‘ಉತ್ತರ ಅಮೆರಿಕ ಸೇರಿದಂತೆ ಹಲವು ದೇಶದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು ಸಂಘಟನೆ ರಚಿಸಿಕೊಳ್ಳಬಹುದು. ಒಂದೆಡೆ ಸೇರಿಕೊಂಡು ಬೇಕುಬೇಡಗಳ ಕುರಿತು ಚರ್ಚಿಸಬಹುದು. ಆದರೆ, ಭಾರತದಲ್ಲಿ ಆ ಸ್ವಾತಂತ್ರ್ಯ ಇಲ್ಲ. ಅದರಲ್ಲೂ ಬೆಂಗಳೂರಿನಲ್ಲಿ ರ್ಯಾಲಿ, ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರ ಅನುಮತಿ ಬೇಕಿದೆ. ನಮ್ಮ ಪ್ರತಿಭಟನಾ ಹಕ್ಕನ್ನು ಪೊಲೀಸರೇ ನಿರ್ಧರಿಸುತ್ತಿದ್ದಾರೆ. ಬಹುತೇಕ ಸಂದರ್ಭದಲ್ಲಿ ಅವರು ಪ್ರತಿಭಟನೆಗೆ ಅವಕಾಶವನ್ನೇ ನೀಡುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದರು.