<p><strong>ಬೆಂಗಳೂರು</strong>: ಉದ್ಯಮಿಯ ವಿಲ್ಲಾದಲ್ಲಿ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಮಂಜುನಾಥ, ಚಂದನ್, ನರೇಂದ್ರ ಹಾಗೂ ಮಂಜಿತ್ ಬಂಧಿತರು.</p>.<p>ಬಂಧಿತರಿಂದ 550 ಗ್ರಾಂ ಚಿನ್ನಾಭರಣ, ನಾಲ್ಕು ಕೆ.ಜಿ ಬೆಳ್ಳಿಯ ವಸ್ತುಗಳು, ₹ 4 ಲಕ್ಷ ನಗದು, 1 ದ್ವಿಚಕ್ರ ವಾಹನ ಸೇರಿದಂತೆ ₹1.3 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಗೋಪಾಲ್ ಶಿಂಧೆ ಎಂಬುವರಿಗೆ ಸೇರಿದ ಲಕ್ಷ್ಮಿಪುರ ಕ್ರಾಸ್ ಬಳಿಯ ಡೊನಾಟಾ ಕೌಂಟಿ ವಿಲ್ಲಾದಲ್ಲಿ ಡಿಸೆಂಬರ್ 24ರಂದು ಕಳ್ಳತನ ನಡೆದಿತ್ತು. ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಉದ್ಯಮಿ ವಿಲ್ಲಾದಲ್ಲಿ ಬಿಹಾರದ ಮಂಜಿತ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ದೊಡ್ಡಬಳ್ಳಾಪುರದ ನರೇಂದ್ರ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಅವರಿಬ್ಬರೂ ಮಂಜುನಾಥ್ ಹಾಗೂ ಚಂದನ್ ಜತೆಗೆ ಸೇರಿಕೊಂಡು ಕೃತ್ಯ ಎಸಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p class="Subhead">ಕಳ್ಳತನ ಮಾಡಿ ಶ್ರೀಮಂತರಾಗಲು ಯೋಜನೆ: ಉದ್ಯಮಿಯ ವಿಲ್ಲಾಗೆ ಕನ್ನ ಹಾಕಿ ಶ್ರೀಮಂತರಾಗಲು ಆರೋಪಿಗಳು ಯೋಜನೆ ರೂಪಿಸಿದ್ದರು. ಸಣ್ಣಪುಟ್ಟ ಕಳ್ಳತನ ಮಾಡಿಕೊಂಡಿದ್ದ ಮಂಜುನಾಥ್ಗೆ ಮಂಜಿತ್ ಹಾಗೂ ನರೇಂದ್ರ ವಿಷಯ ತಿಳಿಸಿದ್ದರು. ಅದರಂತೆ ಮೂರು ತಿಂಗಳಿಂದ ಕಳ್ಳತನಕ್ಕೆ ಯೋಜನೆ ರೂಪಿಸಿದ್ದರು. ಈ ನಡುವೆ ಉದ್ಯಮಿ ಮನೆಯವರು ಕ್ರಿಸ್ಮಸ್ ರಜೆಗೆ ಪ್ರವಾಸಕ್ಕೆ ತೆರಳಿದ್ದರು. ಆಗ ನಾಲ್ವರು ವಿಲ್ಲಾದಲ್ಲಿ ಕಳ್ಳತನ ಮಾಡಿದ್ದರು ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿಗಳ ಪೈಕಿ ಮಂಜುನಾಥ ಧರ್ಮಸ್ಥಳದ ಭಕ್ತನಾಗಿದ್ದ. ಕಳ್ಳತನದ ಬಳಿಕ ಹರಕೆ ತೀರಿಸಲು ಚಂದನ್ ಮತ್ತು ಮಂಜುನಾಥ್ ಧರ್ಮಸ್ಥಳಕ್ಕೆ ತೆರಳಿದ್ದರು. ನಂತರ, ಸುಮಾರು ಮೂರು ದಿನಗಳ ಕಾಲ ಕದ್ದ ದುಡ್ಡಲ್ಲಿ ಪ್ರವಾಸ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಗೋಪಾಲ್ ಶಿಂಧೆ ಅವರು ಪ್ರವಾಸ ಮುಗಿಸಿ ವಿಲ್ಲಾಗೆ ವಾಪಸ್ ಆಗಿದ್ದರು. ವಿಲ್ಲಾದಲ್ಲಿ ಪರಿಶೀಲನೆ ನಡೆಸಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿತ್ತು. ಬಳಿಕ ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಬಟ್ಟೆ ಒಗೆಯುವ ಸಂದರ್ಭದಲ್ಲಿ ಜೇಬಿನಲ್ಲಿ ಹಣ ಸಿಕ್ಕಿದರೂ ಮಂಜಿತ್ ವಾಪಸ್ ಕೊಡುತ್ತಿದ್ದ. ಮನೆ ಕೆಲಸದವರ ಮೇಲೆ ಉದ್ಯಮಿಗೆ ಅನುಮಾನ ಬಂದಿರಲಿಲ್ಲ. ಆದರೆ, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ನಾಲ್ವರು ಕೃತ್ಯ ಎಸಗಿರುವುದು ಪತ್ತೆಯಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉದ್ಯಮಿಯ ವಿಲ್ಲಾದಲ್ಲಿ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಮಂಜುನಾಥ, ಚಂದನ್, ನರೇಂದ್ರ ಹಾಗೂ ಮಂಜಿತ್ ಬಂಧಿತರು.