ಮುಚ್ಚಿಡಬೇಕು. ಶುಚಿತ್ವ ಕಾಯ್ದುಕೊಳ್ಳಬೇಕು’ ಎಂದು ಸೂಚನೆ ನೀಡಿದರು.</p>.<p>ತುಂಬಾ ದಿನಗಳಿಂದ ರಸ್ತೆ ಬದಿಯೇ ನಿಂತಿರುವಂತಹ ಅನಾಥ (ವಾರಸುದಾರರಿಲ್ಲದ) ವಾಹನಗಳ ಬಗ್ಗೆ ಸಂಚಾರ ವಿಭಾಗದ ಪೊಲೀಸರ ಗಮನಕ್ಕೆ ತಂದು ತೆರವುಗೊಳಿಸಬೇಕು. ಪಾದಚಾರಿ ಮಾರ್ಗವನ್ನು ಹಾನಿಗೊಳಿಸಿದವರಿಗೆ ದಂಡ ವಿಧಿಸಲು ಹೇಳಿದರು.</p>.<p>ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಉಪಸ್ಥಿತರಿದ್ದರು.</p>.<h2>ಪ್ರವಾಹ ತಪ್ಪಿಸಿ: </h2><h2></h2><p>ಹೆಬ್ಬಾಳ ಮೇಲ್ಸೇತುವೆಯ ವಿಮಾನ ನಿಲ್ದಾಣ ಮಾರ್ಗದ ಡೌನ್ ರ್ಯಾಂಪ್ ಬಳಿ ಜಲಾವೃತವಾಗದಂತೆ ಕಾಮಗಾರಿ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರು ಸೂಚಿಸಿದರು.</p>.<p>ದಾಸರಹಳ್ಳಿ ವ್ಯಾಪ್ತಿಯಲ್ಲಿ ಆಟೊ ಟಿಪ್ಪರ್ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಸ್ವಚ್ಛತಾ ಸಿಬ್ಬಂದಿಗೆ ಶೂಗಳನ್ನು ವಿತರಿಸಿದರು.</p>.<p>ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ, ರಿಜಿಸ್ಟರ್ ಪುಸ್ತಕವನ್ನು ಪರಿಶೀಲಿಸಿದರು. ಆಹಾರದ ಗುಣಮಟ್ಟ ಕಾಪಾಡಿಕೊಂಡು, ಕ್ಯಾಂಟೀನ್ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಲು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>