<p><strong>ಬೆಂಗಳೂರು:</strong> ಬೆಂಗಳೂರು ಜಲಮಂಡಳಿ ಆರಂಭಿಸಿರುವ ನೀಲಿಪಡೆ ಒಂದೇ ತಿಂಗಳಲ್ಲಿ 4,000ಕ್ಕೂ ಹೆಚ್ಚಿನ ಕಡೆ ತಪಾಸಣೆ ನಡೆಸಿ ನೂರಾರು ಅಕ್ರಮ ಸಂಪರ್ಕಗಳನ್ನು ಪತ್ತೆ ಹಚ್ಚಿದೆ.</p>.<p>ಕಳೆದ ತಿಂಗಳ 18ರಂದು ಜಲಮಂಡಳಿಯ ವಿಶೇಷ ಕಾರ್ಯಪಡೆ ಅಸ್ತಿತ್ವಕ್ಕೆ ಬಂದಿದೆ. ಡಿ.20 ರಂದು ನೀಲಿಪಡೆಯ ತಂಡಗಳು ನಗರದ ನಾಲ್ಕು ವಲಯಗಳಲ್ಲಿ 237 ಕಟ್ಟಡಗಳ ಪರಿಶೀಲನೆ ನಡೆಸಿ, ಅಕ್ರಮವಾಗಿ ನೀರು ಬಳಸುತ್ತಿದ್ದ 70 ಸಂಪರ್ಕಗಳನ್ನು ಸ್ಥಳದಲ್ಲೇ ಕಡಿತಗೊಳಿಸಲಾಗಿದೆ.</p>.<p>ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಕಾರ್ಯಾಚರಣೆ ನಡೆದಿದ್ದು, 61 ಕಟ್ಟಡಗಳ ತಪಾಸಣೆ ನಡೆಸಿ 33 ಅಕ್ರಮ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ಪೂರ್ವ ವಲಯದಲ್ಲಿ 18, ಪಶ್ಚಿಮ ವಲಯದಲ್ಲಿ 15 ಹಾಗೂ ಉತ್ತರ ವಲಯದಲ್ಲಿ 4 ಸಂಪರ್ಕ ಕಡಿತ ಮಾಡಲಾಗಿದೆ.</p>.<p>‘ನೀರಿನ ಕಳ್ಳತನ ಮತ್ತು ಅನಧಿಕೃತ ಸಂಪರ್ಕಗಳಿಂದ ಮಂಡಳಿಗೆ ಆಗುತ್ತಿರುವ ಆದಾಯ ಸೋರಿಕೆ ತಡೆಗಟ್ಟಲು ನೀಲಿಪಡೆ ರಚಿಸಲಾಗಿದೆ. ಅಕ್ರಮ ಸಂಪರ್ಕ ಹೊಂದಿರುವವರು ಕೂಡಲೇ ಸಕ್ರಮಗೊಳಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡ ಮತ್ತು ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಜಲಮಂಡಳಿ ಆರಂಭಿಸಿರುವ ನೀಲಿಪಡೆ ಒಂದೇ ತಿಂಗಳಲ್ಲಿ 4,000ಕ್ಕೂ ಹೆಚ್ಚಿನ ಕಡೆ ತಪಾಸಣೆ ನಡೆಸಿ ನೂರಾರು ಅಕ್ರಮ ಸಂಪರ್ಕಗಳನ್ನು ಪತ್ತೆ ಹಚ್ಚಿದೆ.</p>.<p>ಕಳೆದ ತಿಂಗಳ 18ರಂದು ಜಲಮಂಡಳಿಯ ವಿಶೇಷ ಕಾರ್ಯಪಡೆ ಅಸ್ತಿತ್ವಕ್ಕೆ ಬಂದಿದೆ. ಡಿ.20 ರಂದು ನೀಲಿಪಡೆಯ ತಂಡಗಳು ನಗರದ ನಾಲ್ಕು ವಲಯಗಳಲ್ಲಿ 237 ಕಟ್ಟಡಗಳ ಪರಿಶೀಲನೆ ನಡೆಸಿ, ಅಕ್ರಮವಾಗಿ ನೀರು ಬಳಸುತ್ತಿದ್ದ 70 ಸಂಪರ್ಕಗಳನ್ನು ಸ್ಥಳದಲ್ಲೇ ಕಡಿತಗೊಳಿಸಲಾಗಿದೆ.</p>.<p>ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಕಾರ್ಯಾಚರಣೆ ನಡೆದಿದ್ದು, 61 ಕಟ್ಟಡಗಳ ತಪಾಸಣೆ ನಡೆಸಿ 33 ಅಕ್ರಮ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ಪೂರ್ವ ವಲಯದಲ್ಲಿ 18, ಪಶ್ಚಿಮ ವಲಯದಲ್ಲಿ 15 ಹಾಗೂ ಉತ್ತರ ವಲಯದಲ್ಲಿ 4 ಸಂಪರ್ಕ ಕಡಿತ ಮಾಡಲಾಗಿದೆ.</p>.<p>‘ನೀರಿನ ಕಳ್ಳತನ ಮತ್ತು ಅನಧಿಕೃತ ಸಂಪರ್ಕಗಳಿಂದ ಮಂಡಳಿಗೆ ಆಗುತ್ತಿರುವ ಆದಾಯ ಸೋರಿಕೆ ತಡೆಗಟ್ಟಲು ನೀಲಿಪಡೆ ರಚಿಸಲಾಗಿದೆ. ಅಕ್ರಮ ಸಂಪರ್ಕ ಹೊಂದಿರುವವರು ಕೂಡಲೇ ಸಕ್ರಮಗೊಳಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡ ಮತ್ತು ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>