</p>.<p>ಬಂಧಿತರಿಂದ 550 ಗ್ರಾಂ ಚಿನ್ನಾಭರಣ, ನಾಲ್ಕು ಕೆ.ಜಿ ಬೆಳ್ಳಿಯ ವಸ್ತುಗಳು, ₹ 4 ಲಕ್ಷ ನಗದು, 1 ದ್ವಿಚಕ್ರ ವಾಹನ ಸೇರಿದಂತೆ ₹1.3 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಗೋಪಾಲ್ ಶಿಂಧೆ ಎಂಬುವರಿಗೆ ಸೇರಿದ ಲಕ್ಷ್ಮಿಪುರ ಕ್ರಾಸ್ ಬಳಿಯ ಡೊನಾಟಾ ಕೌಂಟಿ ವಿಲ್ಲಾದಲ್ಲಿ ಡಿಸೆಂಬರ್ 24ರಂದು ಕಳ್ಳತನ ನಡೆದಿತ್ತು. ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಉದ್ಯಮಿ ವಿಲ್ಲಾದಲ್ಲಿ ಬಿಹಾರದ ಮಂಜಿತ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ದೊಡ್ಡಬಳ್ಳಾಪುರದ ನರೇಂದ್ರ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಅವರಿಬ್ಬರೂ ಮಂಜುನಾಥ್ ಹಾಗೂ ಚಂದನ್ ಜತೆಗೆ ಸೇರಿಕೊಂಡು ಕೃತ್ಯ ಎಸಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p class="Subhead">ಕಳ್ಳತನ ಮಾಡಿ ಶ್ರೀಮಂತರಾಗಲು ಯೋಜನೆ: ಉದ್ಯಮಿಯ ವಿಲ್ಲಾಗೆ ಕನ್ನ ಹಾಕಿ ಶ್ರೀಮಂತರಾಗಲು ಆರೋಪಿಗಳು ಯೋಜನೆ ರೂಪಿಸಿದ್ದರು. ಸಣ್ಣಪುಟ್ಟ ಕಳ್ಳತನ ಮಾಡಿಕೊಂಡಿದ್ದ ಮಂಜುನಾಥ್ಗೆ ಮಂಜಿತ್ ಹಾಗೂ ನರೇಂದ್ರ ವಿಷಯ ತಿಳಿಸಿದ್ದರು. ಅದರಂತೆ ಮೂರು ತಿಂಗಳಿಂದ ಕಳ್ಳತನಕ್ಕೆ ಯೋಜನೆ ರೂಪಿಸಿದ್ದರು. ಈ ನಡುವೆ ಉದ್ಯಮಿ ಮನೆಯವರು ಕ್ರಿಸ್ಮಸ್ ರಜೆಗೆ ಪ್ರವಾಸಕ್ಕೆ ತೆರಳಿದ್ದರು. ಆಗ ನಾಲ್ವರು ವಿಲ್ಲಾದಲ್ಲಿ ಕಳ್ಳತನ ಮಾಡಿದ್ದರು ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿಗಳ ಪೈಕಿ ಮಂಜುನಾಥ ಧರ್ಮಸ್ಥಳದ ಭಕ್ತನಾಗಿದ್ದ. ಕಳ್ಳತನದ ಬಳಿಕ ಹರಕೆ ತೀರಿಸಲು ಚಂದನ್ ಮತ್ತು ಮಂಜುನಾಥ್ ಧರ್ಮಸ್ಥಳಕ್ಕೆ ತೆರಳಿದ್ದರು. ನಂತರ, ಸುಮಾರು ಮೂರು ದಿನಗಳ ಕಾಲ ಕದ್ದ ದುಡ್ಡಲ್ಲಿ ಪ್ರವಾಸ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಗೋಪಾಲ್ ಶಿಂಧೆ ಅವರು ಪ್ರವಾಸ ಮುಗಿಸಿ ವಿಲ್ಲಾಗೆ ವಾಪಸ್ ಆಗಿದ್ದರು. ವಿಲ್ಲಾದಲ್ಲಿ ಪರಿಶೀಲನೆ ನಡೆಸಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿತ್ತು. ಬಳಿಕ ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಬಟ್ಟೆ ಒಗೆಯುವ ಸಂದರ್ಭದಲ್ಲಿ ಜೇಬಿನಲ್ಲಿ ಹಣ ಸಿಕ್ಕಿದರೂ ಮಂಜಿತ್ ವಾಪಸ್ ಕೊಡುತ್ತಿದ್ದ. ಮನೆ ಕೆಲಸದವರ ಮೇಲೆ ಉದ್ಯಮಿಗೆ ಅನುಮಾನ ಬಂದಿರಲಿಲ್ಲ. ಆದರೆ, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ನಾಲ್ವರು ಕೃತ್ಯ ಎಸಗಿರುವುದು ಪತ್ತೆಯಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>