<p><strong>ಬೆಂಗಳೂರು</strong>: ರಾಜ್ಯಪಾಲರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ನಗರದ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾನುವಾರ 30 ನಿಮಿಷ ಸಾರ್ವಜನಿಕ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಈ ವೇಳೆ ಆಕ್ರೋಶಗೊಂಡ ವ್ಯಕ್ತಿಯೊಬ್ಬರು, ‘ಗರ್ಭಿಣಿ ಪತ್ನಿ ವಾಹನದೊಳಗೆ ಸಿಲುಕಿಕೊಂಡಿದ್ದಾಳೆ, ಹೋಗಲು ದಾರಿಬಿಡಿ’ ಎಂದು ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದಾರೆ.</p><p>ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಕುಳಿತು, ಸಂಚಾರ ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಪರ–ವಿರೋಧ ಚರ್ಚೆಗಳು ಆರಂಭವಾಗಿವೆ. ಈಗಾಗಲೇ ವಿಐಪಿ ಸಂಸ್ಕೃತಿಯಿಂದಾಗಿ ಬೆಂಗಳೂರಿನ ರಸ್ತೆಗಳು ಇಕ್ಕಟ್ಟಾಗಿವೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. </p>.<p>ಬೆಂಗಳೂರು ನಗರ ಸಂಚಾರ ಪೊಲೀಸರು ಹಳೇ ವಿಮಾನ ನಿಲ್ದಾಣ ರಸ್ತೆಯನ್ನು ಭಾನುವಾರ ಅರ್ಧ ಗಂಟೆ ಸಂಪೂರ್ಣವಾಗಿ ಬಂದ್ ಮಾಡಿದ್ದರು. ರಸ್ತೆಯ ಈ ಭಾಗದಲ್ಲಿ ಈಗಾಗಲೇ ಅಂಡರ್ಪಾಸ್ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಓಡಾಡಲು ಇಕ್ಕಟ್ಟಾಗಿದೆ. ಇದರ ಮಧ್ಯೆ ಇದ್ದಕ್ಕಿದ್ದ ಹಾಗೆ ನಿರ್ಬಂಧ ವಿಧಿಸಿದ್ದರ ಪರಿಣಾಮ ದಟ್ಟಣೆ ಉಂಟಾಗಿ, ನೂರಾರು ಪ್ರಯಾಣಿಕರು ಪರದಾಡಬೇಕಾಯಿತು.</p><p>ರಸ್ತೆಯಲ್ಲಿ ಕುಳಿತಿದ್ದ ವ್ಯಕ್ತಿಯ ಬಳಿ ಪೊಲೀಸರು, ‘ಎದ್ದೇಳುತ್ತೀಯಾ, ಇಲ್ಲ ಬೇರೆ ಕೆಲಸ ಮಾಡಬೇಕಾ’ ಎಂದು ಗದರಿದ್ದಾರೆ. ಇದಕ್ಕೆ ಉತ್ತರಿಸಿದ ವ್ಯಕ್ತಿ, ‘ಸರ್ ನನ್ನ ಪತ್ನಿ ಗರ್ಭಿಣಿ, ಕಾರಿನಲ್ಲಿ ಕುಳಿತು ಒದ್ದಾಡುತ್ತಿದ್ದಾರೆ, ದಾರಿ ಬಿಡಿ’ ಎಂದು ಕಿರುಚಿದ್ದಾರೆ, ಇದಕ್ಕೆ ಮತ್ತೆ ಪೊಲೀಸರು ‘ 2 ನಿಮಿಷ ಹೊರಗೆ ನಿಲ್ಲಿ’ ಎಂದಿದ್ದಾರೆ. </p><p>ಈ ಸಂಭಾಷಣೆಯ ದೃಶ್ಯವನ್ನು ಸಾರ್ವಜನಿಕರು ವಿಡಿಯೊ ಮಾಡಿದ್ದಾರೆ. ಸದ್ಯ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿದ್ದು, ವೈದ್ಯಕೀಯ ತುರ್ತು ಇದ್ದಾಗಲೂ ಹೀಗೆ ರಸ್ತೆ ನಿರ್ಬಂಧಿಸುವುದು ಎಷ್ಟು ಸರಿ ಎಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯಪಾಲರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ನಗರದ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾನುವಾರ 30 ನಿಮಿಷ ಸಾರ್ವಜನಿಕ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಈ ವೇಳೆ ಆಕ್ರೋಶಗೊಂಡ ವ್ಯಕ್ತಿಯೊಬ್ಬರು, ‘ಗರ್ಭಿಣಿ ಪತ್ನಿ ವಾಹನದೊಳಗೆ ಸಿಲುಕಿಕೊಂಡಿದ್ದಾಳೆ, ಹೋಗಲು ದಾರಿಬಿಡಿ’ ಎಂದು ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದಾರೆ.</p><p>ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಕುಳಿತು, ಸಂಚಾರ ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಪರ–ವಿರೋಧ ಚರ್ಚೆಗಳು ಆರಂಭವಾಗಿವೆ. ಈಗಾಗಲೇ ವಿಐಪಿ ಸಂಸ್ಕೃತಿಯಿಂದಾಗಿ ಬೆಂಗಳೂರಿನ ರಸ್ತೆಗಳು ಇಕ್ಕಟ್ಟಾಗಿವೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. </p>.<p>ಬೆಂಗಳೂರು ನಗರ ಸಂಚಾರ ಪೊಲೀಸರು ಹಳೇ ವಿಮಾನ ನಿಲ್ದಾಣ ರಸ್ತೆಯನ್ನು ಭಾನುವಾರ ಅರ್ಧ ಗಂಟೆ ಸಂಪೂರ್ಣವಾಗಿ ಬಂದ್ ಮಾಡಿದ್ದರು. ರಸ್ತೆಯ ಈ ಭಾಗದಲ್ಲಿ ಈಗಾಗಲೇ ಅಂಡರ್ಪಾಸ್ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಓಡಾಡಲು ಇಕ್ಕಟ್ಟಾಗಿದೆ. ಇದರ ಮಧ್ಯೆ ಇದ್ದಕ್ಕಿದ್ದ ಹಾಗೆ ನಿರ್ಬಂಧ ವಿಧಿಸಿದ್ದರ ಪರಿಣಾಮ ದಟ್ಟಣೆ ಉಂಟಾಗಿ, ನೂರಾರು ಪ್ರಯಾಣಿಕರು ಪರದಾಡಬೇಕಾಯಿತು.</p><p>ರಸ್ತೆಯಲ್ಲಿ ಕುಳಿತಿದ್ದ ವ್ಯಕ್ತಿಯ ಬಳಿ ಪೊಲೀಸರು, ‘ಎದ್ದೇಳುತ್ತೀಯಾ, ಇಲ್ಲ ಬೇರೆ ಕೆಲಸ ಮಾಡಬೇಕಾ’ ಎಂದು ಗದರಿದ್ದಾರೆ. ಇದಕ್ಕೆ ಉತ್ತರಿಸಿದ ವ್ಯಕ್ತಿ, ‘ಸರ್ ನನ್ನ ಪತ್ನಿ ಗರ್ಭಿಣಿ, ಕಾರಿನಲ್ಲಿ ಕುಳಿತು ಒದ್ದಾಡುತ್ತಿದ್ದಾರೆ, ದಾರಿ ಬಿಡಿ’ ಎಂದು ಕಿರುಚಿದ್ದಾರೆ, ಇದಕ್ಕೆ ಮತ್ತೆ ಪೊಲೀಸರು ‘ 2 ನಿಮಿಷ ಹೊರಗೆ ನಿಲ್ಲಿ’ ಎಂದಿದ್ದಾರೆ. </p><p>ಈ ಸಂಭಾಷಣೆಯ ದೃಶ್ಯವನ್ನು ಸಾರ್ವಜನಿಕರು ವಿಡಿಯೊ ಮಾಡಿದ್ದಾರೆ. ಸದ್ಯ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿದ್ದು, ವೈದ್ಯಕೀಯ ತುರ್ತು ಇದ್ದಾಗಲೂ ಹೀಗೆ ರಸ್ತೆ ನಿರ್ಬಂಧಿಸುವುದು ಎಷ್ಟು ಸರಿ ಎಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>