<p><strong>ಬೆಂಗಳೂರು</strong>: ಪತಿ ಹಾಗೂ ಅವರ ಕುಟುಂಬದವರ ಕಿರುಕುಳದಿಂದ ಬೇಸತ್ತು ಗಾನವಿ ಎಂಬವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಗುರುವಾರ ಬೆಂಗಳೂರಿನಲ್ಲಿ ವರದಿಯಾಗಿತ್ತು. ಈ ಸುದ್ದಿ ತಿಳಿದು ಆತಂಕಗೊಂಡ ಪತಿ ಸೂರಜ್ ಅವರು, ನಾಗ್ಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>26 ವರ್ಷ ಗಾನವಿ ಅವರು, ರಾಮಮೂರ್ತಿ ನಗರದಲ್ಲಿರುವ ಪೋಷಕರ ಮನೆಯಲ್ಲಿ ಡಿಸೆಂಬರ್ 24ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದಾಗ್ಯೂ, ಅವರು ಮರುದಿನ (ಡಿ.25) ಮೃತಪಟ್ಟಿದ್ದರು.</p><p>ಗಾನವಿ ಆತ್ಮಹತ್ಯೆಗೆ ಯತ್ನಿಸಿದ ದಿನವೇ, ಸೂರಜ್ ಹಾಗೂ ಅವರ ತಾಯಿ ಜಯಂತಿ, ಸಹೋದರ ಸಂಜಯ್ ನಾಗ್ಪುರಕ್ಕೆ ತೆರಳಿ, ತಲೆಮರೆಸಿಕೊಂಡಿದ್ದರು.</p><p>ಗಾಜವಿ ಅವರ ಪೋಷಕರು ಹಾಗೂ ಸಂಬಂಧಿಕರು ವಿದ್ಯಾರಣ್ಯಪುರದಲ್ಲಿರುವ ಸೂರಜ್ ಅವರ ಮನೆ ಎದುರು ಶವವಿಟ್ಟು ಡಿಸೆಂಬರ್ 26ರಂದು ಪ್ರತಿಭಟನೆ ನಡೆಸಿ, ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.</p><p>ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ.</p><p>ಸೂರಜ್ ಅವರು ಡಿಪ್ಲೊಮಾ ಪದವಿ ಪಡೆದಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅಕ್ಟೋಬರ್ 29ರಂದು ಬೆಂಗಳೂರಿನಲ್ಲೇ ಗಾನವಿ ಅವರನ್ನು ವರಿಸಿದ್ದರು.</p>.ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಸಾವು: ಶವವಿಟ್ಟು ಪ್ರತಿಭಟನೆ.<p>'₹ 40 ಲಕ್ಷ ಖರ್ಚು ಮಾಡಿ ಅರಮನೆ ಮೈದಾನದಲ್ಲಿ ಆರತಕ್ಷತೆ ಮಾಡಲಾಗಿತ್ತು. ಅಲ್ಲದೆ, ದಂಪತಿಯನ್ನು ಶ್ರೀಲಂಕಾಕ್ಕೆ ಹನಿಮೂನ್ಗೂ ಕಳುಹಿಸಲಾಗಿತ್ತು. ಆದರೆ, ದಂಪತಿ ಐದನೇ ದಿನಕ್ಕೆ ವಾಪಸ್ ಬಂದಿದ್ದರು. ಈ ಸಂಬಂಧ ಸೂರಜ್ ಹಾಗೂ ಅವರ ಕುಟುಂಬಸ್ಥರನ್ನು ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಿಮ್ಮ ಮಗಳನ್ನು ಕರೆದುಕೊಂಡು ಹೋಗಿ ಎಂದು ಬೆದರಿಸಿದ್ದರು. ಹೀಗಾಗಿ, ಗಾನವಿ ತನ್ನ ತವರು ಮನೆಗೆ ಬಂದಿದ್ದರು. ಬುಧವಾರ ಮಧ್ಯಾಹ್ನ ಕೊಠಡಿಗೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅದನ್ನು ಗಮನಿಸಿದ ಕುಟುಂಬದ ಸದಸ್ಯರು ಕೂಡಲೇ ನೇಣು ಕುಣಿಕೆಯಿಂದ ಆಕೆಯನ್ನು ಇಳಿಸಿ, ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು' ಎಂದು ಪೊಲೀಸರು ಹೇಳಿದ್ದರು.