ಹೆಸ್ಕಾಂ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಹಾನಿಗೊಳಗಾಗಿರುವ ವಿದ್ಯುತ್ ಕಂಬಗಳು, ತಂತಿಗಳು ಮತ್ತು ಪರಿವರ್ತಕಗಳನ್ನು ತ್ವರಿತವಾಗಿ ದುರಸ್ತಿಗೊಳಿಸುವ ಕಾರ್ಯದಲ್ಲಿ ಈ ತಂಡ ಕೈಜೋಡಿಸಲಿದೆ.ಹೆಸ್ಕಾಂ ಮನವಿಗೆ ಮೇರೆಗೆ ಬೆಸ್ಕಾಂ ಈ ಕಾರ್ಯಕ್ಕೆ ಮುಂದಾಗಿದ್ದು, ಎರಡು ವಾರ ಈ ತಂಡವು ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.