ಬೆಂಗಳೂರು: ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ), ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಹಾಗೂ ಕಾವಲ್ಭೈರಸಂದ್ರದಲ್ಲಿ ನಡೆದಿದ್ದ ಗಲಭೆ ಸಂಬಂಧ ಮತ್ತೆ ಎಂಟು ಆರೋಪಿಗಳನ್ನು ಪೂರ್ವ ವಿಭಾಗದ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿಗಳಾದ ಸೈಯದ್ ಅಯಾಜ್, ಸೈಯದ್ ತಬ್ರೇಜ್, ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಪಾಷಾ, ಜಮೀರ್ ಪಾಷಾ ಹಾಗೂ ಇಲಾಯಿದ್ ಬಂಧಿತರು. ಇನ್ನಿಬ್ಬರ ಹೆಸರು ಗೊತ್ತಾಗಿಲ್ಲ.
‘ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರೋಪಿಗಳು, ಆಗಸ್ಟ್ 11ರಂದು ನಡೆದ ಗಲಭೆಯಲ್ಲಿ ಭಾಗಿಯಾಗಿದ್ದರು. ವಿಡಿಯೊ ಹಾಗೂ ಮೊಬೈಲ್ ಕರೆಗಳ ವಿವರಗಳನ್ನು ಆಧರಿಸಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.