<p><strong>ಬೆಂಗಳೂರು:</strong> ಕೆರೆ ಒತ್ತುವರಿ ಮಾಡಿದ್ದ ಮಹಿಳೆಯೊಬ್ಬರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.</p>.<p>ಯಶವಂತಪುರ ಹೋಬಳಿ ಅಬ್ಬಿಗೆರೆ ಗ್ರಾಮದ ನಿವಾಸಿ ಜಿ.ಆರ್.ವಿಜಯಲಕ್ಷ್ಮಿ ಸದಾಶಿವರೆಡ್ಡಿ ಶಿಕ್ಷೆಗೆ ಒಳಗಾದವರು.</p>.<p>ಗ್ರಾಮದ ಸರ್ವೆ ನಂ.75ರಲ್ಲಿರುವ ಕೆರೆಗೆ ಸೇರಿದ 26.06 ಎಕರೆ ಜಮೀನಿನಲ್ಲಿ 9 ಗುಂಟೆಯನ್ನು ವಿಜಯಲಕ್ಷ್ಮಿ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಉತ್ತರ ತಾಲ್ಲೂಕು ತಹಶೀಲ್ದಾರ್ ದೂರು ನೀಡಿದ್ದರು. </p>.<p>2018ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ನ್ಯಾಯಾಲಯ ವಿಚಾರಣೆ ನಡೆಸಿತ್ತು. ಒತ್ತುವರಿ ಮಾಡಿಕೊಂಡಿರುವುದು ಸಾಬೀತಾಗಿದ್ದರಿಂದ ವಿಜಯಲಕ್ಷ್ಮಿ ಅವರಿಗೆ ಶಿಕ್ಷೆ ವಿಧಿಸಿ, ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ ಹಾಗೂ ಕಂದಾಯ ಸದಸ್ಯ ಕೆ.ಎಚ್.ಅಶ್ವತ್ಥನಾರಾಯಣಗೌಡ ಅವರಿದ್ದ ಪೀಠವು ತೀರ್ಪು ನೀಡಿದೆ.</p>.<p>ವಿಜಯಲಕ್ದ್ಮಿ ಅವರಿಗೆ ಒಂದು ವರ್ಷ ಸಾದಾ ಶಿಕ್ಷೆ , ₹5 ಸಾವಿರ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ಆಗದೇ ಇದ್ದರೆ 3 ತಿಂಗಳು ಹೆಚ್ಚುವರಿ ಸಾದಾ ಶಿಕ್ಷೆ ಅನುಭವಿಸಬೇಕಾಗುತ್ತದೆ.</p>.<p>ಒತ್ತುವರಿ ಮಾಡಿಕೊಂಡಿರುವ ಕೆರೆಯ ಜಮೀನನ್ನು ಕೂಡಲೇ ತೆರವುಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಉತ್ತರ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ನ್ಯಾಯಾಲಯದ ಸರ್ಕಾರಿ ಅಭಿಯೋಜಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆರೆ ಒತ್ತುವರಿ ಮಾಡಿದ್ದ ಮಹಿಳೆಯೊಬ್ಬರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.</p>.<p>ಯಶವಂತಪುರ ಹೋಬಳಿ ಅಬ್ಬಿಗೆರೆ ಗ್ರಾಮದ ನಿವಾಸಿ ಜಿ.ಆರ್.ವಿಜಯಲಕ್ಷ್ಮಿ ಸದಾಶಿವರೆಡ್ಡಿ ಶಿಕ್ಷೆಗೆ ಒಳಗಾದವರು.</p>.<p>ಗ್ರಾಮದ ಸರ್ವೆ ನಂ.75ರಲ್ಲಿರುವ ಕೆರೆಗೆ ಸೇರಿದ 26.06 ಎಕರೆ ಜಮೀನಿನಲ್ಲಿ 9 ಗುಂಟೆಯನ್ನು ವಿಜಯಲಕ್ಷ್ಮಿ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಉತ್ತರ ತಾಲ್ಲೂಕು ತಹಶೀಲ್ದಾರ್ ದೂರು ನೀಡಿದ್ದರು. </p>.<p>2018ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ನ್ಯಾಯಾಲಯ ವಿಚಾರಣೆ ನಡೆಸಿತ್ತು. ಒತ್ತುವರಿ ಮಾಡಿಕೊಂಡಿರುವುದು ಸಾಬೀತಾಗಿದ್ದರಿಂದ ವಿಜಯಲಕ್ಷ್ಮಿ ಅವರಿಗೆ ಶಿಕ್ಷೆ ವಿಧಿಸಿ, ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ ಹಾಗೂ ಕಂದಾಯ ಸದಸ್ಯ ಕೆ.ಎಚ್.ಅಶ್ವತ್ಥನಾರಾಯಣಗೌಡ ಅವರಿದ್ದ ಪೀಠವು ತೀರ್ಪು ನೀಡಿದೆ.</p>.<p>ವಿಜಯಲಕ್ದ್ಮಿ ಅವರಿಗೆ ಒಂದು ವರ್ಷ ಸಾದಾ ಶಿಕ್ಷೆ , ₹5 ಸಾವಿರ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ಆಗದೇ ಇದ್ದರೆ 3 ತಿಂಗಳು ಹೆಚ್ಚುವರಿ ಸಾದಾ ಶಿಕ್ಷೆ ಅನುಭವಿಸಬೇಕಾಗುತ್ತದೆ.</p>.<p>ಒತ್ತುವರಿ ಮಾಡಿಕೊಂಡಿರುವ ಕೆರೆಯ ಜಮೀನನ್ನು ಕೂಡಲೇ ತೆರವುಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಉತ್ತರ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ನ್ಯಾಯಾಲಯದ ಸರ್ಕಾರಿ ಅಭಿಯೋಜಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>