‘ವಿಶ್ವವಿದ್ಯಾಲಯದ ಪದವಿ (ಯು.ಜಿ) ಹಾಗೂ ಸ್ನಾತಕೋತ್ತರ (ಪಿ.ಜಿ) ಪರೀಕ್ಷೆಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಲಾಗಿದೆ. ಉತ್ತರ ಪತ್ರಿಕೆಗಳನ್ನು ಸ್ಕ್ಯಾನಿಂಗ್ ಮಾಡಿ, ನಂತರ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಇದೇ ಕೆಲಸಕ್ಕೆ ನಿಯೋಜನೆಗೊಂಡಿದ್ದ ನೌಕರ ಮಂಜುನಾಥ್, ಭಾಗಶಃ ಖಾಲಿ ಬಿಡಲಾಗಿದ್ದ 41 ಉತ್ತರ ಪತ್ರಿಕೆಗಳನ್ನು ಅಕ್ರಮವಾಗಿ ಪುನಃ ಬರೆಸಿ ಫಲಿತಾಂಶದ ಮೇಲೆ ಪರಿಣಾಮ ಬೀರುವಂತೆ ಮಾಡಿರುವುದಾಗಿ ದೂರಿನಲ್ಲಿ ಕುಲಸಚಿವರು ಆರೋಪಿಸಿದ್ದಾರೆ’ ಎಂದು ತಿಳಿಸಿವೆ.