<p><strong>ಬೆಂಗಳೂರು:</strong> ವಿದ್ಯುತ್ ಸಂಬಂಧಿತ ಕುಂದು-ಕೊರತೆಗಳ ಶೀಘ್ರ ಪರಿಹಾರಕ್ಕೆ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ‘ವಾಟ್ಸ್ಆ್ಯಪ್ ಸಹಾಯವಾಣಿ’ ಸಂಖ್ಯೆಗಳಿಗೆ ದೂರು ದಾಖಲಿಸಲು ಬೆಸ್ಕಾಂ ಮನವಿ ಮಾಡಿದೆ.</p><p>ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ‘ವಾಟ್ಸ್ ಆ್ಯಪ್’ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ನೀಡಬಹುದು. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ವೃತ್ತಗಳಿಗೆ 4 ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ವೃತ್ತಗಳಿಗೆ ತಲಾ ಒಂದು ‘ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.</p><p>ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿದ್ಯುತ್ ಸಂಬಂಧಿತ ಕುಂದು-ಕೊರತೆಗಳ ಶೀಘ್ರ ಪರಿಹಾರಕ್ಕೆ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ‘ವಾಟ್ಸ್ಆ್ಯಪ್ ಸಹಾಯವಾಣಿ’ ಸಂಖ್ಯೆಗಳಿಗೆ ದೂರು ದಾಖಲಿಸಲು ಬೆಸ್ಕಾಂ ಮನವಿ ಮಾಡಿದೆ.</p><p>ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ‘ವಾಟ್ಸ್ ಆ್ಯಪ್’ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ನೀಡಬಹುದು. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ವೃತ್ತಗಳಿಗೆ 4 ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ವೃತ್ತಗಳಿಗೆ ತಲಾ ಒಂದು ‘ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.</p><p>ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>