ಬುಧವಾರ ರಾಜೇಂದ್ರ ಚೋಳನ್ ಅವರು ಕೆಂಗೇರಿ, ರಾಜರಾಜೇಶ್ವರಿ ನಗರ, ಕೋರಮಂಗಲ, ಎಚ್ ಎಸ್ಆರ್ ಬಡಾವಣೆ ಮತ್ತು ಇಂದಿರಾನಗರ ಬೆಸ್ಕಾಂ ವಲಯಗಳಿಗೆ ಖುದ್ದು ಭೇಟಿ ನೀಡಿ ವಿದ್ಯುತ್ ಪೂರೈಕೆ ಸರಿಪಡಿಸುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ವಿದ್ಯುತ್ ವ್ಯತ್ಯಯ ವಿವರ: ಬೆಸ್ಕಾಂ ಸಹಾಯವಾಣಿ 1912ಗೆ ಮಂಗಳವಾರ ರಾತ್ರಿ 13734 ಕರೆಗಳು ಬಂದಿವೆ. ಬೆಸ್ಕಾಂ ಸಿಬ್ಬಂದಿ ಬುಧವಾರ ಬೆಳಗ್ಗೆ ವೇಳೆಗೆ ಎಲ್ಲ ಫೀಡರ್ಗಳ ದುರಸ್ತಿ ಮಾಡಿ ವಿದ್ಯುತ್ ಪೂರೈಕೆ ವ್ಯವಸ್ಥೆ ಸರಿಪಡಿಸಿದ್ದಾರೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.