ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿನ ವಾರ್ಡ್ ಸಂಖ್ಯೆ 56ರಲ್ಲಿ ಇರುವ ಈ ಕೆರೆಯನ್ನು ಬಿಬಿಎಂಪಿಯ ಕೆರೆ ಅಭಿವೃದ್ಧಿ ವಿಭಾಗ ಹತ್ತು ತಿಂಗಳ ಹಿಂದೆ ಅಭಿವೃದ್ಧಿಪಡಿಸಿತ್ತು. ಆದರೆ, ಸಮರ್ಪಕ ನಿರ್ವಹಣೆ ಕೊರತೆಯಿಂದಾಗಿ ಮತ್ತೆ ದುಸ್ಥಿತಿಗೆ ತಲುಪಿದೆ. ‘ಈ ಕೆರೆಯ ಅಂಗಳದಲ್ಲಿ ವಾಯುವಿಹಾರ ಖುಷಿ ಎನಿಸುತ್ತಿತ್ತು. ಆದರೆ, ಈಗ ನಿರ್ವಹಣೆ ಸರಿಯಿಲ್ಲ’ ಎಂದು ಸ್ಥಳೀಯರು ದೂರುತ್ತಾರೆ.ಪ್ರತಿಕ್ರಿಯೆ ನೀಡಿದ ಪಾಲಿಕೆ ಸದಸ್ಯ ವಿ. ಸುರೇಶ್, ‘ಕೆರೆ ಅಭಿವೃದ್ಧಿಗೆ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಮತ್ತೆ ಕೆರೆಗೆ ಮತ್ತೆ ಭೇಟಿ ನೀಡಿ ಎಲ್ಲ ಸರಿಪಡಿಸಲಾಗುವುದು’ ಎಂದು ತಿಳಿಸಿದರು.