ಈ ಕಡತ ಆರೋಪಿ ಅಧಿಕಾರಿ ಬಳಿ ತಲುಪಿತ್ತು. ಅನುಮೋದನೆ ನೀಡಲು ₹ 5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ₹ 2,500 ನೀಡುವಂತೆ ಅರ್ಜಿದಾರರಿಗೆ ಸೂಚಿಸಿದ್ದರು. ಈ ಕುರಿತು ಗುತ್ತಿಗೆದಾರರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು. ಗುತ್ತಿಗೆದಾರನಿಂದ ಹಣ ಪಡೆಯುತ್ತಿದ್ದಾಗ ಗುರುವಾರ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು, ಜಗದೀಶ್ ಅವರನ್ನು ಬಂಧಿಸಿದ್ದಾರೆ.