<p><strong>ಕೆಂಗೇರಿ:</strong> ಧಾರ್ಮಿಕ, ವೈಜ್ಞಾನಿಕ ಮನೋಭಾವ ಎರಡನ್ನೂ ಹೊಂದಿದ್ದ ಬಾಲಗಂಗಾಧರನಾಥ ಸ್ವಾಮೀಜಿ, ಉದಾತ್ತ ಚಿಂತನೆಯೊಂದಿಗೆ ಬಿಜಿಎಸ್ ಶಿಕ್ಷಣ ಸಂಸ್ಥೆಗೆ ಅಡಿಗಲ್ಲು ಹಾಕಿದ್ದರು. ನೂರಾರು ವಿವಿಧ ಬಗೆಯ ಶಾಲೆಗಳೊಂದಿಗೆ ಇಂದು ಬೃಹದಾಕಾರವಾಗಿ ಬೆಳೆದಿರುವ ಈ ಸಂಸ್ಥೆಯು ಜ್ಞಾನ, ವಿಜ್ಞಾನ, ಸಂಸ್ಕಾರ ಹರಡುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಬಿಜಿಎಸ್ ಶೈಕ್ಷಣಿಕ ಸಂಸ್ಥೆ ಸಮೂಹ ವತಿಯಿಂದ ಬಿಜಿಎಸ್ ಹೆಲ್ತ್ ಸಿಟಿ ಯಲ್ಲಿ ಆಯೋಜಿಸಲಾಗಿದ್ದ 14ನೇ ಸಂಸ್ಥಾಪಕರ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವ್-2022 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಸಾಧ್ಯವೆಂಬುದು ಮನದಲ್ಲಿ ಅಡಗಿರುವ ನಕಾರಾತ್ಮಕ ಭಾವನೆಯಷ್ಟೆ. ದಿಟ್ಟ ನಿರ್ಧಾರದೊಂದಿಗೆ ಮುಂದಡಿಯಿಟ್ಟರೆ ಯಾವುದೇ ಕಾರ್ಯ ಅಸಾಧ್ಯವಲ್ಲ ಎಂದರು.</p>.<p>ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ‘ಹಣದಿಂದ, ಕರ್ಮದಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ. ಪ್ರತಿಫಲಾಪೇಕ್ಷೆಯಿಲ್ಲದೆ ಮಾಡುವ ಕೆಲಸ, ದಾನಗಳಿಂದ ಭಗವಂತನನ್ನು ಕಾಣಲು ಸಾಧ್ಯ’ ಎಂದು ಹೇಳಿದರು.</p>.<p>‘ಹಲವು ದಶಕಗಳಿಂದ ಆದಿಚುಂಚನಗಿರಿ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇನೆ. ಬಿಜಿಎಸ್ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಬದುಕು ಕಟ್ಟಿಕೊಂಡಿದ್ದಾರೆ. ಹಲವಾರು ದೃಷ್ಞಿ ಹೀನ ಮಕ್ಕಳ ಬಾಳಿಗೂ ಬಿಜಿಎಸ್ ಶಿಕ್ಷಣ ಸಂಸ್ಥೆಯು ಬೆಳಕಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ಶ್ಲಾಘಿಸಿದರು.</p>.<p>ನಟಿ ಹಾಗೂ ಮಾಜಿ ಸಂಸದೆ ರಮ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ‘ಮದುವೆಗೆ ಪ್ರೀತಿ ಕಾರಣವಾಗಿರಬೇಕು. ಒತ್ತಡದಿಂದ ವಿವಾಹ ಬಂಧನಕ್ಕೆ ಒಳಗಾಗುವುದು ನೆಮ್ಮದಿ ತರುವುದಿಲ್ಲ’ ಎಂದು ತಿಳಿಸಿದರು.</p>.