ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥಸ್ವಾಮೀಜಿ ಮಾತನಾಡಿ, ‘ಕೋವಿಡ್ ಸೋಂಕಿತರ ಆರೈಕೆಗೆ ಆಸ್ಪತ್ರೆಯ ಶೇ 75ರಷ್ಟು ಹಾಸಿಗೆ ಮೀಸಲಿಟ್ಟಿದ್ದೇವೆ. ಎಲ್ಲೆಡೆ ಆಮ್ಲಜನಕ ಕೊರತೆ ಇರುವ ಕಾರಣ, 13 ಕಿಲೋ ಲೀಟರ್ ಸಾಮರ್ಥ್ಯದ ಆಮ್ಲಜನಕ ಟ್ಯಾಂಕ್ ಅಳವಡಿಸಲಾಗಿದೆ. ಕೋವಿಡ್ ನಿಯಮ ಸರಿಯಾಗಿ ಪಾಲಿಸದ ಕಾರಣ ಸೋಂಕು ಹೆಚ್ಚಾಗಿದೆ. ಮುಂದಾದರೂ ಜನರು ಮಾಸ್ಕ್ ಧರಿಸುವ ಮತ್ತು ಅಂತರ ಕಾಪಾಡುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ತಿಳಿಸಿದರು.