</p><p><strong>ಸೂರಜ್ ಶವ ಪತ್ತೆ<br></strong>ಪ್ರತಿಭಟನೆ ನಡೆದಿರುವುದು ಹಾಗೂ ಎಫ್ಐಆರ್ ದಾಖಲಾಗಿರುವುದರ ಬೆನ್ನಲ್ಲೇ, ನಾಗ್ಪುರದ ಹೋಟೆಲ್ ಕೊಠಡಿಯಲ್ಲಿ ಸೂರಜ್ ಶವ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಸೂರಜ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಹೋಟೆಲ್ ಸಿಬ್ಬಂದಿ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಮರಣಪತ್ರವೇನೂ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.</p><p>ನಾಗ್ಪುರದ ಸೋನೆಗಾಂವ್ ಪೊಲೀಸ್ ಠಾಣೆಯಲ್ಲಿ 'ಅಸಹಜ ಸಾವು' ಪ್ರಕರಣ ದಾಖಲಾಗಿದ್ದು, ಬೆಂಗಳೂರು ಪೊಲೀಸರೊಂದಿಗೆ ವಿವರ ಹಂಚಿಕೊಳ್ಳಲಾಗಿದೆ.</p><p>ಸೂರಜ್ ಕುಟುಂಬದವರು ಡಿಸೆಂಬರ್ 24ರಂದು ಸೋಮಲ್ವಾಡಾ ಪ್ರದೇಶದಲ್ಲಿರುವ ರಾಯಲ್ ವಿಲ್ಲಾ ಹೋಟೆಲ್ಗೆ ಬಂದಿದ್ದರು. ಸೂರಜ್ ಅವರು ಶುಕ್ರವಾರ ನಸುಕಿನಲ್ಲಿ (12.15ರ ಸುಮಾರಿಗೆ) ಆತ್ಮಹತ್ಯೆ ಮಾಡಿಕೊಂಡಿರಬಹುದು. ಅವರ ಸಹೋದರ ಮೊದಲು ಗಮನಿಸಿದ್ದರು ಎಂದು ಸೋನೆಗಾಂವ್ ಪೊಲೀಸರು ತಿಳಿಸಿದ್ದಾರೆ.</p> <p>ಗಾನವಿ ಸಾವಿನ ಬಳಿಕ ಸೂರಜ್ ಮಾನಸಿಕವಾಗಿ ಕುಗ್ಗಿದ್ದರು. ಆಕೆಯ ಪೋಷಕರು ಹಾಗೂ ಸಂಬಂಧಿಕರ ನಿಂದನೆಯಿಂದ ತೀವ್ರ ಒತ್ತಡಕ್ಕೆ ಸಿಲಕಿದ್ದರು ಎಂಬ ಆರೋಪಗಳು ಕೇಳಿಬಂದಿವೆ. ಆ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪತಿ ಹಾಗೂ ಅವರ ಕುಟುಂಬದವರ ಕಿರುಕುಳದಿಂದ ಬೇಸತ್ತು ಗಾನವಿ ಎಂಬವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಗುರುವಾರ ಬೆಂಗಳೂರಿನಲ್ಲಿ ವರದಿಯಾಗಿತ್ತು. ಈ ಸುದ್ದಿ ತಿಳಿದು ಆತಂಕಗೊಂಡ ಪತಿ ಸೂರಜ್ ಅವರು, ನಾಗ್ಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>26 ವರ್ಷ ಗಾನವಿ ಅವರು, ರಾಮಮೂರ್ತಿ ನಗರದಲ್ಲಿರುವ ಪೋಷಕರ ಮನೆಯಲ್ಲಿ ಡಿಸೆಂಬರ್ 24ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದಾಗ್ಯೂ, ಅವರು ಮರುದಿನ (ಡಿ.25) ಮೃತಪಟ್ಟಿದ್ದರು.</p><p>ಗಾನವಿ ಆತ್ಮಹತ್ಯೆಗೆ ಯತ್ನಿಸಿದ ದಿನವೇ, ಸೂರಜ್ ಹಾಗೂ ಅವರ ತಾಯಿ ಜಯಂತಿ, ಸಹೋದರ ಸಂಜಯ್ ನಾಗ್ಪುರಕ್ಕೆ ತೆರಳಿ, ತಲೆಮರೆಸಿಕೊಂಡಿದ್ದರು.</p><p>ಗಾಜವಿ ಅವರ ಪೋಷಕರು ಹಾಗೂ ಸಂಬಂಧಿಕರು ವಿದ್ಯಾರಣ್ಯಪುರದಲ್ಲಿರುವ ಸೂರಜ್ ಅವರ ಮನೆ ಎದುರು ಶವವಿಟ್ಟು ಡಿಸೆಂಬರ್ 26ರಂದು ಪ್ರತಿಭಟನೆ ನಡೆಸಿ, ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.</p><p>ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ.