<p><strong>ಬೆಂಗಳೂರು</strong>: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ ಕ್ಯಾಂಪಸ್ನಲ್ಲಿ ಶೀಘ್ರದಲ್ಲೇ ಎಂಸಿಎ (ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್) ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲಾಗುವುದು ಎಂದು ಬಿಸಿಯು ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್ ತಿಳಿಸಿದರು.</p>.<p>ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬಿಸಿಯು ಪ್ರಥಮ ತಂಡದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸ್ನಾತಕೋತ್ತರ ಪದವಿಯಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಗೆ ಸಂಬಂಧಿಸಿದ ಕೋರ್ಸ್ ಆರಂಭಿಸುವುದರಿಂದ ಬಿಸಿಎ ಪದವೀಧರರಿಗೆ ಅನುಕೂಲವಾಗಲಿದೆ’ ಎಂದು ತಿಳಿಸಿದರು.</p>.<p>ಬಿಸಿಯು ವಿಶ್ರಾಂತ ಕುಲಪತಿ ಪ್ರೊ.ಲಿಂಗರಾಜ ಗಾಂಧಿ, ‘ಭವಿಷ್ಯದ ಬೆಳವಣಿಗೆಯಲ್ಲಿ ಕೃತಕ ಬುದ್ಧಿಮತ್ತೆ ಮಹತ್ವದ ಪಾತ್ರ ವಹಿಸುತ್ತದೆ. ಭಾರತದ ಆರ್ಥಿಕ ರಂಗದಲ್ಲಿ ಗಣಕ ವಿಜ್ಞಾನ ಪದವೀಧರರಿಗೆ ವಿಪುಲ ಉದ್ಯೋಗಾವಕಾಶಗಳಿವೆ. ಅಗತ್ಯಕ್ಕೆ ತಕ್ಕಂತೆ ಕೌಶಲ ಅಭಿವೃದ್ಧಿಪಡಿಸಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. </p>.<p>ನೂತನ ಕುಲಸಚಿವ ನವೀನ್ ಜೋಸೆಫ್ ಮಾತನಾಡಿದರು. ಬಿಸಿಯು ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ರಮೇಶ್ ಬಿ.ಕುಡೇನಟ್ಟಿ ಮಾತನಾಡಿದರು.</p>.<p>ಇದೇ ವೇಳೆ, ವಿವಿಧ ಶೈಕ್ಷಣಿಕ ಚಟುವಟಿಕೆ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ ಕ್ಯಾಂಪಸ್ನಲ್ಲಿ ಶೀಘ್ರದಲ್ಲೇ ಎಂಸಿಎ (ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್) ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲಾಗುವುದು ಎಂದು ಬಿಸಿಯು ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್ ತಿಳಿಸಿದರು.</p>.<p>ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬಿಸಿಯು ಪ್ರಥಮ ತಂಡದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸ್ನಾತಕೋತ್ತರ ಪದವಿಯಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಗೆ ಸಂಬಂಧಿಸಿದ ಕೋರ್ಸ್ ಆರಂಭಿಸುವುದರಿಂದ ಬಿಸಿಎ ಪದವೀಧರರಿಗೆ ಅನುಕೂಲವಾಗಲಿದೆ’ ಎಂದು ತಿಳಿಸಿದರು.</p>.<p>ಬಿಸಿಯು ವಿಶ್ರಾಂತ ಕುಲಪತಿ ಪ್ರೊ.ಲಿಂಗರಾಜ ಗಾಂಧಿ, ‘ಭವಿಷ್ಯದ ಬೆಳವಣಿಗೆಯಲ್ಲಿ ಕೃತಕ ಬುದ್ಧಿಮತ್ತೆ ಮಹತ್ವದ ಪಾತ್ರ ವಹಿಸುತ್ತದೆ. ಭಾರತದ ಆರ್ಥಿಕ ರಂಗದಲ್ಲಿ ಗಣಕ ವಿಜ್ಞಾನ ಪದವೀಧರರಿಗೆ ವಿಪುಲ ಉದ್ಯೋಗಾವಕಾಶಗಳಿವೆ. ಅಗತ್ಯಕ್ಕೆ ತಕ್ಕಂತೆ ಕೌಶಲ ಅಭಿವೃದ್ಧಿಪಡಿಸಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. </p>.<p>ನೂತನ ಕುಲಸಚಿವ ನವೀನ್ ಜೋಸೆಫ್ ಮಾತನಾಡಿದರು. ಬಿಸಿಯು ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ರಮೇಶ್ ಬಿ.ಕುಡೇನಟ್ಟಿ ಮಾತನಾಡಿದರು.</p>.<p>ಇದೇ ವೇಳೆ, ವಿವಿಧ ಶೈಕ್ಷಣಿಕ ಚಟುವಟಿಕೆ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>