ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ನಂಜಾಪುರ ನಿವಾಸಿ ಶಶಿಶೇಖರ್ ಎಂಬುವವರು ಕಟ್ಟಡೊಂದಕ್ಕೆ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದರು. ಎಇಇ ಅವರನ್ನು ಭೇಟಿಮಾಡಿದ್ದ ಅರ್ಜಿದಾರರು, ಮುಂದಿನ ಪ್ರಕ್ರಿಯೆ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಮಂಜೂರಾತಿ ನೀಡಲು ₹ 28,000 ಲಂಚ ಕೊಡುವಂತೆ ಆರೋಪಿ ಬೇಡಿಕೆ ಇಟ್ಟಿದ್ದರು. ಈ ಕುರಿತು ಅರ್ಜಿದಾರರು ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಘಟಕಕ್ಕೆ ದೂರು ಸಲ್ಲಿಸಿದ್ದರು.