ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 56ನೇ ಘಟಿಕೋತ್ಸವವನ್ನು ಈ ತಿಂಗಳ ಅಂತ್ಯಕ್ಕೆ ಮುಂದೂಡಲಾಗಿದೆ. ಈ ಮೊದಲು ಏಪ್ರಿಲ್ 8ಕ್ಕೆ ಘಟಿಕೋತ್ಸವ ನಿಗದಿಯಾಗಿತ್ತು. ಆದರೆ, ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಅವರ ನೇಮಕಾತಿ ಗೊಂದಲ ಹೈಕೋರ್ಟ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನೇಮಕಾತಿಯನ್ನು ರದ್ದುಪಡಿಸಿ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿತ್ತು.