<p><strong>ಬೆಂಗಳೂರು</strong>: ಜಲಮಂಡಳಿಯಿಂದ ಹೊಸದಾಗಿ ನಿರ್ಮಿಸುತ್ತಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ<br>(ಎಸ್ಟಿಪಿ) ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ<br>ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿ. ರಾಮ್ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದರು.</p><p>ಜಲಮಂಡಳಿಯ ವೃಷಭಾವತಿ ವ್ಯಾಲಿಯ(ವಿವಿ) 150 ಎಂಎಲ್ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕದ (ಎಸ್ಟಿಪಿ)ಯೋಜನೆ ಹಾಗೂ ಮೈಲಸಂದ್ರದಲ್ಲಿ ಉನ್ನತೀಕರಿಸಲಾಗುತ್ತಿರುವ ಎಸ್ಟಿಪಿ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.</p><p>ಮೈಲಸಂದ್ರ ಎಸ್ಟಿಪಿ ಕಾಮಗಾರಿ ಪೂರ್ಣಗೊಳಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಬೇಕು’ ಎಂದರು. ವೃಷಭಾವತಿ ವ್ಯಾಲಿ ಯೋಜನೆಯ ಕಾಮಗಾರಿಯನ್ನು 2026ರ ಮಾರ್ಚ್ ವೇಳೆಗೆ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.</p><p>ಇದೇ ವೇಳೆ ಈ ಎರಡೂ ಸ್ಥಳಗಳಲ್ಲಿ ಅಧ್ಯಕ್ಷರು ಸೇರಿದಂತೆ ಜಲ<br>ಮಂಡಳಿ ಸಿಬ್ಬಂದಿ 350 ಗಿಡಗಳನ್ನು ನೆಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಲಮಂಡಳಿಯಿಂದ ಹೊಸದಾಗಿ ನಿರ್ಮಿಸುತ್ತಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ<br>(ಎಸ್ಟಿಪಿ) ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ<br>ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿ. ರಾಮ್ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದರು.</p><p>ಜಲಮಂಡಳಿಯ ವೃಷಭಾವತಿ ವ್ಯಾಲಿಯ(ವಿವಿ) 150 ಎಂಎಲ್ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕದ (ಎಸ್ಟಿಪಿ)ಯೋಜನೆ ಹಾಗೂ ಮೈಲಸಂದ್ರದಲ್ಲಿ ಉನ್ನತೀಕರಿಸಲಾಗುತ್ತಿರುವ ಎಸ್ಟಿಪಿ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.</p><p>ಮೈಲಸಂದ್ರ ಎಸ್ಟಿಪಿ ಕಾಮಗಾರಿ ಪೂರ್ಣಗೊಳಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಬೇಕು’ ಎಂದರು. ವೃಷಭಾವತಿ ವ್ಯಾಲಿ ಯೋಜನೆಯ ಕಾಮಗಾರಿಯನ್ನು 2026ರ ಮಾರ್ಚ್ ವೇಳೆಗೆ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.</p><p>ಇದೇ ವೇಳೆ ಈ ಎರಡೂ ಸ್ಥಳಗಳಲ್ಲಿ ಅಧ್ಯಕ್ಷರು ಸೇರಿದಂತೆ ಜಲ<br>ಮಂಡಳಿ ಸಿಬ್ಬಂದಿ 350 ಗಿಡಗಳನ್ನು ನೆಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>