<p><strong>ಬೆಂಗಳೂರು:</strong> ಜೆ.ಪಿ. ನಗರ 8ನೇ ಹಂತದಲ್ಲಿ ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಬೆನ್ಜ್ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಬೈಕ್ ಸವಾರ ರಾಜೇಂದ್ರ (46) ಮೃತಪಟ್ಟಿದ್ದಾರೆ.</p>.<p>‘ಚಿಕ್ಕಲಸಂದ್ರ ನಿವಾಸಿ ರಾಜೇಂದ್ರ, ಗೊಟ್ಟಿಗೆರೆಯಲ್ಲಿ ಫ್ಯಾಬ್ರಿಕೇಷನ್ ಮಳಿಗೆ ಇಟ್ಟುಕೊಂಡಿದ್ದರು. ಕೋಣನಕುಂಟೆ ಕ್ರಾಸ್ನಿಂದ ಗೊಟ್ಟಿಗೆರೆಯತ್ತ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ತಿಳಿಸಿದರು.</p>.<p>‘ಬೆನ್ಜ್ ಕಾರಿನ ಚಾಲಕ, ಅತೀ ವೇಗವಾಗಿ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದ. ರಸ್ತೆಯಲ್ಲಿ ತೆರಳುತ್ತಿದ್ದ ರಾಜೇಂದ್ರ ಬೈಕ್ಗೆ ಗುದ್ದಿತ್ತು. ಬೈಕ್ನಿಂದ ಹಾರಿದ್ದ ರಾಜೇಂದ್ರ ಕಾರಿನ ಮೇಲೆ ಬಿದ್ದಿದ್ದರು. ಹಾಗೆಯೇ ಚಲಿಸಿದ್ದ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿತ್ತು.’</p>.<p>‘ತೀವ್ರ ಗಾಯಗೊಂಡಿದ್ದ ರಾಜೇಂದ್ರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ. ಕಾರಿನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೆ.ಪಿ. ನಗರ 8ನೇ ಹಂತದಲ್ಲಿ ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಬೆನ್ಜ್ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಬೈಕ್ ಸವಾರ ರಾಜೇಂದ್ರ (46) ಮೃತಪಟ್ಟಿದ್ದಾರೆ.</p>.<p>‘ಚಿಕ್ಕಲಸಂದ್ರ ನಿವಾಸಿ ರಾಜೇಂದ್ರ, ಗೊಟ್ಟಿಗೆರೆಯಲ್ಲಿ ಫ್ಯಾಬ್ರಿಕೇಷನ್ ಮಳಿಗೆ ಇಟ್ಟುಕೊಂಡಿದ್ದರು. ಕೋಣನಕುಂಟೆ ಕ್ರಾಸ್ನಿಂದ ಗೊಟ್ಟಿಗೆರೆಯತ್ತ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ತಿಳಿಸಿದರು.</p>.<p>‘ಬೆನ್ಜ್ ಕಾರಿನ ಚಾಲಕ, ಅತೀ ವೇಗವಾಗಿ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದ. ರಸ್ತೆಯಲ್ಲಿ ತೆರಳುತ್ತಿದ್ದ ರಾಜೇಂದ್ರ ಬೈಕ್ಗೆ ಗುದ್ದಿತ್ತು. ಬೈಕ್ನಿಂದ ಹಾರಿದ್ದ ರಾಜೇಂದ್ರ ಕಾರಿನ ಮೇಲೆ ಬಿದ್ದಿದ್ದರು. ಹಾಗೆಯೇ ಚಲಿಸಿದ್ದ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿತ್ತು.’</p>.<p>‘ತೀವ್ರ ಗಾಯಗೊಂಡಿದ್ದ ರಾಜೇಂದ್ರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ. ಕಾರಿನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>