ಕೆಂಗೇರಿ: ಧಾರ್ಮಿಕ, ವೈಜ್ಞಾನಿಕ ಮನೋಭಾವ ಎರಡನ್ನೂ ಹೊಂದಿದ್ದ ಬಾಲಗಂಗಾಧರನಾಥ ಸ್ವಾಮೀಜಿ, ಉದಾತ್ತ ಚಿಂತನೆಯೊಂದಿಗೆ ಬಿಜಿಎಸ್ ಶಿಕ್ಷಣ ಸಂಸ್ಥೆಗೆ ಅಡಿಗಲ್ಲು ಹಾಕಿದ್ದರು. ನೂರಾರು ವಿವಿಧ ಬಗೆಯ ಶಾಲೆಗಳೊಂದಿಗೆ ಇಂದು ಬೃಹದಾಕಾರವಾಗಿ ಬೆಳೆದಿರುವ ಈ ಸಂಸ್ಥೆಯು ಜ್ಞಾನ, ವಿಜ್ಞಾನ, ಸಂಸ್ಕಾರ ಹರಡುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.