<p><strong>ಬೆಂಗಳೂರು:</strong> ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು.</p>.<p>ಬಿಟಿಎಂ ಬಡಾಣೆಯಲ್ಲಿ ₹3.17 ಕೋಟಿ ವೆಚ್ಚದಲ್ಲಿ ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. 7431.50 ಚದರ ಅಡಿ ಅಳತೆಯಲ್ಲಿ ನಿರ್ಮಿಸಿರುವ ಈ ಕಟ್ಟಡದಲ್ಲಿ ಮೂರು ಅಂತಸ್ತುಗಳಿವೆ.</p>.<p>ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ‘ಬಿಟಿಎಂ ಲೇಔಟ್ ಉಪ ವಿಭಾಗದಲ್ಲಿ 83,000ಕ್ಕೂ ಹೆಚ್ಚಿನ ಸಂಪರ್ಕಗಳಿವೆ. ಸಾರ್ವಜನಿಕರಿಗೆ ನೂತನ ಉಪವಿಭಾಗ ಕೇಂದ್ರವು ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ‘ ಎಂದು ಹೇಳಿದರು.<br /><br /> ‘ಬೆಸ್ಕಾಂ ವಿದ್ಯುತ್ ಪೂರೈಕೆ ಜತೆಗೆ ಸ್ವಂತ ಮೂಲಸೌಕರ್ಯ ಕಲ್ಪಿಸಿಕೊಳ್ಳುವುದಕ್ಕೂ ಒತ್ತು ನೀಡುತ್ತಿದೆ. ಇದರಿಂದ ಭವಿಷ್ಯದಲ್ಲಿ ಆರ್ಥಿಕವಾಗಿಯೂ ಹೊರೆ ತಗ್ಗಲಿದೆ. ಎಲ್ಲಾ ಮೂಲ ಸೌಕರ್ಯಗಳಿರುವುದರಿಂದ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತವಾಗಿ ಸೇವೆ ಲಭ್ಯವಾಗಲಿದೆ‘ ಎಂದು ತಿಳಿಸಿದರು.<br /><br /> ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎನ್. ಶಿವಶಂಕರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು.</p>.<p>ಬಿಟಿಎಂ ಬಡಾಣೆಯಲ್ಲಿ ₹3.17 ಕೋಟಿ ವೆಚ್ಚದಲ್ಲಿ ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. 7431.50 ಚದರ ಅಡಿ ಅಳತೆಯಲ್ಲಿ ನಿರ್ಮಿಸಿರುವ ಈ ಕಟ್ಟಡದಲ್ಲಿ ಮೂರು ಅಂತಸ್ತುಗಳಿವೆ.</p>.<p>ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ‘ಬಿಟಿಎಂ ಲೇಔಟ್ ಉಪ ವಿಭಾಗದಲ್ಲಿ 83,000ಕ್ಕೂ ಹೆಚ್ಚಿನ ಸಂಪರ್ಕಗಳಿವೆ. ಸಾರ್ವಜನಿಕರಿಗೆ ನೂತನ ಉಪವಿಭಾಗ ಕೇಂದ್ರವು ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ‘ ಎಂದು ಹೇಳಿದರು.<br /><br /> ‘ಬೆಸ್ಕಾಂ ವಿದ್ಯುತ್ ಪೂರೈಕೆ ಜತೆಗೆ ಸ್ವಂತ ಮೂಲಸೌಕರ್ಯ ಕಲ್ಪಿಸಿಕೊಳ್ಳುವುದಕ್ಕೂ ಒತ್ತು ನೀಡುತ್ತಿದೆ. ಇದರಿಂದ ಭವಿಷ್ಯದಲ್ಲಿ ಆರ್ಥಿಕವಾಗಿಯೂ ಹೊರೆ ತಗ್ಗಲಿದೆ. ಎಲ್ಲಾ ಮೂಲ ಸೌಕರ್ಯಗಳಿರುವುದರಿಂದ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತವಾಗಿ ಸೇವೆ ಲಭ್ಯವಾಗಲಿದೆ‘ ಎಂದು ತಿಳಿಸಿದರು.<br /><br /> ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎನ್. ಶಿವಶಂಕರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>