<p><strong>ಬೆಂಗಳೂರು</strong>: ಮೊಬೈಲ್ ರಿಚಾರ್ಜ್ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಪತಿಯ ಮೇಲೆ ಕೋಪಗೊಂಡು ಪತ್ನಿ ಮನೆಯ ಮೂರನೇ ಮಹಡಿಯಿಂದ ಕಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. <br><br>ಉತ್ತರ ಪ್ರದೇಶದ ಮೂಲದ ಶಿಖಾ ದೇವಿ (28) ಮೃತ ಮಹಿಳೆ. 2019ರಲ್ಲಿ ಸಂದೀಪ್ ಕುಮಾರ್ ಅವರನ್ನು ಶಿಖಾದೇವಿ ಮದುವೆಯಾಗಿದ್ದು, ಎರಡು ವರ್ಷದ ಮಗನ ಜತೆ ದಂಪತಿ ಕೆಂಗೇರಿಯಲ್ಲಿ ವಾಸವಿದ್ದರು.</p>.<p>ಸಂದೀಪ್ ಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾನುವಾರ ಸಂಜೆ ತನ್ನ ಮೊಬೈಲ್ ಕರೆನ್ಸಿ ಖಾಲಿಯಾಗಿದ್ದು, ರಿಜಾರ್ಜ್ ಮಾಡಿಸುವಂತೆ ಪತಿಯನ್ನು ಕೇಳಿದ್ದರು. ಆದರೆ, ಸಂದೀಪ್ ನಿರಾಕರಿಸಿದ್ದರು. </p>.<p>ಈ ವೇಳೆ ಪತಿಯ ಮೇಲೆ ಕೋಪಗೊಂಡು, ಮೊಬೈಲ್ ಮನೆಯಲ್ಲಿಯೇ ಬಿಸಾಡಿ ಮೂರನೇ ಮಹಡಿಯಿಂದ ಕೆಳಗೆ ಹಾರಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರೂ ಮಾರ್ಗಮಧ್ಯೆ ಅಸುನೀಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಗರದ ಪೊಲೀಸರಿಗೆ ಮಾಹಿತಿ ನೀಡಿರುವ ಶಿಖಾ ಅವರ ತಂದೆ ಅನಿಲ್ ಕುಮಾರ್ ತ್ರಿಪಾಠಿ, ‘ದಂಪತಿ ಈ ಹಿಂದೆ ಜಗಳವಾಡಿರಲಿಲ್ಲ. ಸಾವಿನ ಹಿಂದೆ ಯಾವುದೇ ಅನುಮಾನವಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೊಬೈಲ್ ರಿಚಾರ್ಜ್ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಪತಿಯ ಮೇಲೆ ಕೋಪಗೊಂಡು ಪತ್ನಿ ಮನೆಯ ಮೂರನೇ ಮಹಡಿಯಿಂದ ಕಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. <br><br>ಉತ್ತರ ಪ್ರದೇಶದ ಮೂಲದ ಶಿಖಾ ದೇವಿ (28) ಮೃತ ಮಹಿಳೆ. 2019ರಲ್ಲಿ ಸಂದೀಪ್ ಕುಮಾರ್ ಅವರನ್ನು ಶಿಖಾದೇವಿ ಮದುವೆಯಾಗಿದ್ದು, ಎರಡು ವರ್ಷದ ಮಗನ ಜತೆ ದಂಪತಿ ಕೆಂಗೇರಿಯಲ್ಲಿ ವಾಸವಿದ್ದರು.</p>.<p>ಸಂದೀಪ್ ಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾನುವಾರ ಸಂಜೆ ತನ್ನ ಮೊಬೈಲ್ ಕರೆನ್ಸಿ ಖಾಲಿಯಾಗಿದ್ದು, ರಿಜಾರ್ಜ್ ಮಾಡಿಸುವಂತೆ ಪತಿಯನ್ನು ಕೇಳಿದ್ದರು. ಆದರೆ, ಸಂದೀಪ್ ನಿರಾಕರಿಸಿದ್ದರು. </p>.<p>ಈ ವೇಳೆ ಪತಿಯ ಮೇಲೆ ಕೋಪಗೊಂಡು, ಮೊಬೈಲ್ ಮನೆಯಲ್ಲಿಯೇ ಬಿಸಾಡಿ ಮೂರನೇ ಮಹಡಿಯಿಂದ ಕೆಳಗೆ ಹಾರಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರೂ ಮಾರ್ಗಮಧ್ಯೆ ಅಸುನೀಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಗರದ ಪೊಲೀಸರಿಗೆ ಮಾಹಿತಿ ನೀಡಿರುವ ಶಿಖಾ ಅವರ ತಂದೆ ಅನಿಲ್ ಕುಮಾರ್ ತ್ರಿಪಾಠಿ, ‘ದಂಪತಿ ಈ ಹಿಂದೆ ಜಗಳವಾಡಿರಲಿಲ್ಲ. ಸಾವಿನ ಹಿಂದೆ ಯಾವುದೇ ಅನುಮಾನವಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>