‘ಕೊಳೆಗೇರಿ ಪ್ರದೇಶಕ್ಕೆ ಹೊಂದಿಕೊಂಡು ರಾಜಕಾಲುವೆ ಇದ್ದು, ಇಲ್ಲಿಯ ವಿದ್ಯುತ್ ತಂತಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಶುಕ್ರವಾರ ಸಹ ವಿದ್ಯುತ್ ತಂತಿ ತುಂಡರಿಸಿದ್ದರಿಂದಲೇ ಅಪ್ಪು ಮೃತಪಟ್ಟಿದ್ದಾರೆ. ಇವರ ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣವೆಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಬೆಸ್ಕಾಂ ಅಧಿಕಾರಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಬೇಕಿದೆ’ ಎಂದು ಹೇಳಿವೆ.