<p><strong>ಬೆಂಗಳೂರು</strong>: ‘ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸಿಇಒ ಕರೀಗೌಡ ಅವರು ಗುತ್ತಿಗೆದಾರರಿಗೆ ಬೆದರಿಕೆ ಹಾಕಿ, ಖಾಲಿ ಕಾಗದಕ್ಕೆ ಸಹಿ ಹಾಕಿಸಿಕೊಳ್ಳುತ್ತಿದ್ದಾರೆ. ಸಾಕ್ಷ್ಯ ನಾಶಕ್ಕೂ ಮುಂದಾಗಿದ್ದಾರೆ’ ಎಂದು ಆರೋಪಿಸಿ ಕಸ ಗುತ್ತಿಗೆದಾರರ ಸಂಘದಿಂದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.</p>.<p>ಈ ಮೂಲಕ ಬೆಂಗಳೂರು ಮಹಾನಗರ ಸ್ವಚ್ಛತೆ ಮತ್ತು ಲಾರಿ ಮಾಲೀಕರ–ಗುತ್ತಿಗೆದಾರರ ಸಂಘ ಹಾಗೂ ಕರೀಗೌಡ ನಡುವಿನ ಸಂಘರ್ಷ ಮತ್ತೊಂದು ಹಂತಕ್ಕೆ ತಲುಪಿದೆ.</p>.<p>‘ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ವಹಿವಾಟಿನಿಂದ ಉತ್ಪತ್ತಿಯಾಗುವ ಕಸದ ವಿಲೇವಾರಿ ಬಗ್ಗೆ ಚರ್ಚಿಸಲು ನಮ್ಮ ಗುತ್ತಿಗೆದಾರರನ್ನು ಬಿಎಸ್ಡಬ್ಲ್ಯುಎಂಎಲ್ನ ಕಚೇರಿಗೆ ಕರೀಗೌಡ ಅವರು ಏಪ್ರಿಲ್ 30ರಂದು ಮಧ್ಯಾಹ್ನ 1 ಗಂಟೆಗೆ ಕರೆದಿದ್ದರು. ಮಹದೇವಪುರ ಮತ್ತು ಕೆ.ಆರ್. ಪುರ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಜ್ಯೋತಿ ಮತ್ತು ಶ್ರೀನಿಧಿ ಅವರು ಸಭೆಯಲ್ಲಿ ಹಾಜರಿದ್ದರು. ಸಭೆಯ ಹಾಜರಾತಿ ಪುಸ್ತಕದಲ್ಲಿ ಹಾಳೆ ಇರಿಸಿ, ಬೆದರಿಕೆ ತಂತ್ರವಾಗಿ ನೀವು ಘನತ್ಯಾಜ್ಯ ನಿರ್ವಹಣೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೇ? ಇಲ್ಲವೇ ಎಂದು ಪ್ರಶ್ನಿಸಿದ್ದಾರೆ’ ಎಂದು ಮುಖ್ಯ ಕಾರ್ಯದರ್ಶಿಯವರಿಗೆ ಬರೆದಿರುವ ಪತ್ರದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎನ್. ಬಾಲಸುಬ್ರಮಣಿಯಂ ತಿಳಿಸಿದ್ದಾರೆ.</p>.<p>‘ಸಂಘದ ಪದಾಧಿಕಾರಿಗಳಾಗಿದ್ದಲ್ಲಿ ಮುಚ್ಚಳಿಕೆ ಪತ್ರವನ್ನು ನೀಡುವಂತೆ ಬೆದರಿಸಿದ್ದಾರೆ. ಅಲ್ಲದೆ, ಸಂಘದಲ್ಲಿ ಸದಸ್ಯರಾಗಿದ್ದರೆ ನಿಮಗೆ ಯಾವುದೇ ರೀತಿಯ ರಿಯಾಯಿತಿ ನೀಡುವುದಿಲ್ಲ. ಸಂಘದಲ್ಲಿ ಇಲ್ಲವೆಂದು ಸಹಿ ಹಾಕಿದರೆ ನಿಮಗೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ನಾವು ಈಗಾಗಲೇ ಕರೀಗೌಡ ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರಿನ ಪ್ರಮಾಣ ಪತ್ರ ಸಲ್ಲಿಸಿರುವುದರಿಂದ ಸಾಕ್ಷ್ಯ ನಾಶ ಮಾಡಲು ಹೊರಟಿದ್ದಾರೆ. ಆದ್ದರಿಂದ ಇವರ ವಿರುದ್ಧ ಬೆದರಿಕೆ ಮತ್ತು ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲಿಸಲು ಅನುಮತಿ ನೀಡಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೀಗೌಡ ಅವರನ್ನು ಸಂಪರ್ಕಿಸಿದಾಗ, ಅವರು