<p><strong>ಬೆಂಗಳೂರು:</strong> ಬ್ಯಾಡರಹಳ್ಳಿ ಸೇರಿ ನಗರದ ವಿವಿಧೆಡೆ ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ವಾಹನಗಳ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹಾನಿ ಮಾಡಿದ್ದಾರೆ.</p>.<p>ಸುಮಾರು 20ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಇದೀಗ ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.</p>.<p>ಬ್ಯಾಡರಹಳ್ಳಿಯ ರಸ್ತೆಬದಿ ನಿಲುಗಡೆ ಮಾಡಲಾಗಿದ್ದ ಕಾರುಗಳ ಗಾಜುಗಳನ್ನು ಆರೋಪಿಗಳು ಒಡೆದು ಹಾನಿ ಮಾಡಿದ್ದಾರೆ. 15 ಕಾರುಗಳು, 1 ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ. ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇನ್ನು ಅನ್ನಪೂರ್ಣೇಶ್ವರಿ ನಗರದ ಮುದ್ದಯ್ಯನ ಪಾಳ್ಯದಲ್ಲಿ ಬುಧವಾರ ರಾತ್ರಿ ಆರೋಪಿಗಳು ದೊಣ್ಣೆ ಹಿಡಿದು ತಿರುಗಾಡುತ್ತಾ ರಸ್ತೆಬದಿಯಲ್ಲಿ ನಿಲ್ಲಿಸಿದ್ದ 6 ಕಾರುಗಳು ಹಾಗೂ 1 ಆಟೊರಿಕ್ಷಾಕ್ಕೆ ಹಾನಿ ಮಾಡಿದ್ದಾರೆ.</p>.<p>ನಂತರ, ಮಾಗಡಿ ರಸ್ತೆಗೆ ತೆರಳಿ ಅಲ್ಲೂ ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ಹಾಲಿನ ಕ್ಯಾಂಟರ್ ವಾಹನದೊಳಗೆ ಮಲಗಿದ್ದ ಚಾಲಕನನ್ನು ಬೆದರಿಸಿ ಅವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಹಾಗೂ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬ್ಯಾಡರಹಳ್ಳಿ ಸೇರಿ ನಗರದ ವಿವಿಧೆಡೆ ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ವಾಹನಗಳ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹಾನಿ ಮಾಡಿದ್ದಾರೆ.</p>.<p>ಸುಮಾರು 20ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಇದೀಗ ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.</p>.<p>ಬ್ಯಾಡರಹಳ್ಳಿಯ ರಸ್ತೆಬದಿ ನಿಲುಗಡೆ ಮಾಡಲಾಗಿದ್ದ ಕಾರುಗಳ ಗಾಜುಗಳನ್ನು ಆರೋಪಿಗಳು ಒಡೆದು ಹಾನಿ ಮಾಡಿದ್ದಾರೆ. 15 ಕಾರುಗಳು, 1 ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ. ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇನ್ನು ಅನ್ನಪೂರ್ಣೇಶ್ವರಿ ನಗರದ ಮುದ್ದಯ್ಯನ ಪಾಳ್ಯದಲ್ಲಿ ಬುಧವಾರ ರಾತ್ರಿ ಆರೋಪಿಗಳು ದೊಣ್ಣೆ ಹಿಡಿದು ತಿರುಗಾಡುತ್ತಾ ರಸ್ತೆಬದಿಯಲ್ಲಿ ನಿಲ್ಲಿಸಿದ್ದ 6 ಕಾರುಗಳು ಹಾಗೂ 1 ಆಟೊರಿಕ್ಷಾಕ್ಕೆ ಹಾನಿ ಮಾಡಿದ್ದಾರೆ.</p>.<p>ನಂತರ, ಮಾಗಡಿ ರಸ್ತೆಗೆ ತೆರಳಿ ಅಲ್ಲೂ ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ಹಾಲಿನ ಕ್ಯಾಂಟರ್ ವಾಹನದೊಳಗೆ ಮಲಗಿದ್ದ ಚಾಲಕನನ್ನು ಬೆದರಿಸಿ ಅವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಹಾಗೂ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>