ಬೆಸ್ಕಾಂ ಜಾಲಹಳ್ಳಿ ವಿಭಾಗ ವ್ಯಾಪ್ತಿಯಲ್ಲಿನ ವಿದ್ಯಾರಣ್ಯಪುರ, ಕೊಡಿಗೇಹಳ್ಳಿ, ವಿರೂಪಾಕ್ಷಾಪುರ, ಎಂ.ಎಸ್. ಪಾಳ್ಯದಲ್ಲಿ ನಡೆಯುತ್ತಿರುವ ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ಬೆಸ್ಕಾಂಗೆ ದೂರು ನೀಡಿದ್ದರು. ಈ ಸಂಬಂಧ ‘ಪ್ರಜಾವಾಣಿ’ ಸ್ಥಳಕ್ಕೆ ಭೇಟಿ ನೀಡಿ ವಿಸ್ತೃತ ವರದಿಯನ್ನು ಡಿ.21ರಂದು ಪ್ರಕಟಿಸಿತ್ತು.