<p><strong>ಬೆಂಗಳೂರು:</strong> ಮಾರಕಾಸ್ತ್ರ ತೋರಿಸಿ ನಗದು ಸುಲಿಗೆ ಹಾಗೂ ಸಿಲಿಂಡರ್, ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ರಾಯಚೂರಿನ ಸಯ್ಯದ್ ದೋರದ್ (26) ಮತ್ತು ಸಯ್ಯದ್ ಅಶ್ಚಲ್ (28) ಎಂಬುವರನ್ನು ಬಂಧಿಸಿ, ₹2.65 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನ ಹಾಗೂ ಎಂಟು ಗ್ಯಾಸ್ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ನೃಪತುಂಗ ರಸ್ತೆಯ ಶೆಡ್ವೊ೦ದರಲ್ಲಿ ವಾಸವಿದ್ದ ಗಾರೆ ಕೆಲಸಗಾರರೊಬ್ಬರಿಗೆ ಮಾರ್ಚ್ 28ರಂದು ಆರೋಪಿಗಳು ಮಾರಕಾಸ್ತ್ರ ತೋರಿಸಿ, ₹5 ಸಾವಿರ ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಗಾರೆ ಕೆಲಸಗಾರ ಪೊಲೀಸರಿಗೆ ದೂರು ನೀಡಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಬಾತ್ಮೀದಾರರ ಮಾಹಿತಿ ಮೇರೆಗೆ ವಿನಾಯಕನಗರ ಸರ್ಕಲ್ ಬಳಿ ಇಬ್ಬರು ವ್ಯಕ್ತಿಗಳನ್ನು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. </p>.<p>ವಿಚಾರಣೆ ವೇಳೆ ನಗದು ಸುಲಿಗೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಮಡಿವಾಳ, ಜಯನಗರ, ಕುಮಾರಸ್ವಾಮಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ದ್ವಿಚಕ್ರ ವಾಹನ ಹಾಗೂ ಸಿಲಿಂಡರ್ಗಳನ್ನು ಕಳವು ಮಾಡಿರುವುದು ಗೊತ್ತಾಗಿದೆ.</p>.<p>ಬನಶಂಕರಿಯ ಪ್ರಗತಿಪುರದ ಪರಿಚಿತ ವ್ಯಕ್ತಿಗೆ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದರೆ, ಜೆ.ಪಿ.ನಗರ 5ನೇ ಹಂತದಲ್ಲಿರುವ ಪರಿಚಿತನಿಗೆ ಗ್ಯಾಸ್ ಸಿಲಿಂಡರ್ ನೀಡಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ. ದ್ವಿಚಕ್ರ ವಾಹನಗಳು ಹಾಗೂ ಗ್ಯಾಸ್ ಸಿಲಿಂಡರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. </p>.<p>ಆರೋಪಿಗಳ ಬಂಧನದಿಂದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ 2 ದ್ವಿಚಕ್ರ ವಾಹನ, ಮಡಿವಾಳ, ಕುಮಾರಸ್ವಾಮಿ ಲೇಔಟ್, ಜಯನಗರ ಪೊಲೀಸ್ ಠಾಣೆಯ ತಲಾ ಒಂದು ದ್ವಿಚಕ್ರ ವಾಹನ ಕಳವು ಪ್ರಕರಣ ಸೇರಿ ಐದು ಪ್ರಕರಣಗಳು ಪತ್ತೆಯಾಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾರಕಾಸ್ತ್ರ ತೋರಿಸಿ ನಗದು ಸುಲಿಗೆ ಹಾಗೂ ಸಿಲಿಂಡರ್, ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ರಾಯಚೂರಿನ ಸಯ್ಯದ್ ದೋರದ್ (26) ಮತ್ತು ಸಯ್ಯದ್ ಅಶ್ಚಲ್ (28) ಎಂಬುವರನ್ನು ಬಂಧಿಸಿ, ₹2.65 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನ ಹಾಗೂ ಎಂಟು ಗ್ಯಾಸ್ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ನೃಪತುಂಗ ರಸ್ತೆಯ ಶೆಡ್ವೊ೦ದರಲ್ಲಿ ವಾಸವಿದ್ದ ಗಾರೆ ಕೆಲಸಗಾರರೊಬ್ಬರಿಗೆ ಮಾರ್ಚ್ 28ರಂದು ಆರೋಪಿಗಳು ಮಾರಕಾಸ್ತ್ರ ತೋರಿಸಿ, ₹5 ಸಾವಿರ ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಗಾರೆ ಕೆಲಸಗಾರ ಪೊಲೀಸರಿಗೆ ದೂರು ನೀಡಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಬಾತ್ಮೀದಾರರ ಮಾಹಿತಿ ಮೇರೆಗೆ ವಿನಾಯಕನಗರ ಸರ್ಕಲ್ ಬಳಿ ಇಬ್ಬರು ವ್ಯಕ್ತಿಗಳನ್ನು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. </p>.<p>ವಿಚಾರಣೆ ವೇಳೆ ನಗದು ಸುಲಿಗೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಮಡಿವಾಳ, ಜಯನಗರ, ಕುಮಾರಸ್ವಾಮಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ದ್ವಿಚಕ್ರ ವಾಹನ ಹಾಗೂ ಸಿಲಿಂಡರ್ಗಳನ್ನು ಕಳವು ಮಾಡಿರುವುದು ಗೊತ್ತಾಗಿದೆ.</p>.<p>ಬನಶಂಕರಿಯ ಪ್ರಗತಿಪುರದ ಪರಿಚಿತ ವ್ಯಕ್ತಿಗೆ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದರೆ, ಜೆ.ಪಿ.ನಗರ 5ನೇ ಹಂತದಲ್ಲಿರುವ ಪರಿಚಿತನಿಗೆ ಗ್ಯಾಸ್ ಸಿಲಿಂಡರ್ ನೀಡಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ. ದ್ವಿಚಕ್ರ ವಾಹನಗಳು ಹಾಗೂ ಗ್ಯಾಸ್ ಸಿಲಿಂಡರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. </p>.<p>ಆರೋಪಿಗಳ ಬಂಧನದಿಂದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ 2 ದ್ವಿಚಕ್ರ ವಾಹನ, ಮಡಿವಾಳ, ಕುಮಾರಸ್ವಾಮಿ ಲೇಔಟ್, ಜಯನಗರ ಪೊಲೀಸ್ ಠಾಣೆಯ ತಲಾ ಒಂದು ದ್ವಿಚಕ್ರ ವಾಹನ ಕಳವು ಪ್ರಕರಣ ಸೇರಿ ಐದು ಪ್ರಕರಣಗಳು ಪತ್ತೆಯಾಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>