<p><strong>ಬೆಂಗಳೂರು</strong>: ರಾಜಗೋಪಾಲನಗರದ ಬಳಿಯ ಲವಕುಶ ನಗರದಲ್ಲಿ ದುಷ್ಕರ್ಮಿಗಳಿಂದ ಹಲ್ಲೆಯಿಂದ ಗಾಯಗೊಂಡಿದ್ದ ಅರುಣ್ಕುಮಾರ್ (24) ಅವರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಅರುಣ್ಕುಮಾರ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಕಾರ್ತಿಕ್, ಕುಶಾಲ್ ಮತು ದರ್ಶನ್ ಎಂಬುವರನ್ನು ಬಂಧಿಸಲಾಗಿದೆ. ಲವಕುಶನಗರದ ಅರುಣ್ಕುಮಾರ್ ಅವರು ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.</p>.<p>ಜುಲೈ 19ರಂದು ಸ್ನೇಹಿತ ರೋಹಿತ್ ಅವರ ಜತೆಗೆ ಪಾನಿಪುರಿ ತಿನ್ನಲು ಅರುಣ್ಕುಮಾರ್ ಹೋಗಿದ್ದರು. ಆ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಅರುಣ್ಕುಮಾರ್ ಅವರ ಮೇಲೆ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅರುಣ್ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಲವಕುಶ ನಗರದ ಆರೋಪಿಗಳು ಪಾನಮತ್ತರಾಗಿ ಅರುಣ್ಕುಮಾರ್ ಮತ್ತು ರೋಹಿತ್ನ ಜತೆಗೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜಗೋಪಾಲನಗರದ ಬಳಿಯ ಲವಕುಶ ನಗರದಲ್ಲಿ ದುಷ್ಕರ್ಮಿಗಳಿಂದ ಹಲ್ಲೆಯಿಂದ ಗಾಯಗೊಂಡಿದ್ದ ಅರುಣ್ಕುಮಾರ್ (24) ಅವರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಅರುಣ್ಕುಮಾರ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಕಾರ್ತಿಕ್, ಕುಶಾಲ್ ಮತು ದರ್ಶನ್ ಎಂಬುವರನ್ನು ಬಂಧಿಸಲಾಗಿದೆ. ಲವಕುಶನಗರದ ಅರುಣ್ಕುಮಾರ್ ಅವರು ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.</p>.<p>ಜುಲೈ 19ರಂದು ಸ್ನೇಹಿತ ರೋಹಿತ್ ಅವರ ಜತೆಗೆ ಪಾನಿಪುರಿ ತಿನ್ನಲು ಅರುಣ್ಕುಮಾರ್ ಹೋಗಿದ್ದರು. ಆ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಅರುಣ್ಕುಮಾರ್ ಅವರ ಮೇಲೆ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅರುಣ್ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಲವಕುಶ ನಗರದ ಆರೋಪಿಗಳು ಪಾನಮತ್ತರಾಗಿ ಅರುಣ್ಕುಮಾರ್ ಮತ್ತು ರೋಹಿತ್ನ ಜತೆಗೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>