</p><p>ಸೂರಜ್ ಅವರು ಡಿಪ್ಲೊಮಾ ಪದವಿ ಪಡೆದಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅಕ್ಟೋಬರ್ 29ರಂದು ಬೆಂಗಳೂರಿನಲ್ಲೇ ಗಾನವಿ ಅವರನ್ನು ವರಿಸಿದ್ದರು.</p>.ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಸಾವು: ಶವವಿಟ್ಟು ಪ್ರತಿಭಟನೆ.<p>'₹ 40 ಲಕ್ಷ ಖರ್ಚು ಮಾಡಿ ಅರಮನೆ ಮೈದಾನದಲ್ಲಿ ಆರತಕ್ಷತೆ ಮಾಡಲಾಗಿತ್ತು. ಅಲ್ಲದೆ, ದಂಪತಿಯನ್ನು ಶ್ರೀಲಂಕಾಕ್ಕೆ ಹನಿಮೂನ್ಗೂ ಕಳುಹಿಸಲಾಗಿತ್ತು. ಆದರೆ, ದಂಪತಿ ಐದನೇ ದಿನಕ್ಕೆ ವಾಪಸ್ ಬಂದಿದ್ದರು. ಈ ಸಂಬಂಧ ಸೂರಜ್ ಹಾಗೂ ಅವರ ಕುಟುಂಬಸ್ಥರನ್ನು ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಿಮ್ಮ ಮಗಳನ್ನು ಕರೆದುಕೊಂಡು ಹೋಗಿ ಎಂದು ಬೆದರಿಸಿದ್ದರು. ಹೀಗಾಗಿ, ಗಾನವಿ ತನ್ನ ತವರು ಮನೆಗೆ ಬಂದಿದ್ದರು. ಬುಧವಾರ ಮಧ್ಯಾಹ್ನ ಕೊಠಡಿಗೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅದನ್ನು ಗಮನಿಸಿದ ಕುಟುಂಬದ ಸದಸ್ಯರು ಕೂಡಲೇ ನೇಣು ಕುಣಿಕೆಯಿಂದ ಆಕೆಯನ್ನು ಇಳಿಸಿ, ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು' ಎಂದು ಪೊಲೀಸರು ಹೇಳಿದ್ದರು.</p><p><strong>ಸೂರಜ್ ಶವ ಪತ್ತೆ<br></strong>ಪ್ರತಿಭಟನೆ ನಡೆದಿರುವುದು ಹಾಗೂ ಎಫ್ಐಆರ್ ದಾಖಲಾಗಿರುವುದರ ಬೆನ್ನಲ್ಲೇ, ನಾಗ್ಪುರದ ಹೋಟೆಲ್ ಕೊಠಡಿಯಲ್ಲಿ ಸೂರಜ್ ಶವ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಸೂರಜ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಹೋಟೆಲ್ ಸಿಬ್ಬಂದಿ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಮರಣಪತ್ರವೇನೂ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.</p><p>ನಾಗ್ಪುರದ ಸೋನೆಗಾಂವ್ ಪೊಲೀಸ್ ಠಾಣೆಯಲ್ಲಿ 'ಅಸಹಜ ಸಾವು' ಪ್ರಕರಣ ದಾಖಲಾಗಿದ್ದು, ಬೆಂಗಳೂರು ಪೊಲೀಸರೊಂದಿಗೆ ವಿವರ ಹಂಚಿಕೊಳ್ಳಲಾಗಿದೆ.</p><p>ಸೂರಜ್ ಕುಟುಂಬದವರು ಡಿಸೆಂಬರ್ 24ರಂದು ಸೋಮಲ್ವಾಡಾ ಪ್ರದೇಶದಲ್ಲಿರುವ ರಾಯಲ್ ವಿಲ್ಲಾ ಹೋಟೆಲ್ಗೆ ಬಂದಿದ್ದರು. ಸೂರಜ್ ಅವರು ಶುಕ್ರವಾರ ನಸುಕಿನಲ್ಲಿ (12.15ರ ಸುಮಾರಿಗೆ) ಆತ್ಮಹತ್ಯೆ ಮಾಡಿಕೊಂಡಿರಬಹುದು. ಅವರ ಸಹೋದರ ಮೊದಲು ಗಮನಿಸಿದ್ದರು ಎಂದು ಸೋನೆಗಾಂವ್ ಪೊಲೀಸರು ತಿಳಿಸಿದ್ದಾರೆ.</p> <p>ಗಾನವಿ ಸಾವಿನ ಬಳಿಕ ಸೂರಜ್ ಮಾನಸಿಕವಾಗಿ ಕುಗ್ಗಿದ್ದರು. ಆಕೆಯ ಪೋಷಕರು ಹಾಗೂ ಸಂಬಂಧಿಕರ ನಿಂದನೆಯಿಂದ ತೀವ್ರ ಒತ್ತಡಕ್ಕೆ ಸಿಲಕಿದ್ದರು ಎಂಬ ಆರೋಪಗಳು ಕೇಳಿಬಂದಿವೆ. ಆ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>