<p>ಇದೇ ವೇಳೆಯಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶ ನಾಥ ಸ್ವಾಮೀಜಿ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್. ಶಾಸಕ ರಾಜೂಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ಧಾರ್ಮಿಕ, ವೈಜ್ಞಾನಿಕ ಮನೋಭಾವ ಎರಡನ್ನೂ ಹೊಂದಿದ್ದ ಬಾಲಗಂಗಾಧರನಾಥ ಸ್ವಾಮೀಜಿ, ಉದಾತ್ತ ಚಿಂತನೆಯೊಂದಿಗೆ ಬಿಜಿಎಸ್ ಶಿಕ್ಷಣ ಸಂಸ್ಥೆಗೆ ಅಡಿಗಲ್ಲು ಹಾಕಿದ್ದರು. ನೂರಾರು ವಿವಿಧ ಬಗೆಯ ಶಾಲೆಗಳೊಂದಿಗೆ ಇಂದು ಬೃಹದಾಕಾರವಾಗಿ ಬೆಳೆದಿರುವ ಈ ಸಂಸ್ಥೆಯು ಜ್ಞಾನ, ವಿಜ್ಞಾನ, ಸಂಸ್ಕಾರ ಹರಡುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಬಿಜಿಎಸ್ ಶೈಕ್ಷಣಿಕ ಸಂಸ್ಥೆ ಸಮೂಹ ವತಿಯಿಂದ ಬಿಜಿಎಸ್ ಹೆಲ್ತ್ ಸಿಟಿ ಯಲ್ಲಿ ಆಯೋಜಿಸಲಾಗಿದ್ದ 14ನೇ ಸಂಸ್ಥಾಪಕರ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವ್-2022 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಸಾಧ್ಯವೆಂಬುದು ಮನದಲ್ಲಿ ಅಡಗಿರುವ ನಕಾರಾತ್ಮಕ ಭಾವನೆಯಷ್ಟೆ. ದಿಟ್ಟ ನಿರ್ಧಾರದೊಂದಿಗೆ ಮುಂದಡಿಯಿಟ್ಟರೆ ಯಾವುದೇ ಕಾರ್ಯ ಅಸಾಧ್ಯವಲ್ಲ ಎಂದರು.</p>.<p>ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ‘ಹಣದಿಂದ, ಕರ್ಮದಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ. ಪ್ರತಿಫಲಾಪೇಕ್ಷೆಯಿಲ್ಲದೆ ಮಾಡುವ ಕೆಲಸ, ದಾನಗಳಿಂದ ಭಗವಂತನನ್ನು ಕಾಣಲು ಸಾಧ್ಯ’ ಎಂದು ಹೇಳಿದರು.</p>.<p>‘ಹಲವು ದಶಕಗಳಿಂದ ಆದಿಚುಂಚನಗಿರಿ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇನೆ. ಬಿಜಿಎಸ್ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಬದುಕು ಕಟ್ಟಿಕೊಂಡಿದ್ದಾರೆ. ಹಲವಾರು ದೃಷ್ಞಿ ಹೀನ ಮಕ್ಕಳ ಬಾಳಿಗೂ ಬಿಜಿಎಸ್ ಶಿಕ್ಷಣ ಸಂಸ್ಥೆಯು ಬೆಳಕಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ಶ್ಲಾಘಿಸಿದರು.</p>.<p>ನಟಿ ಹಾಗೂ ಮಾಜಿ ಸಂಸದೆ ರಮ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ‘ಮದುವೆಗೆ ಪ್ರೀತಿ ಕಾರಣವಾಗಿರಬೇಕು. ಒತ್ತಡದಿಂದ ವಿವಾಹ ಬಂಧನಕ್ಕೆ ಒಳಗಾಗುವುದು ನೆಮ್ಮದಿ ತರುವುದಿಲ್ಲ’ ಎಂದು ತಿಳಿಸಿದರು.</p>.<p>ಇದೇ ವೇಳೆಯಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶ ನಾಥ ಸ್ವಾಮೀಜಿ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್. ಶಾಸಕ ರಾಜೂಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>