ಸ್ಪಂದಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸಿಇಒ ಕರೀಗೌಡ ಅವರು ಗುತ್ತಿಗೆದಾರರಿಗೆ ಬೆದರಿಕೆ ಹಾಕಿ, ಖಾಲಿ ಕಾಗದಕ್ಕೆ ಸಹಿ ಹಾಕಿಸಿಕೊಳ್ಳುತ್ತಿದ್ದಾರೆ. ಸಾಕ್ಷ್ಯ ನಾಶಕ್ಕೂ ಮುಂದಾಗಿದ್ದಾರೆ’ ಎಂದು ಆರೋಪಿಸಿ ಕಸ ಗುತ್ತಿಗೆದಾರರ ಸಂಘದಿಂದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.</p>.<p>ಈ ಮೂಲಕ ಬೆಂಗಳೂರು ಮಹಾನಗರ ಸ್ವಚ್ಛತೆ ಮತ್ತು ಲಾರಿ ಮಾಲೀಕರ–ಗುತ್ತಿಗೆದಾರರ ಸಂಘ ಹಾಗೂ ಕರೀಗೌಡ ನಡುವಿನ ಸಂಘರ್ಷ ಮತ್ತೊಂದು ಹಂತಕ್ಕೆ ತಲುಪಿದೆ.</p>.<p>‘ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ವಹಿವಾಟಿನಿಂದ ಉತ್ಪತ್ತಿಯಾಗುವ ಕಸದ ವಿಲೇವಾರಿ ಬಗ್ಗೆ ಚರ್ಚಿಸಲು ನಮ್ಮ ಗುತ್ತಿಗೆದಾರರನ್ನು ಬಿಎಸ್ಡಬ್ಲ್ಯುಎಂಎಲ್ನ ಕಚೇರಿಗೆ ಕರೀಗೌಡ ಅವರು ಏಪ್ರಿಲ್ 30ರಂದು ಮಧ್ಯಾಹ್ನ 1 ಗಂಟೆಗೆ ಕರೆದಿದ್ದರು. ಮಹದೇವಪುರ ಮತ್ತು ಕೆ.ಆರ್. ಪುರ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಜ್ಯೋತಿ ಮತ್ತು ಶ್ರೀನಿಧಿ ಅವರು ಸಭೆಯಲ್ಲಿ ಹಾಜರಿದ್ದರು. ಸಭೆಯ ಹಾಜರಾತಿ ಪುಸ್ತಕದಲ್ಲಿ ಹಾಳೆ ಇರಿಸಿ, ಬೆದರಿಕೆ ತಂತ್ರವಾಗಿ ನೀವು ಘನತ್ಯಾಜ್ಯ ನಿರ್ವಹಣೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೇ? ಇಲ್ಲವೇ ಎಂದು ಪ್ರಶ್ನಿಸಿದ್ದಾರೆ’ ಎಂದು ಮುಖ್ಯ ಕಾರ್ಯದರ್ಶಿಯವರಿಗೆ ಬರೆದಿರುವ ಪತ್ರದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎನ್. ಬಾಲಸುಬ್ರಮಣಿಯಂ ತಿಳಿಸಿದ್ದಾರೆ.</p>.<p>‘ಸಂಘದ ಪದಾಧಿಕಾರಿಗಳಾಗಿದ್ದಲ್ಲಿ ಮುಚ್ಚಳಿಕೆ ಪತ್ರವನ್ನು ನೀಡುವಂತೆ ಬೆದರಿಸಿದ್ದಾರೆ. ಅಲ್ಲದೆ, ಸಂಘದಲ್ಲಿ ಸದಸ್ಯರಾಗಿದ್ದರೆ ನಿಮಗೆ ಯಾವುದೇ ರೀತಿಯ ರಿಯಾಯಿತಿ ನೀಡುವುದಿಲ್ಲ. ಸಂಘದಲ್ಲಿ ಇಲ್ಲವೆಂದು ಸಹಿ ಹಾಕಿದರೆ ನಿಮಗೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ನಾವು ಈಗಾಗಲೇ ಕರೀಗೌಡ ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರಿನ ಪ್ರಮಾಣ ಪತ್ರ ಸಲ್ಲಿಸಿರುವುದರಿಂದ ಸಾಕ್ಷ್ಯ ನಾಶ ಮಾಡಲು ಹೊರಟಿದ್ದಾರೆ. ಆದ್ದರಿಂದ ಇವರ ವಿರುದ್ಧ ಬೆದರಿಕೆ ಮತ್ತು ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲಿಸಲು ಅನುಮತಿ ನೀಡಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೀಗೌಡ ಅವರನ್ನು ಸಂಪರ್ಕಿಸಿದಾಗ, ಅವರು ಸ್ಪಂದಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>