<p><strong>ಬೆಂಗಳೂರು:</strong> ಗಲಭೆ ವೇಳೆ ಬೆಂಕಿ ಹಚ್ಚಿ ತಮ್ಮ ಮನೆ ಸುಟ್ಟಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಡಿ.ಜೆ.ಹಳ್ಳಿ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.</p>.<p>ಮಧ್ಯಾಹ್ನ ಠಾಣೆಗೆ ಬಂದಿದ್ದ ಅವರು, ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರನ್ನು ಭೇಟಿಯಾಗಿ 25 ನಿಮಿಷ ಚರ್ಚೆ ನಡೆಸಿದರು. ಅಂದು ನಡೆದ ಘಟನೆ ಬಗ್ಗೆ ವಿವರಿಸಿ ಲಿಖಿತವಾಗಿ ದೂರು ನೀಡಿದರು.</p>.<p>ಡಿ.ಜೆ.ಹಳ್ಳಿ ಠಾಣೆಯ ವಾಹನಗಳು ಸುಟ್ಟ ಅವಶೇಷಗಳನ್ನು ನೋಡಿ ದಂಗಾದರು. ಮನೆಗಿಂತಲೂ ಠಾಣೆಯಲ್ಲೇ ಹೆಚ್ಚು ಹಾನಿಯಾಗಿದೆಯಲ್ಲ ಎಂದು ಬೆಂಬಲಿಗರ ಜೊತೆ ಮಾತನಾಡಿದರು.</p>.<p>ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಶ್ರೀನಿವಾಸಮೂರ್ತಿ, ‘ನನ್ನ ತಂದೆ ಕಟ್ಟಿದ್ದ ಹಾಗೂ ನಾನು ಆಡಿ ಬೆಳೆದ ಮನೆ ಸುಟ್ಟು ಕರಕಲಾಗಿದೆ. ತಾಯಿ ನೆನಪಿಗೆ ಇದ್ದ ತಾಳಿಯೂ ಕಾಣಿಸುತ್ತಿಲ್ಲ’ ಎಂದು ಭಾವುಕರಾದರು.</p>.<p>‘ಅಂದಾಜು ₹ 3 ಕೋಟಿಯಷ್ಟು ಹಾನಿಯಾಗಿದೆ. ಇಡೀ ಮನೆಯನ್ನು ಕೆಡವಬೇಕು. ತಂದೆ-ತಾಯಿ ನಮ್ಮನ್ನು ಸಾಕಿದ ಮನೆಯನ್ನು ಈ ಸ್ಥಿತಿಯಲ್ಲಿ ನೋಡಿ ದುಃಖವಾಗುತ್ತಿದೆ. ಇಂಥ ಮನೆಯಲ್ಲಿ ನಾವು ಇನ್ನು ಮುಂದೆ ಹೇಗೆ ಇರಬೇಕು. ಸುಟ್ಟಿರುವ ಮನೆಯನ್ನು ಕಿಡಿಗೇಡಿಗಳು ವಾಪಸು ನೀಡುವರೇ’ ಎಂದು ಪ್ರಶ್ನಿಸಿದರು.</p>.<p>‘ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಬೇಕು ಹಾಗೂ ಗಲಭೆ ಸೃಷ್ಟಿಸಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿ ಪೊಲೀಸರಿಗೆ ದೂರು ನೀಡಿದ್ದೇನೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗಲಭೆ ವೇಳೆ ಬೆಂಕಿ ಹಚ್ಚಿ ತಮ್ಮ ಮನೆ ಸುಟ್ಟಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಡಿ.ಜೆ.ಹಳ್ಳಿ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.</p>.<p>ಮಧ್ಯಾಹ್ನ ಠಾಣೆಗೆ ಬಂದಿದ್ದ ಅವರು, ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರನ್ನು ಭೇಟಿಯಾಗಿ 25 ನಿಮಿಷ ಚರ್ಚೆ ನಡೆಸಿದರು. ಅಂದು ನಡೆದ ಘಟನೆ ಬಗ್ಗೆ ವಿವರಿಸಿ ಲಿಖಿತವಾಗಿ ದೂರು ನೀಡಿದರು.</p>.<p>ಡಿ.ಜೆ.ಹಳ್ಳಿ ಠಾಣೆಯ ವಾಹನಗಳು ಸುಟ್ಟ ಅವಶೇಷಗಳನ್ನು ನೋಡಿ ದಂಗಾದರು. ಮನೆಗಿಂತಲೂ ಠಾಣೆಯಲ್ಲೇ ಹೆಚ್ಚು ಹಾನಿಯಾಗಿದೆಯಲ್ಲ ಎಂದು ಬೆಂಬಲಿಗರ ಜೊತೆ ಮಾತನಾಡಿದರು.</p>.<p>ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಶ್ರೀನಿವಾಸಮೂರ್ತಿ, ‘ನನ್ನ ತಂದೆ ಕಟ್ಟಿದ್ದ ಹಾಗೂ ನಾನು ಆಡಿ ಬೆಳೆದ ಮನೆ ಸುಟ್ಟು ಕರಕಲಾಗಿದೆ. ತಾಯಿ ನೆನಪಿಗೆ ಇದ್ದ ತಾಳಿಯೂ ಕಾಣಿಸುತ್ತಿಲ್ಲ’ ಎಂದು ಭಾವುಕರಾದರು.</p>.<p>‘ಅಂದಾಜು ₹ 3 ಕೋಟಿಯಷ್ಟು ಹಾನಿಯಾಗಿದೆ. ಇಡೀ ಮನೆಯನ್ನು ಕೆಡವಬೇಕು. ತಂದೆ-ತಾಯಿ ನಮ್ಮನ್ನು ಸಾಕಿದ ಮನೆಯನ್ನು ಈ ಸ್ಥಿತಿಯಲ್ಲಿ ನೋಡಿ ದುಃಖವಾಗುತ್ತಿದೆ. ಇಂಥ ಮನೆಯಲ್ಲಿ ನಾವು ಇನ್ನು ಮುಂದೆ ಹೇಗೆ ಇರಬೇಕು. ಸುಟ್ಟಿರುವ ಮನೆಯನ್ನು ಕಿಡಿಗೇಡಿಗಳು ವಾಪಸು ನೀಡುವರೇ’ ಎಂದು ಪ್ರಶ್ನಿಸಿದರು.</p>.<p>‘ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಬೇಕು ಹಾಗೂ ಗಲಭೆ ಸೃಷ್ಟಿಸಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿ ಪೊಲೀಸರಿಗೆ ದೂರು ನೀಡಿದ್ದೇನೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>